Homeಕರ್ನಾಟಕಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

- Advertisement -
- Advertisement -

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಈ ಬಾರಿಯ ಗೌರಿ ಗಣೇಶ ಹಬ್ಬ ಹಲವು ವಿಶೇಷತೆಗೆ ಕಾರಣವಾಗಿದೆ. ಮಹಿಳೆಯರು ಪೂಜೆ ಮಾಡಬಾರದು, ಗರ್ಭಗುಡಿ ಪ್ರವೇಶ ಮಾಡಬಾರದು ಎಂಬ ಹಲವು ವಾದಗಳಿವೆ. ಮಹಿಳೆಯರ ಮುಟ್ಟನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವ ಭಾರತದಂತಹ ದೇಶದಲ್ಲಿ ಮಹಿಳೆಯರು ದೇವಾಲಯದ ಪ್ರವೇಶ ಮಾಡುವುದನ್ನು ನಿಷೇಧಿಸಿರುವ, ಕೆಲ ಪ್ರಕರಣಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೂ ಏರಿರುವ ಸನ್ನಿವೇಶಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ.

ಮನುಷ್ಯ ನಿರ್ಮಿತ ಈ ಚೌಕಟ್ಟಗಳನ್ನು ತಿಳಿಯದ, ಅಸಮಾನತೆಯನ್ನು ಆಚರಣೆ ಮಾಡದ, ನಿಶ್ಕಲ್ಮಶ ಮುಗ್ದ ಮನಸ್ಸಿನ ಈ ಗ್ರಾಮದ ಪುಟಾಣಿ ಹೆಣ್ಣಮಕ್ಕಳು ಗ್ರಾಮದ ಮೂಲೆಯೊಂದರಲ್ಲಿ ಗೌರಿ ಗಣೇಶ ಕೂರಿಸಿದ್ದಾರೆ. ಗಂಡಸರೇ ಸೇರಿ ಪೆಂಡಾಲ್ ಕಟ್ಟಿ, ಕುಣಿದು ಕುಪ್ಪಳಿಸಿ ಹಬ್ಬ ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಅಪವಾದದಂತೆ ಇಲ್ಲಿನ ಹುಡುಗೀಯರೇ ಸೇರಿ ಗ್ರಾಮದ ಮಟ್ಟಕ್ಕೆ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಡುಗುಡು ಅಂಕಲ್ ಖ್ಯಾತಿಯ ಮೊಹಮ್ಮದ್ ಅಣ್ಣನ ಗಣಪತಿ ಪ್ರೀತಿ

ರಾಜ್ಯದಲ್ಲೀಗ ಹಬ್ಬ-ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚಾಗಿದೆ. ಗಲಭೆಗಳಲ್ಲಿ ಯುವಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಹೋದರ ಧರ್ಮೀಯರ ಮೇಲೆ ದ್ವೇಷ ಹರಡಿಸುತ್ತಿರುವ ಹೊತ್ತಲ್ಲಿ ಗಾರೆ ಕೆಲಸದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಅವರು ಬೆಂಕಿಕೆರೆಯಲ್ಲಿ ಈ ಮಕ್ಕಳ ಜೊತೆ ಸೇರಿ ಪ್ರೀತಿಯನ್ನು ಹಂಚುತ್ತಿದ್ದಾರೆ.ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

 

ಮಕ್ಕಳ ಗಣಪತಿ ಪೆಂಡಾಲ್ ಅನ್ನು ಇವರೇ ಕಟ್ಟಿದ್ದು ಅಲ್ಲದೆ ಹಣ್ಣು ಸಿಹಿತಿನಿಸುಗಳನ್ನು ತಂದು ಕೊಟ್ಟಿದ್ದಾರೆ. ಗಣಪತಿಗೆ ಹಾರ ತರಲು ತಮ್ಮದೇ ಗಾಡಿಯಲ್ಲಿ 70 ಕಿ.ಮಿ. ದೂರದ ದಾವಣಗೆರೆಗೆ ಹೋಗಿ ಹೂವಿನ ಹಾರ ತಂದಿದ್ದಾರೆ. ಪೆಂಡಾಲ್ ಮತ್ತಷ್ಟು ಚೆನ್ನಾಗಿ ಕಾಣಲು ಲೈಟಿನ ಸರ, ಉಸ್ರುಬುಲ್ಡೆ (ಬಲೂನ್) ಗಳನ್ನು ಕಟ್ಟಿದ್ದಾರೆ. ಮಕ್ಕಳು ಪ್ರೀತಿಯಿಂದ ಭಾರತದ ಧ್ವಜವನ್ನೂ ಕಟ್ಟಿದ್ದಾರೆ.

ಇದನ್ನೂ ಓದಿ: ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಮೊಹಮ್ಮದ್ ಅವರು ಭಕ್ತಿಯಿಂದ ಗಣಪತಿಗೆ ಕೈ ಮುಗಿಯುತ್ತಾರೆ, ಮಂಗಳಾರತಿ- ತೀರ್ಥ ಪಡೆಯುತ್ತಾರೆ. ಮಕ್ಕಳೆಲ್ಲಾ ಸಂಜೆಯ ಮೇಲೆ ಮನೆಗೆ ಹೋದಾಗ ಗಣಪತಿಯ ಮುಂದೆ ಹಚ್ಚಿಟ್ಟುರವ ದೀಪ ಆರದಂತೆ ನೋಡಿಕೊಳ್ಳಲು ಅವರೇ ಪೆಂಡಾಪ್ ಮುಂದೆ ಮಲಗುತ್ತಿದ್ದಾರೆ.

“ನಿನಿಗ್ಯಾಕಣ್ಣ ಇದೆಲ್ಲಾ, ಈ ಮಕ್ಳು ಸುಮ್ಮನೆ ನಿಮ್ ದುಡ್ಡೆಲ್ಲಾ ಖರ್ಚು ಮಾಡಿಸ್ತಾರೆ ನೋಡಿ” ಅಂತ ಗ್ರಾಮಸ್ತರು ಹೇಳಿದ ಮಾತಿಗೆ, “ಹಬ್ಬ ಏನ್ ದಿನಾ ಬರಲ್ಲ, ಮಕ್ಳು ಎಷ್ಟು ಖುಷಿ ಆಗಿದ್ದಾರೆ ನೋಡಿ. ಏನ್ ಮೂರ್ನಾಕ್ ಸಾವ್ರ ಖರ್ಚಾಗುತ್ತಾ? ಆಗ್ಲಿ ಬಿಡಿ” ಎಂದು ದಿನಕ್ಕೆ 500 ರೂ. ಕೂಲಿ ಪಡೆಯುವ ಮೊಹಮ್ಮದ್ ಅವರು ಉತ್ತರಿಸುತ್ತಾರೆ. ಅಲ್ಲದೇ ಈ ಹಿಂದೆಯೂ ಗಣಪತಿ ಹಬ್ಬಗಳಲ್ಲಿ ತಾವು ಭಾಗಿಯಾಗಿದ್ದ ಅನುಭವಗಳನ್ನು ಅಭಿಮಾನದಿಂದ ಹಂಚಿಕೊಳ್ಳುತ್ತಾರೆ.

ಗಣಪತಿ ಪೆಂಡಾಲ್ ನ ವಿಶೇಷತೆಗಳೇನು?

ಗ್ರಾಮದಲ್ಲಿ ಸುಮಾರು 8 ಸಮುದಾಯಗಳಿವೆ, ಎಲ್ಲರೂ ತಮ್ಮ ತಮ್ಮ ಸಮುದಾಯದ ಸ್ನೇಹಿತರು ಸೇರಿಕೊಂಡು ಗಣಪತಿ ಕೂರಿಸುತ್ತಾರೆ. ಆದರೆ ಈ ಹೆಣ್ಣುಮಕ್ಕಳ ಗಣಪತಿ ಪೆಂಡಾಲ್ ನಲ್ಲಿ ಬಹುತೇಕ ಎಲ್ಲಾ ಸಮುದಾಯದ ಮಕ್ಕಳು ಸೇರಿಕೊಂಡು ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ದೇವರ ಮಂತ್ರಗಳು ತಿಳಿಯದ ಈ ಮಕ್ಕಳು ಕೈ ಮುಗಿದು ದೇಶಭಕ್ತಿ ಗೀತೆ ಮತ್ತು ನಾಡ ಗೀತೆಗಳನ್ನು ಹಾಡುತ್ತಾರೆ. ತಮ್ಮ ಟೀಚರ್ ಹೇಳಿಕೊಟ್ಟಿರುವ “ನಮ್ಮ ದೇಶವು ಪ್ರೀತಿಯ ಪ್ರತಿರೂಪವು” ಎನ್ನುವ ಹಾಡು ಗಮನ ಸೆಳೆಯುತ್ತಿದೆ. ಡಿಜೆ, ಡ್ರಮ್ ಸೆಟ್, ವಿಚಿತ್ರ ಚಿತ್ರಗೀತೆಗಳ ಯಾವ ಹಂಗು ಇಲ್ಲದೆ ತಮಗೆ ತಿಳಿದಷ್ಟು ಜಾನಪದ ಹಾಡುಗಳನ್ನು ಹಾಡುತ್ತಾ ಕುಣಿಯುತ್ತಾರೆ. ಬಂದವರಿಗೆ ಕಾರ ಮಂಡಿಕ್ಕಿ ಕೊಡುತ್ತಾರೆ.

ಒಟ್ಟಾರೆಯಾಗಿ ಗಲಭೆ, ದ್ವೇಷ ಅಸೂಯೆ, ಶ್ರೇಷ್ಠತೆ ಯಾವುದೂ ಇಲ್ಲದೆ ಪ್ರೀತಿ ಸೌಹಾರ್ದತೆ ಹಂಚುವ ಇಂತಹ ಪರಂಪರೆ ಮುಂದುವರೆಯಲಿ. ಮಕ್ಕಳ ಹಾಡಿನ ಸಾಲುಗಳು ಹೇಳುವ “ಈ ನಮ್ಮ ದೇಶವು, ಪ್ರೀತಿಯ ಪ್ರತಿ ರೂಪವು” ಎಲ್ಲರಿಗೂ ಆದರ್ಶವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....