Homeಕರ್ನಾಟಕಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

- Advertisement -
- Advertisement -

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಈ ಬಾರಿಯ ಗೌರಿ ಗಣೇಶ ಹಬ್ಬ ಹಲವು ವಿಶೇಷತೆಗೆ ಕಾರಣವಾಗಿದೆ. ಮಹಿಳೆಯರು ಪೂಜೆ ಮಾಡಬಾರದು, ಗರ್ಭಗುಡಿ ಪ್ರವೇಶ ಮಾಡಬಾರದು ಎಂಬ ಹಲವು ವಾದಗಳಿವೆ. ಮಹಿಳೆಯರ ಮುಟ್ಟನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವ ಭಾರತದಂತಹ ದೇಶದಲ್ಲಿ ಮಹಿಳೆಯರು ದೇವಾಲಯದ ಪ್ರವೇಶ ಮಾಡುವುದನ್ನು ನಿಷೇಧಿಸಿರುವ, ಕೆಲ ಪ್ರಕರಣಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೂ ಏರಿರುವ ಸನ್ನಿವೇಶಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ.

ಮನುಷ್ಯ ನಿರ್ಮಿತ ಈ ಚೌಕಟ್ಟಗಳನ್ನು ತಿಳಿಯದ, ಅಸಮಾನತೆಯನ್ನು ಆಚರಣೆ ಮಾಡದ, ನಿಶ್ಕಲ್ಮಶ ಮುಗ್ದ ಮನಸ್ಸಿನ ಈ ಗ್ರಾಮದ ಪುಟಾಣಿ ಹೆಣ್ಣಮಕ್ಕಳು ಗ್ರಾಮದ ಮೂಲೆಯೊಂದರಲ್ಲಿ ಗೌರಿ ಗಣೇಶ ಕೂರಿಸಿದ್ದಾರೆ. ಗಂಡಸರೇ ಸೇರಿ ಪೆಂಡಾಲ್ ಕಟ್ಟಿ, ಕುಣಿದು ಕುಪ್ಪಳಿಸಿ ಹಬ್ಬ ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಅಪವಾದದಂತೆ ಇಲ್ಲಿನ ಹುಡುಗೀಯರೇ ಸೇರಿ ಗ್ರಾಮದ ಮಟ್ಟಕ್ಕೆ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಡುಗುಡು ಅಂಕಲ್ ಖ್ಯಾತಿಯ ಮೊಹಮ್ಮದ್ ಅಣ್ಣನ ಗಣಪತಿ ಪ್ರೀತಿ

ರಾಜ್ಯದಲ್ಲೀಗ ಹಬ್ಬ-ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚಾಗಿದೆ. ಗಲಭೆಗಳಲ್ಲಿ ಯುವಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಹೋದರ ಧರ್ಮೀಯರ ಮೇಲೆ ದ್ವೇಷ ಹರಡಿಸುತ್ತಿರುವ ಹೊತ್ತಲ್ಲಿ ಗಾರೆ ಕೆಲಸದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಅವರು ಬೆಂಕಿಕೆರೆಯಲ್ಲಿ ಈ ಮಕ್ಕಳ ಜೊತೆ ಸೇರಿ ಪ್ರೀತಿಯನ್ನು ಹಂಚುತ್ತಿದ್ದಾರೆ.ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

 

ಮಕ್ಕಳ ಗಣಪತಿ ಪೆಂಡಾಲ್ ಅನ್ನು ಇವರೇ ಕಟ್ಟಿದ್ದು ಅಲ್ಲದೆ ಹಣ್ಣು ಸಿಹಿತಿನಿಸುಗಳನ್ನು ತಂದು ಕೊಟ್ಟಿದ್ದಾರೆ. ಗಣಪತಿಗೆ ಹಾರ ತರಲು ತಮ್ಮದೇ ಗಾಡಿಯಲ್ಲಿ 70 ಕಿ.ಮಿ. ದೂರದ ದಾವಣಗೆರೆಗೆ ಹೋಗಿ ಹೂವಿನ ಹಾರ ತಂದಿದ್ದಾರೆ. ಪೆಂಡಾಲ್ ಮತ್ತಷ್ಟು ಚೆನ್ನಾಗಿ ಕಾಣಲು ಲೈಟಿನ ಸರ, ಉಸ್ರುಬುಲ್ಡೆ (ಬಲೂನ್) ಗಳನ್ನು ಕಟ್ಟಿದ್ದಾರೆ. ಮಕ್ಕಳು ಪ್ರೀತಿಯಿಂದ ಭಾರತದ ಧ್ವಜವನ್ನೂ ಕಟ್ಟಿದ್ದಾರೆ.

ಇದನ್ನೂ ಓದಿ: ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಮೊಹಮ್ಮದ್ ಅವರು ಭಕ್ತಿಯಿಂದ ಗಣಪತಿಗೆ ಕೈ ಮುಗಿಯುತ್ತಾರೆ, ಮಂಗಳಾರತಿ- ತೀರ್ಥ ಪಡೆಯುತ್ತಾರೆ. ಮಕ್ಕಳೆಲ್ಲಾ ಸಂಜೆಯ ಮೇಲೆ ಮನೆಗೆ ಹೋದಾಗ ಗಣಪತಿಯ ಮುಂದೆ ಹಚ್ಚಿಟ್ಟುರವ ದೀಪ ಆರದಂತೆ ನೋಡಿಕೊಳ್ಳಲು ಅವರೇ ಪೆಂಡಾಪ್ ಮುಂದೆ ಮಲಗುತ್ತಿದ್ದಾರೆ.

“ನಿನಿಗ್ಯಾಕಣ್ಣ ಇದೆಲ್ಲಾ, ಈ ಮಕ್ಳು ಸುಮ್ಮನೆ ನಿಮ್ ದುಡ್ಡೆಲ್ಲಾ ಖರ್ಚು ಮಾಡಿಸ್ತಾರೆ ನೋಡಿ” ಅಂತ ಗ್ರಾಮಸ್ತರು ಹೇಳಿದ ಮಾತಿಗೆ, “ಹಬ್ಬ ಏನ್ ದಿನಾ ಬರಲ್ಲ, ಮಕ್ಳು ಎಷ್ಟು ಖುಷಿ ಆಗಿದ್ದಾರೆ ನೋಡಿ. ಏನ್ ಮೂರ್ನಾಕ್ ಸಾವ್ರ ಖರ್ಚಾಗುತ್ತಾ? ಆಗ್ಲಿ ಬಿಡಿ” ಎಂದು ದಿನಕ್ಕೆ 500 ರೂ. ಕೂಲಿ ಪಡೆಯುವ ಮೊಹಮ್ಮದ್ ಅವರು ಉತ್ತರಿಸುತ್ತಾರೆ. ಅಲ್ಲದೇ ಈ ಹಿಂದೆಯೂ ಗಣಪತಿ ಹಬ್ಬಗಳಲ್ಲಿ ತಾವು ಭಾಗಿಯಾಗಿದ್ದ ಅನುಭವಗಳನ್ನು ಅಭಿಮಾನದಿಂದ ಹಂಚಿಕೊಳ್ಳುತ್ತಾರೆ.

ಗಣಪತಿ ಪೆಂಡಾಲ್ ನ ವಿಶೇಷತೆಗಳೇನು?

ಗ್ರಾಮದಲ್ಲಿ ಸುಮಾರು 8 ಸಮುದಾಯಗಳಿವೆ, ಎಲ್ಲರೂ ತಮ್ಮ ತಮ್ಮ ಸಮುದಾಯದ ಸ್ನೇಹಿತರು ಸೇರಿಕೊಂಡು ಗಣಪತಿ ಕೂರಿಸುತ್ತಾರೆ. ಆದರೆ ಈ ಹೆಣ್ಣುಮಕ್ಕಳ ಗಣಪತಿ ಪೆಂಡಾಲ್ ನಲ್ಲಿ ಬಹುತೇಕ ಎಲ್ಲಾ ಸಮುದಾಯದ ಮಕ್ಕಳು ಸೇರಿಕೊಂಡು ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ದೇವರ ಮಂತ್ರಗಳು ತಿಳಿಯದ ಈ ಮಕ್ಕಳು ಕೈ ಮುಗಿದು ದೇಶಭಕ್ತಿ ಗೀತೆ ಮತ್ತು ನಾಡ ಗೀತೆಗಳನ್ನು ಹಾಡುತ್ತಾರೆ. ತಮ್ಮ ಟೀಚರ್ ಹೇಳಿಕೊಟ್ಟಿರುವ “ನಮ್ಮ ದೇಶವು ಪ್ರೀತಿಯ ಪ್ರತಿರೂಪವು” ಎನ್ನುವ ಹಾಡು ಗಮನ ಸೆಳೆಯುತ್ತಿದೆ. ಡಿಜೆ, ಡ್ರಮ್ ಸೆಟ್, ವಿಚಿತ್ರ ಚಿತ್ರಗೀತೆಗಳ ಯಾವ ಹಂಗು ಇಲ್ಲದೆ ತಮಗೆ ತಿಳಿದಷ್ಟು ಜಾನಪದ ಹಾಡುಗಳನ್ನು ಹಾಡುತ್ತಾ ಕುಣಿಯುತ್ತಾರೆ. ಬಂದವರಿಗೆ ಕಾರ ಮಂಡಿಕ್ಕಿ ಕೊಡುತ್ತಾರೆ.

ಒಟ್ಟಾರೆಯಾಗಿ ಗಲಭೆ, ದ್ವೇಷ ಅಸೂಯೆ, ಶ್ರೇಷ್ಠತೆ ಯಾವುದೂ ಇಲ್ಲದೆ ಪ್ರೀತಿ ಸೌಹಾರ್ದತೆ ಹಂಚುವ ಇಂತಹ ಪರಂಪರೆ ಮುಂದುವರೆಯಲಿ. ಮಕ್ಕಳ ಹಾಡಿನ ಸಾಲುಗಳು ಹೇಳುವ “ಈ ನಮ್ಮ ದೇಶವು, ಪ್ರೀತಿಯ ಪ್ರತಿ ರೂಪವು” ಎಲ್ಲರಿಗೂ ಆದರ್ಶವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...