Homeಮುಖಪುಟಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

ಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರಿಂ ಕೋರ್ಟ್‌ ಮಧ್ಯಂತರ ಜಾಮೀನು ಶುಕ್ರವಾರ ನೀಡಿದೆ. “ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಾಗಿತ್ತು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ಗುಜರಾತ್‌‌ ಹೈಕೋರ್ಟ್‌ ಅನ್ನು ಟೀಕಿಸಿದೆ.

ಗುರುವಾರದಂದು ಗುಜರಾತ್‌ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್, ಆರು ವಾರಗಳ ನಂತರ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀಸ್ತಾ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು, ಹೈಕೋರ್ಟ್ ತನ್ನ ಜಾಮೀನು ಅರ್ಜಿಯನ್ನು ನಿರ್ಧರಿಸುವವರೆಗೆ ತೀಸ್ತಾ ಅವರು ತನ್ನ ಪಾಸ್‌ಪೋರ್ಟ್ ಅನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಮಧ್ಯಂತರ ಜಾಮೀನು ನೀಡುವ ವೇಳೆ ತಿಳಿಸಿದೆ.

ಇದನ್ನೂ ಓದಿ: ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

“ಅರ್ಜಿದಾರರು 2 ತಿಂಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿದ್ದಾರೆ. ಈ ಹಂತದಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅವರ ವಸ್ತುನಿಷ್ಠ ಅರ್ಜಿಯ ಪರಿಗಣನೆಯ ಬಾಕಿ ಇರುವಾಗ ಮಧ್ಯಂತರ ಜಾಮೀನಿನ ಪರಿಹಾರಕ್ಕೆ ಖಂಡಿತವಾಗಿಯೂ ಅರ್ಹರಾಗಿರುತ್ತಾರೆ” ಎಂದು ಸಿಜೆಐ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿತ ಪ್ರಕರಣದಲ್ಲಿ ತೀಸ್ತಾ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸೂಕ್ತವೆಂದು ಪರಿಗಣಿಸುವ ಷರತ್ತುಗಳಿಗೆ ಒಳಪಟ್ಟು ಅವರನ್ನು ಆದಷ್ಟು ಬೇಗ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸುಪ್ರೀಂಕೋರ್ಟ್ ಗುಜರಾತ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ನ್ಯಾಯಾಲಯವು ಪರಿಗಣಿಸುವವರೆಗೆ ತನ್ನ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ಮತ್ತು ಬಾಕಿ ಉಳಿದಿರುವ ಪ್ರಕರಣದಲ್ಲಿ ಸಂಪೂರ್ಣ ಸಹಕಾರವನ್ನು ನೀಡುವಂತೆ ತೀಸ್ತಾ ಅವರಿಗೆ ಸುಪ್ರೀಂ ಸೂಚಿಸಿದೆ. ಹೀಗಾಗಿ ತೀಸ್ತಾ ಅವರು ಪಾಸ್‌ಪೋರ್ಟ್‌ ಅನ್ನು ಸಲ್ಲಿಸಿ, ಇತರ ಜಾಮೀನು ಔಪಚಾರಿಕತೆಗಳ ನಂತರ ಬಿಡುಗಡೆಯಾಗುತ್ತಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

2002 ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ‘ಅಮಾಯಕರನ್ನು’ ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಗುಜರಾತ್ ಪೋಲೀಸರ ಭಯೋತ್ಪಾದನಾ ನಿಗ್ರಹ ದಳವು ಜೂನ್ 26 ರಂದು ಮುಂಬೈನಲ್ಲಿ ತೀಸ್ತಾ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ಗಜರಾತಿನ ಜೈಲುಗಳಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾಮೀನು ದೊರಕುವುದು ತಡವಾಯಿತು, ಆದರೂ ಸದ್ಯಕ್ಕೆ ಇದು ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...