Homeಮುಖಪುಟಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

ಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನವಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಎದೆ ನೋವು ಕಾರಣದಿಂದ ಬೆಂಗಳೂರಿಗೆ ಶಿಫ್ಟ್ ಮಾಡುವುದಕ್ಕೆ ಚಿತ್ರದುರ್ಗದ ನ್ಯಾಯಾಲಯ ಕಿಡಿಕಾರಿದೆ.

ತಮ್ಮ ಅನುಮತಿಯಿಲ್ಲದೆ ಅವರನ್ನು ಜಿಲ್ಲಾಸ್ಪತ್ರೆಗೆ ಹೇಗೆ ದಾಖಲು ಮಾಡಲಾಯಿತು ಎಂಬುದಕ್ಕೆ ವಿವರಣೆ ನೀಡಬೇಕೆಂದು ಜೈಲು ಅಧಿಕಾರಿಗಳಿಗೆ ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ ಕೋಮಲಾರವರು ತಾಕೀತು ಮಾಡಿದ್ದಾರೆ. ಅಲ್ಲದೇ ಮುರುಘಾ ಶರಣರನ್ನು ಯಾವ ವೈದ್ಯಕೀಯ ದಾಖಲೆಗಳ ಆಧಾರದಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಆರೋಪಿಯನ್ನು ಖುದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶಿಸಿದ್ದಾರೆ.

ಕೋರ್ಟ್ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಭಾರೀ ಭದ್ರತೆಯಲ್ಲಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆ ನಂತರ ಆರೋಪಿಯನ್ನು ಮೂರು ದಿನಗಳ ಕಾಲ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಅತ್ತ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲು ನ್ಯಾಯಾಲಯ ಒಪ್ಪದಿದ್ದಾಗ ಮುರುಘಾ ಶರಣರನ್ನು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಐಸಿಯು ಘಟಕಕ್ಕೆ ದಾಖಲಿಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಪೋಕ್ಸೊ ಪ್ರಕರಣದಡಿಯಲ್ಲಿ ಮುರುಘಾ ಶರಣರನ್ನು ಬಂಧಿಸಲಾಗಿತ್ತು. ಎಲ್ಲಾ ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು. ಅದರಂತೆ ಬೆಳಗ್ಗಿನ ಜಾವ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಬಂಧೀಖಾನೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಪದೇ ಪದೇ ಎದೆ ನೋವು ಎಂದು ಹೇಳಿದ್ದರು. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿಸಲಾಗಿತ್ತು. ಆನಂತರ ಇಸಿಜಿ ಮಾಡಿಸಲಾಗಿತ್ತು ಎಂದು ವರದಿಯಾಗಿದೆ.

ಮೌನಮುರಿದ ಸಿದ್ದರಾಮಯ್ಯ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾದರೂ ಪ್ರತಿಪಕ್ಷಗಳು ಹಾಗೂ ಅವುಗಳ ನಾಯಕರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ಆರೋಪಗಳು ಬಂದಿದ್ದವು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಮೊದಲು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ.ಎಚ್‌.ಸಿ.ಮಹಾದೇವಪ್ಪ ಅವರು ಪ್ರಕರಣವನ್ನು ಖಂಡಿಸಿದ್ದರು.

“ಮುರುಘಾ ಮಠದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳು ನನ್ನಲ್ಲಿ ಏಕ ಕಾಲಕ್ಕೆ ನೋವು ಮತ್ತು ದಿಗ್ಭ್ರಮೆಯನ್ನು ಉಂಟು ಮಾಡಿದೆ. ಈ ಪ್ರಕರಣದಲ್ಲಿ ಮಠದ ಶ್ರೀಗಳು ತಮ್ಮ ಮೇಲಿನ ಪಿತೂರಿಯ ಬಗ್ಗೆ ಪ್ರಸ್ತಾಪಿಸಿದ್ದು ಈ ನೆಲದ ಕಾನೂನನ್ನು ಗೌರವಿಸುತ್ತೇನೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಸಮಾಜದಲ್ಲಿ ಹೆಚ್ಚಿನ ಗೌರವ ಹೊಂದಿರುವ ಮಠ ಮಾನ್ಯಗಳ ಮೇಲಿನ ನಂಬಿಕೆ ಮತ್ತು ಅವುಗಳ ಮೇಲಿನ ಜನರ ವಿಶ್ವಾಸದ ಉಳಿವು ಹಾಗೂ ಆ ಹೆಣ್ಣು ಮಕ್ಕಳ ದೌರ್ಜನ್ಯದ ವಿಷಯದಲ್ಲಿ ಕಾನೂನು ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಪ್ರಜ್ಞೆಯನ್ನು ಎತ್ತಿ ಹಿಡಿಯಲಿ ಎಂದು ಈ ವೇಳೆ ಮನದುಂಬಿ ವಿನಂತಿಸುತ್ತೇನೆ” ಎಂದು ಮಹದೇವಪ್ಪ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಮೌನಮುರಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....