Homeಮುಖಪುಟಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

ಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

- Advertisement -
- Advertisement -

ಕೆಜಿಎಫ್ ಸಿನಿಮಾದಿಂದ ಪ್ರೇರಿತನಾದ 19 ವರ್ಷದ ಯುವಕನೊಬ್ಬ ಐದು ಜನರನ್ನು ಸರಣಿಯಾಗಿ ಕೊಂದು ಹಾಕಿರುವ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ಜರುಗಿದೆ. ಶಿವಪ್ರಸಾದ್ ಹೆಸರಿನ ಆ ಸರಣಿ ಕೊಲೆಗಾರ ನಾಲ್ಕು ಜನ ಸೆಕ್ಯುರಿಟಿ ಗಾರ್ಡ್‌ಗಳನ್ನು ಸೇರಿ ಐವರನ್ನು ಕೊಂದು ಹಾಕಿದ್ದು, ಅದರ ಸಿಸಿಟಿವಿ ವಿಡಿಯೋವೊಂದು ವೈರಲ್ ಆಗಿದೆ.

ಒಬ್ಬ ವ್ಯಕ್ತಿಯನ್ನು ಕೊಂದ ಬಳಿಕ ಆತನ ಮೊಬೈಲ್‌ ಅನ್ನು ತೆಗೆದುಕೊಂಡು ಹೋಗಿದ್ದರಿಂದ ಕೊಲೆಗಾರನನ್ನು ಪತ್ತೆ ಹಚ್ಚಿ ಭೋಪಾಲ್ ಪೊಲೀಸರು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವೈರಲ್ ಸಿಸಿಟಿವಿ ದೃಶ್ಯವೊಂದರಲ್ಲಿ ಮಂಚದ ಮೇಲೆ ಮಲಗಿರುವ ವ್ಯಕ್ತಿಯ ಮೇಲೆ ಕಲ್ಲಿನಿಂದ ಹೊಡೆದು ಸಾಯಿಸುವುದನ್ನು ನೋಡಬಹುದು. ಆನಂತರ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು 19 ವರ್ಷದ ಸರಣಿ ಕೊಲೆಗಾರ ತಪ್ಪಿಸಿಕೊಳ್ಳುವುದು ವಿಡಿಯೋದಲ್ಲಿ ದಾಖಲಾಗಿದೆ.

ಆತ ಮೂರು ರಾತ್ರಿಗಳಲ್ಲಿ ಮೂವರು ಸೆಕ್ಯುರಿಟಿ ಗಾರ್ಡ್‌ಗಳನ್ನು ಕೊಂದಿದ್ದಾನೆ ಎನ್ನಲಾಗಿದೆ. ಎಲ್ಲರನ್ನು ಕಲ್ಲಿನಿಂದ ಹೊಡೆದು ಕೊಲ್ಲಲಾಗಿದೆ. ಮಲಗಿದ ಸೆಕ್ಯುರಿಟಿ ಗಾರ್ಡ್‌ಗಳ ಆತನ ಟಾರ್ಗೆಟ್‌ಗಳಾಗಿದ್ದರು ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕೆಜಿಎಫ್ ಸಿನಿಮಾದಿಂದ ಸ್ಪೂರ್ತಿ ಪಡೆದು ಕೊಲೆಗಳನ್ನು ಮಾಡುತ್ತಿದ್ದ. ದಿಢೀರ್ ಪ್ರಚಾರಕ್ಕಾಗಿ ಆತ ಈ ಕೆಲಸಗಳನ್ನು ಮಾಡಿದ್ದಾನೆ. ಆತನ ಮುಂದಿನ ಟಾರ್ಗೆಟ್ ಪೊಲೀಸರಾಗಿದ್ದರು ಎನ್ನಲಾಗಿದೆ.

ಮೇ ತಿಂಗಳಿನಿಂದ ಆತ ಕೊಲೆ ಮಾಡಲು ಆರಂಭಿಸಿದ್ದ. ಬ್ರಿಡ್ಜ್ ಕಾಮಗಾರಿ ನೋಡಿಕೊಳ್ಳುತ್ತಿದ್ದ ಸೆಕ್ಯುರಿಟಿಯನ್ನು ಕೊಂದಿದ್ದ. ಆನಂತರ ಮಾರ್ಬಲ್ ಶಾಪ್‌ನಲ್ಲಿ ಸೆಕ್ಯುರಿಟಿಯಾಗಿದ್ದ ಸೋನು ವರ್ಮಾ ಎಂಬಾತನನ್ನು ಸಹ ಕೊಂದಿದ್ದ. ಆಗಸ್ಟ್ 28 ರಂದು ಕಾಲೇಜಿನಲ್ಲಿ ಸೆಕ್ಯುರಿಟಿಯಗಿದ್ದ 60 ವರ್ಷದ ಶಂಭು ನಾರಾಯಣ್ ದುಬೆ ಎಂಬುವವರನ್ನು ಸಹ ಕೊಲ್ಲಲಾಗಿದೆ. ಎಲ್ಲರನ್ನು ಕಲ್ಲಿನಿಂದ ಕೊಲ್ಲುತ್ತಿದ್ದ ಈತನನ್ನು ಜನರು ಸ್ಟೋನ್ ಕಿಲ್ಲರ್ ಎಂದು ಕರೆಯುತ್ತಿದ್ದರು ಎನ್ನಲಾಗಿದೆ.

ಮುಂಚಿನ ಪ್ರಕರಣಗಳಲ್ಲಿ ಈತ ಕೊಂದ ನಂತರ ತಪ್ಪಿಸಿಕೊಳ್ಳುತ್ತಿದ್ದನೆ ಹೊರತು ಕಳ್ಳತನ ಮಾಡುತ್ತಿರಲಿಲ್ಲ. ಆದರೆ ಇತ್ತೀಚೆಗೆ ಕೊಂದ ನಂತರ ಮೊಬೈಲ್ ತೆಗೆದುಕೊಂಡು ಹೋಗಿದ್ದ. ಅದರ ಲೊಕೇಶನ್ ಆಧರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ತಾನು ರಾತ್ರೋ ರಾತ್ರಿ ಫೇಮಸ್ ಆಗಬೇಕೆಂಬ ಏಕೈಕ ಕಾರಣದಿಂದ ಕೊಲ್ಲುತ್ತಿದ್ದೆ, ಇತ್ತೀಚಿಗೆ ಬಿಡುಗಡೆಯಾಗಿದ್ದ ಕೆಜಿಎಫ್ ಚಿತ್ರದಿಂದ ಪ್ರೇರಣೆ ಪಡೆದಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತರುಣ್ ನಾಯಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...