Homeಮುಖಪುಟಏಷ್ಯಾ ಕಪ್: ಸೆಪ್ಟಂಬರ್ 4ರಂದು ಭಾರತ - ಪಾಕ್ ನಡುವೆ ಮತ್ತೊಂದು ಪಂದ್ಯ: ಅಂದುಕೊಂಡಂತೆ ನಡೆದರೆ...

ಏಷ್ಯಾ ಕಪ್: ಸೆಪ್ಟಂಬರ್ 4ರಂದು ಭಾರತ – ಪಾಕ್ ನಡುವೆ ಮತ್ತೊಂದು ಪಂದ್ಯ: ಅಂದುಕೊಂಡಂತೆ ನಡೆದರೆ ಫೈನಲ್ ನಲ್ಲಿಯೂ ಮುಖಾಮುಖಿಯಾಗಬಹುದು!

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿಯ ಲೀಗ್ ಹಂತ ಮುಕ್ತಾಯವಾಗಿದೆ. ಪಾಕಿಸ್ತಾನ ತಂಡ ಭಾರತದ ಎದುರು ಸೋತರೂ ತನ್ನ ಕೊನೆಯ ಪಂದ್ಯದಲ್ಲಿ ಹಾಂಕಾಂಗ್ ಎದುರು 155 ರನ್ ಅಂತರದಲ್ಲಿ ಭಾರೀ ಗೆಲುವು ದಾಖಲಿಸಿ ಸೂಪರ್ ಫೋರ್ ಹಂತಕ್ಕೆ ಪ್ರವೇಶ ಪಡೆದಿದೆ. ಹಾಗಾಗಿ ನಿರೀಕ್ಷೆಯಂತೆ  ಇನ್ನೂ ಒಂದು ವಾರ  ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮತ್ತೆರೆಡು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸಿರುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸಿವೆ. ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಭಾರತ, ಪಾಕಿಸ್ತಾನ, ಹಾಂಕಾಗ್‌ ಎ ಗುಂಪಿನಲ್ಲಿದ್ದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಬಿ ಗುಂಪಿನಲ್ಲಿವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಲಾ ಎರಡು ಸೋಲು ಕಂಡ ಹಾಂಕಾಂಗ್ ಮತ್ತು ಬಾಂಗ್ಲಾದೇಶ ತಂಡಗಳು ಹೊರನಡೆದಿವೆ. ಭಾರತ, ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಸೂಪರ್ 4 ಹಂತಕ್ಕೆ ತಲುಪಿವೆ.

ಸೂಪರ್ 4 ಹಂತ

ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 11 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನದ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 11 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಒಂದು ಪಂದ್ಯಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...