Homeಮುಖಪುಟಏಷ್ಯಾ ಕಪ್: ಸೆಪ್ಟಂಬರ್ 4ರಂದು ಭಾರತ - ಪಾಕ್ ನಡುವೆ ಮತ್ತೊಂದು ಪಂದ್ಯ: ಅಂದುಕೊಂಡಂತೆ ನಡೆದರೆ...

ಏಷ್ಯಾ ಕಪ್: ಸೆಪ್ಟಂಬರ್ 4ರಂದು ಭಾರತ – ಪಾಕ್ ನಡುವೆ ಮತ್ತೊಂದು ಪಂದ್ಯ: ಅಂದುಕೊಂಡಂತೆ ನಡೆದರೆ ಫೈನಲ್ ನಲ್ಲಿಯೂ ಮುಖಾಮುಖಿಯಾಗಬಹುದು!

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿಯ ಲೀಗ್ ಹಂತ ಮುಕ್ತಾಯವಾಗಿದೆ. ಪಾಕಿಸ್ತಾನ ತಂಡ ಭಾರತದ ಎದುರು ಸೋತರೂ ತನ್ನ ಕೊನೆಯ ಪಂದ್ಯದಲ್ಲಿ ಹಾಂಕಾಂಗ್ ಎದುರು 155 ರನ್ ಅಂತರದಲ್ಲಿ ಭಾರೀ ಗೆಲುವು ದಾಖಲಿಸಿ ಸೂಪರ್ ಫೋರ್ ಹಂತಕ್ಕೆ ಪ್ರವೇಶ ಪಡೆದಿದೆ. ಹಾಗಾಗಿ ನಿರೀಕ್ಷೆಯಂತೆ  ಇನ್ನೂ ಒಂದು ವಾರ  ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮತ್ತೆರೆಡು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸಿರುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸಿವೆ. ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಭಾರತ, ಪಾಕಿಸ್ತಾನ, ಹಾಂಕಾಗ್‌ ಎ ಗುಂಪಿನಲ್ಲಿದ್ದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಬಿ ಗುಂಪಿನಲ್ಲಿವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಲಾ ಎರಡು ಸೋಲು ಕಂಡ ಹಾಂಕಾಂಗ್ ಮತ್ತು ಬಾಂಗ್ಲಾದೇಶ ತಂಡಗಳು ಹೊರನಡೆದಿವೆ. ಭಾರತ, ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಸೂಪರ್ 4 ಹಂತಕ್ಕೆ ತಲುಪಿವೆ.

ಸೂಪರ್ 4 ಹಂತ

ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 11 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನದ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 11 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಒಂದು ಪಂದ್ಯಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...