Homeಕರ್ನಾಟಕವಾರ್ತಾಭಾರತಿಗೆ ಎರಡು ದಶಕ

ವಾರ್ತಾಭಾರತಿಗೆ ಎರಡು ದಶಕ

- Advertisement -
- Advertisement -

ಕನ್ನಡ ದಿನಪತ್ರಿಕೆ ‘ವಾರ್ತಾಭಾರತಿ’ ಎರಡು ದಶಕಗಳನ್ನು ಪೂರೈಸಿದೆ. ವಾಣಿಜ್ಯಸುದ್ದಿ ಮತ್ತು ಮತೀಯ ನಾಯಕರ ಹೇಳಿಕೆಗಳಿಗೆ ಹೆಚ್ಚಿನ ಪತ್ರಿಕೆಗಳು ಕೊಡುವ ಆದ್ಯತೆಗೆ ಹೋಲಿಸಿದರೆ, ಇದು ಜನಸಾಮಾನ್ಯರ ಸಾಮಾಜಿಕ ರಾಜಕೀಯ ವಿಷಯಗಳಿಗೆ ಹೆಚ್ಚಿನ ಆದ್ಯತೆ ಕೊಡುತ್ತಾ ಬಂದಿದೆ. ಕರ್ನಾಟಕದ ಮುಖ್ಯ ಪತ್ರಿಕೆಗಳ ಮುಖಪುಟದ ತಲೆಬರೆಹಗಳನ್ನು ‘ವಾರ್ತಾಭಾರತಿ’ಯವುಗಳ ಜತೆಗಿಟ್ಟು ಗಮನಿಸಿದರೆ, ಇದರ ತಾತ್ವಿಕ ನಿಲುವು ಮತ್ತು ರಾಜಕಾರಣದ ದಿಸೆ ಸ್ಪಷ್ಟವಾಗುತ್ತದೆ. ಕಳೆದ ವರ್ಷ ಅಂಬೇಡ್ಕರ್ ಚಿತ್ರಪಟವನ್ನು ತೆಗೆಸಿದ ನ್ಯಾಯಾಧೀಶರ ವಿರುದ್ಧ ನಡೆದ ಚಳವಳಿಯನ್ನು ಇದು ವರದಿ ಮಾಡಿದ ಬಗೆಯನ್ನು ನೆನೆಯಬಹುದು. ‘ವಾರ್ತಾಭಾರತಿ’ ಇಲ್ಲದಿದ್ದರೆ, ಕರ್ನಾಟಕದಲ್ಲಿ ಮುಖ್ಯವಾಗಿ ಕರಾವಳಿಯಲ್ಲಿ ಜರುಗಿದ ಎಷ್ಟೊ ವಿದ್ಯಮಾನಗಳ ಇನ್ನೊಂದು ಮಗ್ಗುಲು ಓದುಗರಿಗೆ ಸಿಗುತ್ತಿರಲಿಲ್ಲ. ಅಡಗಿಸಲಾದ ಸುದ್ದಿಯನ್ನು ಅಥವಾ ಘಟನೆಯ ಇನ್ನೊಂದು ಮಗ್ಗುಲನ್ನು ಬಿಡಿಸಿ ತೋರಿಸುವುದು, ಭಿನ್ನಮತ ಹುಟ್ಟಿಸುವುದು, ಚಿಂತನಶೀಲತೆ ಬೆಳೆಸುವುದು ಸಾರ್ವಜನಿಕ ಚಿಂತಕರು ಮತ್ತು ಪತ್ರಿಕೆಗಳು ಮಾಡಬೇಕಾದ ಕೆಲಸ. ‘ವಾರ್ತಾಭಾರತಿ’ ಭಿನ್ನಮತವನ್ನು ಮತ್ತು ಸುದ್ದಿಯ ಭಿನ್ನಮಗ್ಗುಲನ್ನು ದಾಖಲಿಸುತ್ತ ಬಂದಿದೆ.

ಮತೀಯವಾದದ ಪ್ರಯೋಗಭೂಮಿಯಾಗಿರುವ ಕರಾವಳಿಯಲ್ಲಿದ್ದು ಇದು ರೂಪುಗೊಂಡಿತು ಮತ್ತು ಎರಡು ದಶಕ ದಾಟಿದೆ. ಈ ಸಂಗತಿಗೆ ಚಾರಿತ್ರಿಕ ಮಹತ್ವವಿದೆ. ಕರಾವಳಿಯಲ್ಲಿ ಹುಟ್ಟುವ ಜನಪರ ಪತ್ರಿಕೆಗಳು ಬೇರುಬಿಡದಂತೆ ಕೊರಳುಗೊಯ್ಕ ಸ್ಪರ್ಧೆಯನ್ನೊಡ್ಡುವ ಸನ್ನಿವೇಶವಿದೆ. ಜನಪರ ಪತ್ರಿಕೆಗಳಿಗೆ ಇದು ಔದ್ಯಮಿಕ ಸ್ಪರ್ಧೆ ಮಾತ್ರವಾಗಿರದೆ, ಸೈದ್ಧಾಂತಿಕ ಹೋರಾಟವೂ ಆಗಿದೆ. ‘ಮುಂಗಾರು’ ಹಾಗೆ ಜನ್ಮ ತಳೆದಿದ್ದು. ಅದನ್ನು ಓದುವುದು, ಅದಕ್ಕೆ ಬರೆಯುವುದು ಮತ್ತು ಚಂದಾ ಮಾಡಿಸುವುದು ನಮಗೆಲ್ಲ ಚಳವಳಿಯ ಕೆಲಸವಾಗಿತ್ತು. ಆದರೆ ನಾನಾ ಕಾರಣಗಳಿಂದ ‘ಮುಂಗಾರು’, ಬಳಿಕ ಬಂದ ‘ಜನವಾಹಿನಿ’ ಪತ್ರಿಕೆಗಳು ಸೋತು ನಿರ್ಗಮಿಸಿದವು. ಆದರೆ ಇವು ನಡೆದ ನಿಲ್ಲಿಸಿದ ಹಾದಿಯಲ್ಲಿ ಪ್ರಯಣ ಆರಂಭಿಸಿದ ‘ವಾರ್ತಾಭಾರತಿ’ ಕರಾವಳಿಯಲ್ಲಿರುವ ಪೈಪೋಟಿಯ ಕದನದಲ್ಲಿ ಬದುಕಿದೆ. ಇದು ಮತೀಯವಾದದ ವಿರುದ್ಧ ಕೆಲಸ ಮಾಡುವ ಚಳವಳಿ ಮತ್ತು ಸಂಗಾತಿಗಳಿಗೆ ವೇದಿಕೆಯಾಗಿದೆ. ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಅಂಕಣ ಬರೆಹಗಳು, ಬಲಪಂಥೀಯ ರಾಜಕೀಯಕ್ಕೆ ಸಾಂಸ್ಕೃತಿಕ ಪ್ರತಿರೋಧವನ್ನು ಕಟ್ಟುವ ಕೆಲಸ ಮಾಡಿವೆ.

ಸಂಪಾದಕೀಯವು ಯಾವುದೇ ಪತ್ರಿಕೆಯ ದೃಷ್ಟಿಕೋನವನ್ನು ಪ್ರಕಟಪಡಿಸುವ ಹೃದಯ ಭಾಗ. ಆದರೆ ಕರ್ನಾಕಟದ ಕೆಲವು ಪತ್ರಿಕೆಗಳಿಗೆ ಸಂಪಾದಕೀಯಗಳೇ ಇಲ್ಲ. ಸಂಪಾದಕೀಯ ಇರುವ ಕೆಲವು ಪತ್ರಿಕೆಗಳಲ್ಲಿ ಅದು ಮಹತ್ವದ ಭಾಗವಾಗಿಲ್ಲ. ಸಂಪಾದಕೀಯ ಹೊಣೆಗಾರಿಕೆಯನ್ನು ಕಿರುಪತ್ರಿಕೆಗಳು ಅರ್ಥಪೂರ್ಣವಾಗಿ ನಿಭಾಯಿಸಿಕೊಂಡು ಬಂದ ಚರಿತ್ರೆಯಿದೆ. ‘ಜೀವನ’ ಪತ್ರಿಕೆಗೆ ಮಾಸ್ತಿ, ‘ರುಜುವಾತು’ಗೆ ಅನಂತಮೂರ್ತಿ, ‘ಸಂಕ್ರಮಣ’ಕ್ಕೆ ಚಂಪಾ, ‘ಪ್ರಪಂಚ’ಕ್ಕೆ ಪಾಪು, ‘ಲಂಕೇಶ್ ಪತ್ರಿಕೆ’ಗೆ ಲಂಕೇಶ್, ‘ಗೌರಿ ಲಂಕೇಶ್’ ಪತ್ರಿಕೆಗೆ ಗೌರಿಲಂಕೇಶ್ ಬರೆದ ಸಂಪಾದಕೀಯಗಳು ಪುಸ್ತಕಗಳಾಗಿ ಪ್ರಕಟವಾಗಿವೆ; ಕನ್ನಡ ಚಿಂತನ ಸಾಹಿತ್ಯದ ಭಾಗವಾಗಿವೆ. ತಿಂಗಳ ಅಥವಾ ವಾರದ ಪತ್ರಿಕೆಗಳಲ್ಲಿ ಚಿಂತನಶೀಲವಾದ ಧ್ಯಾನಸ್ಥ ಸಂಪಾದಕೀಯಗಳು ಸಾಧ್ಯ. ಆದರೆ ದಿನವೂ ಪ್ರಕಟವಾಗುವ ಧಾವಂತದ ದಿನಪತ್ರಿಕೆಗಳಲ್ಲಿ ಇವು ಕಷ್ಟ. ಆದರೂ ‘ಹಿಂದೂ’ ‘ಡೆಕ್ಕನ್‌ಹೆರಾಲ್ಡ್’ ಪತ್ರಿಕೆಗಳ, ಈಚೆಗೆ ‘ಪ್ರಜಾವಾಣಿ’ಯ ಸಂಪಾದಕೀಯಗಳು ತಮ್ಮ ಖಚಿತ ಮತ್ತು ಪ್ರಗತಿಪರ ನಾಡನ್ನು ಕಟ್ಟುವ ಕಾಳಜಿಯ ದೃಷ್ಟಿಕೋನಕ್ಕೆ ಸಾಕ್ಷಿಯಾಗಿವೆ. ರಘುರಾಮಶೆಟ್ಟರು ‘ಮುಂಗಾರು’ ಪತ್ರಿಕೆಗಳಿಗೆ ಬರೆಯುತ್ತಿದ್ದ ಸಂಪಾದಕೀಯಗಳು ಚಿಂತನೆಯಿಂದ ಕೂಡಿರುತ್ತಿದ್ದವು. ಅವು ಈಗ ಪುಸ್ತಕವಾಗಿ ಹೊರಬಂದಿವೆ.

ಈ ಹಿನ್ನೆಲೆಯಲ್ಲಿ ವಾರ್ತಾಭಾರತಿಯ ಸಂಪಾದಕೀಯಗಳಲ್ಲಿರುವ ಚಿಂತನಶೀಲತೆ, ರಾಜಕೀಯ ಪ್ರಜ್ಞೆ, ಅಂತಾರಾಷ್ಟ್ರೀಯ ರಾಜಕಾರಣದ ಅರಿವು, ಕೋಮುವಾದ ಮತ್ತು ಸಾಮ್ರಾಜ್ಯಶಾಹಿಯ ಬಗೆಗಿನ ಸೈದ್ಧಾಂತಿಕ ಪ್ರತಿರೋಧ, ಜನಪರ ಕಾಳಜಿ ಮತ್ತು ಬದ್ಧತೆ, ತಾತ್ವಿಕ ಖಚಿತತೆ ಮುಖ್ಯವಾಗಿವೆ. ಸಂಪಾದಕೀಯದ ಭಾಷೆಯಲ್ಲಿ ತಾರ್ಕಿಕ ಬಿಗಿಯಿರುತ್ತದೆ. ಹೊಣೆಗಾರಿಕೆ, ಬಿಕ್ಕಟ್ಟಿನ ಸನ್ನಿವೇಶದಲ್ಲಿ ವಿದ್ಯಮಾನವನ್ನು ಸೂಕ್ಷ್ಮವಾಗಿ ವಿಶ್ಲೇಷಿಸುವ ರೀತಿ, ಪರ್ಯಾಯಗಳನ್ನು ಹೊಳೆಸುವ ಬಗೆ, ನಾಡನ್ನು ಕಟ್ಟುವ ಕಾಣ್ಕೆ ಇರುತ್ತದೆ. ರಾಜಕೀಯವಾಗಿ ಸರಿತನಕ್ಕಾಗಿ ಅತಿ ಎಚ್ಚರವಹಿಸದೆ, ಚರ್ಚಿಸಲು ಹಿಂಜರಿಕೆ ಹುಟ್ಟಿಸುವ ಸಂಕೀರ್ಣ ವಿಷಯಗಳ ಬಗ್ಗೆ, ದಿಟ್ಟವಾದ ಸಂಪಾದಕೀಯಗಳು ಇಲ್ಲಿವೆ. ತಪ್ಪಾದ ಧೋರಣೆಯ ಸಂಪಾದಕೀಯ ಬಂದಾಗ ಓದುಗರು ಹೀಗಲ್ಲ ಎಂದು ಕಟುವಾಗಿ ಪ್ರತಿಕ್ರಿಯಿಸಿರುವುದೂ ಉಂಟು. ಉದಾಹರಣೆಗೆ ಆಫಘಾನಿಸ್ಥಾನದಲ್ಲಿ ಸಾಮ್ರಾಜ್ಯಶಾಹಿ ಅಮೆರಿಕದ ನಿರ್ಗಮನದ ಹೊತ್ತಲ್ಲಿ ಸಂಭವಿಸಿದ ಅಧಿಕಾರ ಬದಲಾವಣೆಯ ಕುರಿತು ಬರೆಯಲಾದ ಸಂಪಾದಕೀಯ. ವಾರ್ತಾಭಾರತಿಯ ಆಯ್ದ ಸಂಪಾದಕೀಯಗಳು ಪುಸ್ತಕ ರೂಪದಲ್ಲಿ ಪ್ರಕಟವಾದರೆ ಕನ್ನಡ ಚಿಂತನ ಸಾಹಿತ್ಯಕ್ಕೆ ಕೊಡುಗೆಯಾಗಬಲ್ಲವು; ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಕೈಪಿಡಿಯಾಗಬಲ್ಲವು.

ಕನ್ನಡದಲ್ಲಿ ಬಂಡವಾಳ ಹೂಡಿಕೆ, ಪ್ರಸರಣ ಸಂಖ್ಯೆ, ಗುಣಮಟ್ಟಗಳ ದೃಷ್ಟಿಯಿಂದ ಯಶಸ್ಸನ್ನು ಸಾಧಿಸಿದ ಪತ್ರಿಕೆಗಳು ಬಹಳಷ್ಟಿವೆ. ಆದರೆ ಸುದ್ದಿ ವಿಶ್ಲೇಷಣೆ ಮತ್ತು ವ್ಯಾಖ್ಯಾನ ಆ ಮೂಲಕ ಒಂದು ತಾತ್ವಿಕ ಚಿಂತನೆ ಮಂಡಿಸುವ ವಿಷಯ ಬಂದಾಗ, ಹೆಚ್ಚಿನವು ನಿರಾಶೆ ಹುಟ್ಟಿಸುತ್ತವೆ. ಕೆಲವಕ್ಕೆ ನಮ್ಮ ಕಣ್ಣೆದುರಿನ ಸಮಾಜ ಕುರಿತಂತೆ ಒಂದು ಆಳವಾದ ದಾರ್ಶನಿಕ ದೃಷ್ಟಿಕೋನವೇ ಇರುವುದಿಲ್ಲ. ಇದಕ್ಕೆ ಕಾರಣ, ಅಲ್ಲಿ ಬರೆಯುವ ಚಿಂತಕರ ಗುಣಮಟ್ಟವೂ ಕಾರಣ. ಆದರೆ ಕೆಲವು ಪತ್ರಿಕೆಗಳಲ್ಲಿ ಸುದ್ದಿಗಿಂತ ಸುದ್ದಿ ವಿಶ್ಲೇಷಣೆಗಳೇ ಅವುಗಳ ಹಿರಿಮೆಗೆ ಕಾರಣ. ಅಲ್ಲಿನ ಚಿಂತಕರು ಮಾಡುವ ವಿದ್ಯಮಾನಗಳ ವಿಶ್ಲೇಷಣೆ ಮತ್ತು ವ್ಯಾಖ್ಯಾನಗಳು ಓದುಗರ ಅರಿವನ್ನು ವಿಸ್ತರಿಸಿವೆ ಮತ್ತು ಚಿಂತಿಸುವ ದೃಷ್ಟಿಕೋನವನ್ನೆ ಬದಲಿಸಿವೆ. ‘ವಾರ್ತಾಭಾರತಿ’ಯಲ್ಲಿ ನಾಡಿನ ಅತ್ಯುತ್ತಮ ಚಿಂತಕರು ಬರೆಯುತ್ತಾ ಬಂದಿದ್ದಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...