Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...