Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...