Homeಕರ್ನಾಟಕಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

ಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

- Advertisement -
- Advertisement -

ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಕೆಲವು ದಿನಗಳಿಂದ ಮುಂಬೈಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರನ್ನು ಮನವೊಲಿಸಲು ಟ್ರಬಲ್ ಶೂಟರ್ ಎಂದು ಕರೆಯಲ್ಪಡುವ ಡಿ.ಕೆ ಶಿವಕುಮಾರ್ ಸಹ ಮುಂಬೈ ತೆರಳಿದ್ದು, ಅಲ್ಲಿ ಅವರನ್ನು ಹೋಟೆಲ್ ಒಳಗೆ ಬಿಡದೇ ತಡೆದುದ್ದು, ಡಿ.ಕೆ.ಶಿ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಡಿ.ಕೆ.ಶಿಯನ್ನು ವಶಕ್ಕೆ ಪಡೆದಿದ್ದಾರೆ. ಇವೆಲ್ಲಾ ನಿಮಗೆ ಗೊತ್ತಿರುವ ವಿಷಯಗಳು.

ಡಿ.ಕೆ ಶಿವಕುಮಾರ್ ಹೋಟೆಲ್ ಮುಂಭಾಗದಿಂದ ಕದಲುವುದಿಲ್ಲ ಎಂದು ಹಠ ಹಿಡಿದು ನಿಂತಿರುವಾಗ, ಅವರನ್ನು ಪೊಲೀಸರು ವಶಕ್ಕೆ ಪಡೆದಾಗ ಯೂಸ್‍ಲೆಸ್ ಮುಂಬೈ ಕಾಂಗ್ರೆಸ್ ಘಟಕ ಏಕೆ ಅವರನ್ನು ಬೆಂಬಲಿಸುತ್ತಿಲ್ಲ? ರಾಷ್ಟ್ರೀಯ ಕಾಂಗ್ರೆಸ್ ನಿಮಗೆ ಕರ್ನಾಟಕ ಸರ್ಕಾರ ಉಳಿಯುವುದು ಬೇಡವೇ? ಎಂದು ಸ್ವಾತಿ ಚರ್ತುವೇದಿ ಸರಣಿ ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆಯಾಗಿರುವ ಸ್ವಾತಿ ಚತುರ್ವೇದಿಯವರನ್ನು ಈ ಹಿಂದೆ ಬಿಜೆಪಿಯ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಟ್ರೋಲ್ ಮಾಡಿದ್ದರು. ವ್ಯಕ್ತಿಗತ ನಿಂದನೆ ಮಾಡಿದ್ದರು. ಆಗ ಅವರು “ಐ ಆಮ್ ಎ ಟ್ರೋಲ್” ಎಂಬ ಪುಸ್ತಕ ಬರೆದಿದ್ದು ಅದು ಸಾಕಷ್ಟು ಪ್ರಸಿದ್ದಿಯಾಗಿತ್ತು.

ಇನ್ನು ಮೂರು ತಿಂಗಳಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಿದೆ. ಆದರೂ ಮಹಾರಾಷ್ಟ್ರ ಕಾಂಗ್ರೆಸ್ ಇಲ್ಲಿ ಡಿ.ಕೆ ಶಿವಕುಮಾರ್ ನೆರವಿಗೆ ಬಂದಿಲ್ಲ. ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಇದಿಯೋ ಇಲ್ಲವೋ? ಪ್ರಿಯ ರಾಹುಲ್ ಗಾಂಧಿಯವರೆ ದಯವಿಟ್ಟು ಗಮನಕೊಡಿ ಎಂದಿದ್ದಾರೆ.

ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಡಿ.ಕೆ ಶಿವಕುಮಾರ್‍ರನ್ನು ಆನಂತರ ಭೇಟಿಯಾಗಿದ್ದಾರೆ. ಈ ಮೊದಲು ಪೋನ್ ಮಾಡಿ ಮಾತಾಡಿದ್ದೇನೆ ಎಂದು ಟ್ವೀಟ್ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿರುವ ಸ್ವಾತಿಯವರು ನೀವೇನಾ ಕಾಂಗ್ರೆಸ್ ನ ಭಾವಿ ಅಧ್ಯಕ್ಷ ಎಂದು ವ್ಯಂಗ್ಯವಾಡಿದ್ದಾರೆ.

ನಂತರ ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿಮ್ಮ ಕೆಲವು ನಾಯಕರು ಡಿ.ಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಉಳಿದವರೆಲ್ಲಿ ಎಂದು ಟ್ವೀಟ್ ಮಾಡಿದ ಸ್ವಾತಿಯವರು ರಾಹುಲ್ ಗಾಂಧಿಯವರೆ ನೀವೇ ಖುದ್ದಾಗಿ ಡಿ.ಕೆ ಶಿವಕುಮಾರ್ ರವರ ಜೊತೆಗಿರಬೇಕು. ನಿಮ್ಮ ಪಕ್ಷದ ಮುಖಂಡರು ಪರಸ್ಪರ ಜಗಳವಾಡುತ್ತಿದ್ದಾರೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...