Homeಕರ್ನಾಟಕಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

ಪೋಕ್ಸೋ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ ‘2261’ ನೀಡಲಾಗಿದೆ.

- Advertisement -
- Advertisement -

ಪೋಕ್ಸೋ ಹಾಗೂ ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ನೈಜ ವರದಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಸೂಚಿಸಿದೆ.

“ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿ ಮೇಲೆ ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ವರದಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಆಯೋಗವು ನಿರ್ದೇಶನ ನೀಡಿದೆ” ಎಂದು ‘ದಿ ಫೈಲ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶ್ರೀ ಮುರುಘ ರಾಜೇಂದ್ರ ಮಠದಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ಪ್ರಕರಣದಲ್ಲಿ ಮಠದ ಸ್ವಾಮೀಜಿ ಮತ್ತು ಇತರರ ವಿರುದ್ಧ ದೂರು ದಾಖಳಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದ್ದರಿಂದ ಈ ಕುರಿತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಾಗಿರುವ ಬಗ್ಗೆ ಕೈಗೊಂಡಿರುವ ನೈಜ ವರದಿಯನ್ನುಕೂಡಲೇ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನಸೂಚಿತ ಬುಡಕಟ್ಟುಗಳ ಆಯೋಗಕ್ಕೆ ತುರ್ತಾಗಿ ಸಲ್ಲಿಸಬೇಕು” ಎಂದು ಚಿತ್ರದುರ್ಗದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಸೆಪ್ಟೆಂಬರ್‌ 1ರಂದು ಆಯೋಗ ಸೂಚಿಸಿದೆ.

ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ನೋಟೀಸ್ ನೀಡಿತ್ತು. ನಂತರದಲ್ಲಿ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಕ್ರಮ ಜರುಗಿಸಲು ಮುಂದಾಗಿದೆ.

ವಿಚಾರಣಾಧೀನ ಕೈದಿ ನಂ. 2261

ಪೋಕ್ಸೋ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ. ಸೆಪ್ಟೆಂಬರ್‌ 1ರ ರಾತ್ರಿ 10.30ರ ಸುಮಾರಿಗೆ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದರು.

ಕಣ್ಣೀರಿಟ್ಟ ಆರೋಪಿ ಸ್ವಾಮೀಜಿ

ಮೂರು ದಿನಗಳ ಕಾಲ ಪೊಲೀಸ್ ವಶಕ್ಕೊಳಗಾದ ಮುರುಘಾ ಸ್ವಾಮೀಜಿ ಕೋರ್ಟ್ ವಿಚಾರಣೆಯ ವೇಳೆ ಕೋರ್ಟ್ ಅಂಗಳದಲ್ಲಿ ಕಣ್ಣಿರು ಹಾಕಿದರೆಂದು ವರದಿಯಾಗಿದೆ.

ಚಿತ್ರದುರ್ಗ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಯನ್ನು ಶುಕ್ರವಾರ ಬೆಳಗ್ಗೆ 11ಕ್ಕೆ ಹಾಜರು ಪಡಿಸಲು ಸೂಚಿಸಿತ್ತು. ಆದರೆ, ಗುರುವಾರ ರಾತ್ರಿ ಸ್ವಾಮೀಜಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಬಿ ಕೆ ಕೋಮಲ ನಡೆಸಿದರು. ಪೊಲೀಸರ ಅರ್ಜಿ ಪರಿಶೀಲನೆ ವೇಳೆ ಅಪರಾಧಿ ಬಗ್ಗೆ ನ್ಯಾಯಾಧೀಶರು ಮಾಹಿತಿ ಕೇಳಿದರು. ಈ ವೇಳೆ ಸ್ವಾಮೀಜಿ ಆರೋಗ್ಯ ಸಮಸ್ಯೆ ವಿಚಾರ ಮುಂದಿಡಲಾಗಿತ್ತು. ಈ ವೇಳೆ ಸಿಡಿಮಿಡಿಗೊಂಡ ನ್ಯಾಯಾಧೀಶರು, ಕೋರ್ಟ್ ಗಮನಕ್ಕೆ ತರದೆ ಹೇಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಇದಕ್ಕೆ ಉತ್ತರಿಸಿದ ಜೈಲು ಅಧೀಕ್ಷಕರ ಮಾತಿನಿಂದ ಸಂತೃಪ್ತಿಗೊಳ್ಳದ ನ್ಯಾಯಾಧೀಶರು ಅದರ ಸಲುವಾಗಿನ ಅಗತ್ಯ ದಾಖಲೆ, ವೈದ್ಯರ ವರದಿ ಸಲ್ಲಿಸುವಂತೆ ತಿಳಿಸಿದರು. ಆದರೆ ಸಕಾಲಕ್ಕೆ ಅದನ್ನು ಜೈಲು ಸಿಬ್ಬಂದಿಗಳು ಒದಗಿಸದಿದ್ದಾಗ, ದಾಖಲೆ ಕೊರತೆಯಿರುವ ಕಾರಣಕ್ಕೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅವರು ಆದೇಶಿಸಿದರು.

ಕೂಡಲೇ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿಯನ್ನು ಕೋರ್ಟ್‌ಗೆ ಕರೆತರಲಾಯಿತು. ಕೋರ್ಟ್‌ಗೆ ಬಂದ ಅವರನ್ನು ಕಟಕಟೆಯಲ್ಲಿ ನಿಲ್ಲುವಂತೆ ನ್ಯಾಯಾಧೀಶರು ಸೂಚಿಸಿದರು. ಮೊದಲು ಇದಕ್ಕೆ ಹಿಂದೇಟು ಹಾಕಿದ ಸ್ವಾಮೀಜಿ ಬಳಿಕ ಒಲ್ಲದ ಮನಸ್ಸಿನಿಂದಲೇ ಕಟಕಟೆ ಏರಿದರು. ಈ ವೇಳೆ ಮುರುಘಾ ಶರಣರು ಕಣ್ಣೀರು ಹಾಕಿ ತಲೆತಗ್ಗಿಸಿ ನಿಂತರು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...