Homeಕರ್ನಾಟಕಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

ಪೋಕ್ಸೋ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ ‘2261’ ನೀಡಲಾಗಿದೆ.

- Advertisement -
- Advertisement -

ಪೋಕ್ಸೋ ಹಾಗೂ ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ನೈಜ ವರದಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಸೂಚಿಸಿದೆ.

“ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿ ಮೇಲೆ ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ವರದಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಆಯೋಗವು ನಿರ್ದೇಶನ ನೀಡಿದೆ” ಎಂದು ‘ದಿ ಫೈಲ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶ್ರೀ ಮುರುಘ ರಾಜೇಂದ್ರ ಮಠದಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ಪ್ರಕರಣದಲ್ಲಿ ಮಠದ ಸ್ವಾಮೀಜಿ ಮತ್ತು ಇತರರ ವಿರುದ್ಧ ದೂರು ದಾಖಳಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದ್ದರಿಂದ ಈ ಕುರಿತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಾಗಿರುವ ಬಗ್ಗೆ ಕೈಗೊಂಡಿರುವ ನೈಜ ವರದಿಯನ್ನುಕೂಡಲೇ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನಸೂಚಿತ ಬುಡಕಟ್ಟುಗಳ ಆಯೋಗಕ್ಕೆ ತುರ್ತಾಗಿ ಸಲ್ಲಿಸಬೇಕು” ಎಂದು ಚಿತ್ರದುರ್ಗದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಸೆಪ್ಟೆಂಬರ್‌ 1ರಂದು ಆಯೋಗ ಸೂಚಿಸಿದೆ.

ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ನೋಟೀಸ್ ನೀಡಿತ್ತು. ನಂತರದಲ್ಲಿ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಕ್ರಮ ಜರುಗಿಸಲು ಮುಂದಾಗಿದೆ.

ವಿಚಾರಣಾಧೀನ ಕೈದಿ ನಂ. 2261

ಪೋಕ್ಸೋ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ. ಸೆಪ್ಟೆಂಬರ್‌ 1ರ ರಾತ್ರಿ 10.30ರ ಸುಮಾರಿಗೆ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದರು.

ಕಣ್ಣೀರಿಟ್ಟ ಆರೋಪಿ ಸ್ವಾಮೀಜಿ

ಮೂರು ದಿನಗಳ ಕಾಲ ಪೊಲೀಸ್ ವಶಕ್ಕೊಳಗಾದ ಮುರುಘಾ ಸ್ವಾಮೀಜಿ ಕೋರ್ಟ್ ವಿಚಾರಣೆಯ ವೇಳೆ ಕೋರ್ಟ್ ಅಂಗಳದಲ್ಲಿ ಕಣ್ಣಿರು ಹಾಕಿದರೆಂದು ವರದಿಯಾಗಿದೆ.

ಚಿತ್ರದುರ್ಗ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಯನ್ನು ಶುಕ್ರವಾರ ಬೆಳಗ್ಗೆ 11ಕ್ಕೆ ಹಾಜರು ಪಡಿಸಲು ಸೂಚಿಸಿತ್ತು. ಆದರೆ, ಗುರುವಾರ ರಾತ್ರಿ ಸ್ವಾಮೀಜಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಬಿ ಕೆ ಕೋಮಲ ನಡೆಸಿದರು. ಪೊಲೀಸರ ಅರ್ಜಿ ಪರಿಶೀಲನೆ ವೇಳೆ ಅಪರಾಧಿ ಬಗ್ಗೆ ನ್ಯಾಯಾಧೀಶರು ಮಾಹಿತಿ ಕೇಳಿದರು. ಈ ವೇಳೆ ಸ್ವಾಮೀಜಿ ಆರೋಗ್ಯ ಸಮಸ್ಯೆ ವಿಚಾರ ಮುಂದಿಡಲಾಗಿತ್ತು. ಈ ವೇಳೆ ಸಿಡಿಮಿಡಿಗೊಂಡ ನ್ಯಾಯಾಧೀಶರು, ಕೋರ್ಟ್ ಗಮನಕ್ಕೆ ತರದೆ ಹೇಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಇದಕ್ಕೆ ಉತ್ತರಿಸಿದ ಜೈಲು ಅಧೀಕ್ಷಕರ ಮಾತಿನಿಂದ ಸಂತೃಪ್ತಿಗೊಳ್ಳದ ನ್ಯಾಯಾಧೀಶರು ಅದರ ಸಲುವಾಗಿನ ಅಗತ್ಯ ದಾಖಲೆ, ವೈದ್ಯರ ವರದಿ ಸಲ್ಲಿಸುವಂತೆ ತಿಳಿಸಿದರು. ಆದರೆ ಸಕಾಲಕ್ಕೆ ಅದನ್ನು ಜೈಲು ಸಿಬ್ಬಂದಿಗಳು ಒದಗಿಸದಿದ್ದಾಗ, ದಾಖಲೆ ಕೊರತೆಯಿರುವ ಕಾರಣಕ್ಕೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅವರು ಆದೇಶಿಸಿದರು.

ಕೂಡಲೇ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿಯನ್ನು ಕೋರ್ಟ್‌ಗೆ ಕರೆತರಲಾಯಿತು. ಕೋರ್ಟ್‌ಗೆ ಬಂದ ಅವರನ್ನು ಕಟಕಟೆಯಲ್ಲಿ ನಿಲ್ಲುವಂತೆ ನ್ಯಾಯಾಧೀಶರು ಸೂಚಿಸಿದರು. ಮೊದಲು ಇದಕ್ಕೆ ಹಿಂದೇಟು ಹಾಕಿದ ಸ್ವಾಮೀಜಿ ಬಳಿಕ ಒಲ್ಲದ ಮನಸ್ಸಿನಿಂದಲೇ ಕಟಕಟೆ ಏರಿದರು. ಈ ವೇಳೆ ಮುರುಘಾ ಶರಣರು ಕಣ್ಣೀರು ಹಾಕಿ ತಲೆತಗ್ಗಿಸಿ ನಿಂತರು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...