Homeಮುಖಪುಟಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 02ರ ಶುಕ್ರವಾರದಂದು ಮಂಗಳೂರಿಗೆ ಭೇಟಿ ನೀಡಿದ್ದರು. ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಸರ್ಕಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಆನಂತರ ದೆಹಲಿಗೆ ತೆರಳುವ ಮುನ್ನ ಹೆಲಿಪ್ಯಾಡ್‌ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯೊಂದಿಗೆ ಸಭೆ ನಡೆಸಿ ಇನ್ನು ಮುಂದೆ ಪ್ರತಿ ತಿಂಗಳೂ ಸಹ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೇಶದ ಪ್ರಧಾನಿಯವರು ಪ್ರತಿ ತಿಂಗಳು ಕರ್ನಾಟಕಕ್ಕೆ ಬರುವುದೇಕೆ? ಅಂತಹ ಕೆಲಸಗಳೆನಿವೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಮಂಗಳೂರಿನ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾದರೂ ಅದರಲ್ಲಿ ಸಾಕಷ್ಟು ಜೋಶ್ ಇತ್ತು. ಇದೇ ರೀತಿಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾದೇಶಿಕವಾಗಿ ಆಯಕಟ್ಟಿನ ಜಾಗದಲ್ಲಿ ಆಯೋಜಿಸಿ. ನಾನು ಪ್ರತಿ ತಿಂಗಳೂ ಬರುತ್ತೇನೆ ಎಂದು ಮೋದಿ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. 15 ದಿನದ ಮುಂಚೆಯೇ ಇನ್ಮುಂದೆ ಪ್ರತಿ ತಿಂಗಳು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬರುತ್ತಾರೆ ಎಂದು ಘೋಷಿಸಲಾಗಿತ್ತು.

ಮೇಲ್ನೋಟಕ್ಕೆ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮೋದಿಯವರು ಬರುತ್ತಿರುವುದು ನಿಜವಾದರೂ ಇದು ಕರ್ನಾಟಕದಲ್ಲಿ ಚುನಾವಣಾ ವರ್ಷ ಎಂಬುದನ್ನು ಯಾರೂ ಮರೆಯಲಾರರು. ಇಷ್ಟು ವರ್ಷಗಳ ಕಾಲ ಕರ್ನಾಟಕಕ್ಕೆ ಹೆಚ್ಚು ಸಲ ಬಾರದ ಮೋದಿಯವರು ಚುನಾವಣಾ ವರ್ಷದಲ್ಲಿ ಮಾತ್ರ ಪ್ರತಿ ತಿಂಗಳು ಬರುತ್ತೇನೆ ಎಂದಿದ್ದಾರೆ. ಇದೇ ರೀತಿಯಾಗಿ ಹಿಂದೆಯೂ ಸಹ ಚುನಾವಣೆ ಇದ್ದ ಕಡೆಗಳಿಗೆಲ್ಲಾ ಮೋದಿಯವರು ಭೇಟಿ ನೀಡಿ ಸಾವಿರಾರು ಕೋಟಿ ರೂಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ್ದರು. ಅದನ್ನೆ ಕರ್ನಾಟಕದಲ್ಲಿಯೂ ಸಹ ಮುಂದುವರೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕರ್ನಾಟಕದ ಬಿಜೆಪಿ ಪರಿಸ್ಥಿತಿ

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಗುತ್ತಿಗೆದಾರರ ಸಂಘ ಪದೇ ಪದೇ ಈ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಮತೀಯ ಗಲಭೆಗಳು ತಿರುಗುಬಾಣವಾಗಿವೆ. ಹರ್ಷ ಕೊಲೆ ವಿಚಾರ ಮತ್ತು ಪ್ರವೀಣ್ ನೆಟ್ಟಾರು ಕೊಲೆ ವಿಚಾರದಲ್ಲಿ ಅದು ಸಾಬೀತಾಗಿದೆ. ಈ ಸರ್ಕಾರ ಹಿಂದೂಗಳ ರಕ್ಷಣೆಗೆ ಏನೂ ಮಾಡುತ್ತಿಲ್ಲ ಎಂಬ ಭಾವನೆ ಹಿಂದುತ್ವವಾದಿಗಳಲ್ಲಿ ಮೂಡಿದೆ. ಮುಂಚಿತವಾಗಿ ಚುನಾವಣೆ ನಡೆಸಬೇಕೆಂದು ಬಯಸುವ ಬಿಜೆಪಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಆದರೆ ಇವೆಲ್ಲದರ ನಡುವೆ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯನವರು ತಮ್ಮ 75ನೇ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಅದ್ದೂರಿ ಕಾರ್ಯಕ್ರಮ ಮಾಡಿದ್ದಾರೆ. ಇದು ಸಹ ಬಿಜೆಪಿಯವರನ್ನು ಆತಂಕಕ್ಕೆ ತಳ್ಳಿರುವ ಸಾಧ್ಯತೆಯಿದೆ.

ಸಮರ್ಥ ಸಿಎಂ ಅಭ್ಯರ್ಥಿಯ ಕೊರತೆ

ಯಡಿಯೂರಪ್ಪನವರು ನಡೆಸಿದ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಆ ನಂತರ ಬೊಮ್ಮಾಯಿಯವರನ್ನು ಸಿಎಂ ಆಗಿ ಹೊಂದಿದೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಘೋಷಿಸಿದೆ. ಲಿಂಗಾಯಿತ ಮುಖಂಡ ಯಡಿಯೂರಪ್ಪನವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ಸೇರಿಸಿಕೊಂಡಿದೆ. ಇಷ್ಟರಿಂದ ಜನ ಬಿಜೆಪಿಗೆ ಮತ ಹಾಕುತ್ತಾರೆಯೇ ಎಂಬ ಅನುಮಾನ ಬಿಜೆಪಿಯಲ್ಲಿದೆ. ಹಾಗಾಗಿ ಅದನ್ನು ಸರಿದೂಗಿಸುವುದು ಮೋದಿಯವರಿಂದ ಮಾತ್ರ ಸಾಧ್ಯ ಎಂಬ ನಿರ್ಧಾರಕ್ಕೆ ಅದು ಬಂದಿದೆ. ಹಾಗಾಗಿಯೇ ಪ್ರತಿ ತಿಂಗಳೂ ಸಹ ಮೋದಿಯವರು ರಾಜ್ಯಕ್ಕೆ ಬರಬೇಕೆಂದು ಬಿಜೆಪಿ ಮುಖಂಡರು ಬಯಸುತ್ತಿದ್ದಾರೆ.

ನಡೆಯಲಿದೆಯೇ ಮೋದಿ ಮ್ಯಾಜಿಕ್?

2018ರ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಎಷ್ಟೆಲ್ಲ ಮೋದಿ ಅಲೆ ಇದ್ದಾಗಲೂ ರಾಜ್ಯದಲ್ಲಿ ಬಿಜೆಪಿ ಗಳಿಸಿದ್ದು 105 ಸ್ಥಾನಗಳನ್ನು ಮಾತ್ರ. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹೆಸರೇಳಿಯೆ ಬಿಜೆಪಿ 28ರಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಆದರೆ ಲೋಕಸಭಾ ಚುನಾವಣೆಗೂ, ವಿಧಾನಸಭಾ ಚುನಾವಣೆಗೂ ವ್ಯತ್ಯಾಸವಿದೆ. ರಾಜ್ಯದ ಸಮಸ್ಯೆಗಳು, ವಿಚಾರಗಳೇ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರುತ್ತವೆ ಎನ್ನುವುದನ್ನು ಇತಿಹಾಸ ತೋರಿಸಿದೆ. ಹಾಗಾಗಿ ಸದ್ಯ ಕೊಂಚ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ಮೋದಿ ಮೊರೆ ಹೋಗಿದೆ. ಆದರೆ ವಿಧಾನಸಭೆಯಲ್ಲಿ ಮೋದಿ ಮ್ಯಾಜಿಕ್ ನಡೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ; 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...