Homeಮುಖಪುಟಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

- Advertisement -
- Advertisement -

ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದ್ದಾರೆ.

“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್‌ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದ್ದಾರೆ.

ಅಲ್ಲದೇ, “ನಾನೇನು ಅವಳನ್ನು ರೇಪ್‌ ಮಾಡಿದ್ದೇನಾ?” ಎನ್ನುವ ಮೂಲಕ ಘಟನೆಯನ್ನು ಲಿಂಬಾವಳಿ ಸಮರ್ಥಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ ‘ನಾನೇನು ರೇಪ್ ಮಾಡಿದ್ನಾ’ ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ” ಪ್ರಶ್ನಿಸಿದೆ.

ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ Basavaraj Bommai ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಸವಾಲು ಹಾಕಿದೆ.

ಇದನ್ನೂ ಓದಿರಿ: ‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

“ಬಿಜೆಪಿಯು ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಇಂಥ ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ” ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯ ಯೂತ್ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಅಧಿಕಾರದ ಅಮಲು ನೆತ್ತಿಗೆರಿ, ದುರಂಕಾರ ಪರಮಾವಧಿಯಲ್ಲಿ. ನ್ಯಾಯ ಕೇಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ್ದಲ್ಲದೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಸಹ್ಯಕರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಇದೇನಾ ನಿಮ್ಮ ಧರ್ಮ ರಕ್ಷಣೆ, ಇದೇನಾ ನಮ್ಮ ಹಿಂದೂ ಧರ್ಮದಲ್ಲಿ ಹೇಳಿಕೊಡುವುದು. ಶಾಸಕರಾಗಿ ಸಾಧನೆ ತೋರಿಸಲಾಗದೆ ಸಾಮಾನ್ಯ ಜನರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಈ ಕೂಡಲೇ ಅರವಿಂದ್ ಲಿಂಬಾವಳಿಯ ರಾಜೀನಾಮೆ ಪಡೆಯಬೇಕು, ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...