Homeಮುಖಪುಟಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

- Advertisement -
- Advertisement -

ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದ್ದಾರೆ.

“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್‌ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದ್ದಾರೆ.

ಅಲ್ಲದೇ, “ನಾನೇನು ಅವಳನ್ನು ರೇಪ್‌ ಮಾಡಿದ್ದೇನಾ?” ಎನ್ನುವ ಮೂಲಕ ಘಟನೆಯನ್ನು ಲಿಂಬಾವಳಿ ಸಮರ್ಥಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ ‘ನಾನೇನು ರೇಪ್ ಮಾಡಿದ್ನಾ’ ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ” ಪ್ರಶ್ನಿಸಿದೆ.

ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ Basavaraj Bommai ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಸವಾಲು ಹಾಕಿದೆ.

ಇದನ್ನೂ ಓದಿರಿ: ‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

“ಬಿಜೆಪಿಯು ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಇಂಥ ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ” ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯ ಯೂತ್ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಅಧಿಕಾರದ ಅಮಲು ನೆತ್ತಿಗೆರಿ, ದುರಂಕಾರ ಪರಮಾವಧಿಯಲ್ಲಿ. ನ್ಯಾಯ ಕೇಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ್ದಲ್ಲದೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಸಹ್ಯಕರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಇದೇನಾ ನಿಮ್ಮ ಧರ್ಮ ರಕ್ಷಣೆ, ಇದೇನಾ ನಮ್ಮ ಹಿಂದೂ ಧರ್ಮದಲ್ಲಿ ಹೇಳಿಕೊಡುವುದು. ಶಾಸಕರಾಗಿ ಸಾಧನೆ ತೋರಿಸಲಾಗದೆ ಸಾಮಾನ್ಯ ಜನರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಈ ಕೂಡಲೇ ಅರವಿಂದ್ ಲಿಂಬಾವಳಿಯ ರಾಜೀನಾಮೆ ಪಡೆಯಬೇಕು, ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...