Homeಮುಖಪುಟಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆ ಹಾಗೂ ಪ್ರಧಾನಿಯ ಚಿತ್ರವನ್ನು ಅಂಟಿಸಿ ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ವ್ಯಂಗ್ಯವಾಡಲಾಗಿದೆ

- Advertisement -
- Advertisement -

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತವಾಗಿ ಅಕ್ಕಿ ವಿತರಿಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಪ್ರದರ್ಶಿಸದ ಕಾರಣಕ್ಕೆ ತೆಲಂಗಾಣ ಸರ್ಕಾರದ ವಿರುದ್ಧ ಶುಕ್ರವಾರ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೊವನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಗುರುವಾರದಿಂದ ಬಿಜೆಪಿಯ ಲೋಕಸಭೆ ಪ್ರವಾಸ ಯೋಜನೆ ಕಾರ್ಯಕ್ರಮದ ಅಂಗವಾಗಿ ಎರಡು ದಿನಗಳ ತೆಲಂಗಾಣ ಪ್ರವಾಸದಲ್ಲಿದ್ದ ಸೀತಾರಾಮನ್ ಅವರು ಶುಕ್ರವಾರ ಕಾಮರೆಡ್ಡಿ ಜಿಲ್ಲೆಗೆ ಭೇಟಿ ನೀಡಿ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ಒಕ್ಕೂಟ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಅವರು ಬಿರ್ಕೂರ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ನಿಲ್ಲಿಸಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದರು. ಪರಿಶೀಲನೆ ವೇಳೆ ಅಂಗಡಿಯಲ್ಲಿ ಪ್ರಧಾನಿಯವರ ಭಾವಚಿತ್ರವಾಗಲಿ, ಫ್ಲೆಕ್ಸ್ ಬೋರ್ಡ್ ಆಗಲಿ ಇಲ್ಲದಿರುವುದನ್ನು ಗಮನಿಸಿದ ಅವರು, ಕಾಮರೆಡ್ಡಿ ಜಿಲ್ಲಾಧಿಕಾರಿ ಜಿತೇಶ್ ಪಟೇಲ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಒಕ್ಕೂಟ ಸರ್ಕಾರದ ಯೋಜನೆಯಡಿ ಅಕ್ಕಿಯನ್ನು ಸರಬರಾಜು ಮಾಡುವ ಪ್ರತಿ ಪಡಿತರ ಅಂಗಡಿಗೆ ಕಡ್ಡಾಯವಾಗಿ ಮೋದಿಯವರ ಫ್ಲೆಕ್ಸ್ ಬೋರ್ಡ್ ಏಕೆ ಇಲ್ಲ ಎಂದು ಈ ವೇಳೆ ಅವರು ಕೇಳಿದ್ದಾರೆ. ನಂತರ ಅವರು ಜಿಲ್ಲೆಯ ಎಲ್ಲ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಹಾಕುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. “ಪಡಿತರ ಅಂಗಡಿಗಳಲ್ಲಿ ಪ್ರಧಾನಮಂತ್ರಿಯವರ ಚಿತ್ರಗಳು ತಪ್ಪದೆ ಇರುವಂತೆ ನೋಡಿಕೊಳ್ಳುವುದು ಎಲ್ಲಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಉಚಿತ ಪಡಿತರ ಅಕ್ಕಿ ವಿತರಣೆಯಲ್ಲಿ ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಪಾಲು ಎಷ್ಟು ಎಂಬುವುದು ಗೊತ್ತಿದೆಯೆ ಎಂದು ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿತೇಶ್‌ ಪಟೇಲ್ ಅವರು ಯೋಜನೆಯ ಸಂಪೂರ್ಣ ವಿವರಗಳನ್ನು ತಾನು ಹೊಂದಿಲ್ಲ ಎಂದು ಹೇಳಿದ್ದು, ಈ ವೇಳೆ ಸಚಿವರು, ಅವರು 30 ನಿಮಿಷಗಳಲ್ಲಿ ಯೋಜನೆಯ ಸಂಪೂರ್ಣ ವಿವರಗಳು ಬೇಕು ಎಂದು ಕೇಳಿದ್ದಾರೆ. ಒಂದು ವೇಳೆ ವಿವರಗಳು ನೀಡಲು ವಿಫಲವಾದರೆ ಪತ್ರಿಕಾಗೋಷ್ಠಿ ಕರೆದು ಟಿಆರ್‌‌ಎಸ್ ಸರ್ಕಾರದವನ್ನು ಎಕ್ಸ್‌‌ಪೋಸ್‌ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಫಲಾನುಭವಿಯೊಂದಿಗೆ ಬೆದರಿಸುವ ರೀತಿಯಲ್ಲಿ ಮಾತನಾಡಲು ಯತ್ನಿಸಿದ ನ್ಯಾಯಬೆಲೆ ಅಂಗಡಿಯ ವ್ಯಾಪಾರಿಯನ್ನೂ ನಿರ್ಮಲಾ ಸೀತಾರಾಮನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಡೀಲರ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ ಅವರು, “ವ್ಯಾಪಾರಿ ನನ್ನ ಮುಂದೆ ಹೇಗೆ ಮಾತನಾಡುತ್ತಾನೆ?” ಅವಳು ಹೇಳಿದ್ದಾರೆ.

ನಿರ್ಮಲಾ ಅವರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿರುವುದು ಟಿವಿ ವಾಹಿನಿಗಳಲ್ಲಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರು ಪತ್ರಿಕಾಗೋಷ್ಠಿ ಕರೆದು ಅವರ ವರ್ತನೆಯನ್ನು ಖಂಡಿಸಿದ್ದಾರೆ.

ಪಡಿತರ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಇಡುವಂತೆ ಒಕ್ಕೂಟ ಸರ್ಕಾರದ ಹಣಕಾಸು ಸಚಿವರು ಒತ್ತಾಯಿಸಿರುವುದು ಹಾಸ್ಯಾಸ್ಪದವಾಗಿದೆ. ಇದು ಪ್ರಧಾನಿಯವರ ಘನತೆಯನ್ನು ಕುಗ್ಗಿಸುವುದಲ್ಲದೆ ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಅನೇಕ ಪ್ರಧಾನಿಗಳು ದೇಶವನ್ನು ಆಳಿದ್ದಾರೆ ಆದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸಬೇಕೆಂದು ಅವರು ಎಂದಿಗೂ ಒತ್ತಾಯಿಸಲಿಲ್ಲ ಎಂದು ಅವರು ಹೇಳಿದ್ದು, ಈಗಿನ ಸರ್ಕಾರ ಕೀಳು ಮಟ್ಟದಲ್ಲಿ ವರ್ತಿಸುತ್ತಿದೆ ಎಂದಿದ್ದಾರೆ.

“ತೆಲಂಗಾಣದಲ್ಲಿ ಉಚಿತ ಅಕ್ಕಿ ಯೋಜನೆಗೆ ಒಕ್ಕೂಟ ಸರ್ಕಾರ ಕೇವಲ 55% ಕೊಡುವು ನೀಡುತ್ತಿದ್ದು, ಉಳಿದ 45% ರಾಜ್ಯ ಸರ್ಕಾರ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ. ಉಚಿತ ಅಕ್ಕಿ ಯೋಜನೆಗೆ 3,610 ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಹಾಗಾದರೆ, ಪಡಿತರ ಅಂಗಡಿಗಳಲ್ಲಿ ಮುಖ್ಯಮಂತ್ರಿಗಳ ಚಿತ್ರ ಹಾಕುವಂತೆ ನಾವು ಒತ್ತಾಯಿಸಬೇಕೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಈ ನಡುವೆ ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡಿದ್ದಾರೆ. ಚಿತ್ರ ನಟ ಪ್ರಕಾಶ್ ರಾಜ್ ಅವರು, ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆಯೊಂದಿಗೆ ಪ್ರಧಾನಿ ಮೋದಿಯ ಚಿತ್ರವನ್ನು ಅಂಟಿಸಿರುವ ವಿಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಟಿಆರ್‌ಎಸ್‌ ಪಕ್ಷದ ನಾಯಕ ಕೃಷ್ಣನ್ ಅವರು ಕೂಡಾ ಅದೇ ವಿಡಿಯೊವನ್ನು ಪೋಸ್ಟ್‌ ಮಾಡಿ, ನಿರ್ಮಲಾ ಸೀತಾರಾಮ್‌ ಅವರೆ, ಮೋದಿ ಅವರ ಫೊಟೊ ಬೇಕೇ ತೆಗೆದುಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...