Homeಮುಖಪುಟಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಪಡಿತರ ಅಂಗಡಿಯಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡುಹಿಡಿದ ನಿರ್ಮಲಾ ಸೀತಾರಾಮನ್; ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್

ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆ ಹಾಗೂ ಪ್ರಧಾನಿಯ ಚಿತ್ರವನ್ನು ಅಂಟಿಸಿ ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ವ್ಯಂಗ್ಯವಾಡಲಾಗಿದೆ

- Advertisement -
- Advertisement -

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತವಾಗಿ ಅಕ್ಕಿ ವಿತರಿಸುವ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಪ್ರದರ್ಶಿಸದ ಕಾರಣಕ್ಕೆ ತೆಲಂಗಾಣ ಸರ್ಕಾರದ ವಿರುದ್ಧ ಶುಕ್ರವಾರ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೊವನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಗುರುವಾರದಿಂದ ಬಿಜೆಪಿಯ ಲೋಕಸಭೆ ಪ್ರವಾಸ ಯೋಜನೆ ಕಾರ್ಯಕ್ರಮದ ಅಂಗವಾಗಿ ಎರಡು ದಿನಗಳ ತೆಲಂಗಾಣ ಪ್ರವಾಸದಲ್ಲಿದ್ದ ಸೀತಾರಾಮನ್ ಅವರು ಶುಕ್ರವಾರ ಕಾಮರೆಡ್ಡಿ ಜಿಲ್ಲೆಗೆ ಭೇಟಿ ನೀಡಿ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ಒಕ್ಕೂಟ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಅವರು ಬಿರ್ಕೂರ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ನಿಲ್ಲಿಸಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದರು. ಪರಿಶೀಲನೆ ವೇಳೆ ಅಂಗಡಿಯಲ್ಲಿ ಪ್ರಧಾನಿಯವರ ಭಾವಚಿತ್ರವಾಗಲಿ, ಫ್ಲೆಕ್ಸ್ ಬೋರ್ಡ್ ಆಗಲಿ ಇಲ್ಲದಿರುವುದನ್ನು ಗಮನಿಸಿದ ಅವರು, ಕಾಮರೆಡ್ಡಿ ಜಿಲ್ಲಾಧಿಕಾರಿ ಜಿತೇಶ್ ಪಟೇಲ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಒಕ್ಕೂಟ ಸರ್ಕಾರದ ಯೋಜನೆಯಡಿ ಅಕ್ಕಿಯನ್ನು ಸರಬರಾಜು ಮಾಡುವ ಪ್ರತಿ ಪಡಿತರ ಅಂಗಡಿಗೆ ಕಡ್ಡಾಯವಾಗಿ ಮೋದಿಯವರ ಫ್ಲೆಕ್ಸ್ ಬೋರ್ಡ್ ಏಕೆ ಇಲ್ಲ ಎಂದು ಈ ವೇಳೆ ಅವರು ಕೇಳಿದ್ದಾರೆ. ನಂತರ ಅವರು ಜಿಲ್ಲೆಯ ಎಲ್ಲ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಹಾಕುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. “ಪಡಿತರ ಅಂಗಡಿಗಳಲ್ಲಿ ಪ್ರಧಾನಮಂತ್ರಿಯವರ ಚಿತ್ರಗಳು ತಪ್ಪದೆ ಇರುವಂತೆ ನೋಡಿಕೊಳ್ಳುವುದು ಎಲ್ಲಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದಲ್ಲಿ ಉಚಿತ ಪಡಿತರ ಅಕ್ಕಿ ವಿತರಣೆಯಲ್ಲಿ ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಪಾಲು ಎಷ್ಟು ಎಂಬುವುದು ಗೊತ್ತಿದೆಯೆ ಎಂದು ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿತೇಶ್‌ ಪಟೇಲ್ ಅವರು ಯೋಜನೆಯ ಸಂಪೂರ್ಣ ವಿವರಗಳನ್ನು ತಾನು ಹೊಂದಿಲ್ಲ ಎಂದು ಹೇಳಿದ್ದು, ಈ ವೇಳೆ ಸಚಿವರು, ಅವರು 30 ನಿಮಿಷಗಳಲ್ಲಿ ಯೋಜನೆಯ ಸಂಪೂರ್ಣ ವಿವರಗಳು ಬೇಕು ಎಂದು ಕೇಳಿದ್ದಾರೆ. ಒಂದು ವೇಳೆ ವಿವರಗಳು ನೀಡಲು ವಿಫಲವಾದರೆ ಪತ್ರಿಕಾಗೋಷ್ಠಿ ಕರೆದು ಟಿಆರ್‌‌ಎಸ್ ಸರ್ಕಾರದವನ್ನು ಎಕ್ಸ್‌‌ಪೋಸ್‌ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಫಲಾನುಭವಿಯೊಂದಿಗೆ ಬೆದರಿಸುವ ರೀತಿಯಲ್ಲಿ ಮಾತನಾಡಲು ಯತ್ನಿಸಿದ ನ್ಯಾಯಬೆಲೆ ಅಂಗಡಿಯ ವ್ಯಾಪಾರಿಯನ್ನೂ ನಿರ್ಮಲಾ ಸೀತಾರಾಮನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಡೀಲರ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ ಅವರು, “ವ್ಯಾಪಾರಿ ನನ್ನ ಮುಂದೆ ಹೇಗೆ ಮಾತನಾಡುತ್ತಾನೆ?” ಅವಳು ಹೇಳಿದ್ದಾರೆ.

ನಿರ್ಮಲಾ ಅವರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿರುವುದು ಟಿವಿ ವಾಹಿನಿಗಳಲ್ಲಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರು ಪತ್ರಿಕಾಗೋಷ್ಠಿ ಕರೆದು ಅವರ ವರ್ತನೆಯನ್ನು ಖಂಡಿಸಿದ್ದಾರೆ.

ಪಡಿತರ ಅಂಗಡಿಗಳಲ್ಲಿ ಮೋದಿ ಅವರ ಭಾವಚಿತ್ರ ಇಡುವಂತೆ ಒಕ್ಕೂಟ ಸರ್ಕಾರದ ಹಣಕಾಸು ಸಚಿವರು ಒತ್ತಾಯಿಸಿರುವುದು ಹಾಸ್ಯಾಸ್ಪದವಾಗಿದೆ. ಇದು ಪ್ರಧಾನಿಯವರ ಘನತೆಯನ್ನು ಕುಗ್ಗಿಸುವುದಲ್ಲದೆ ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಬಗ್ಗೆ ನಿಮ್ಮ ರಾಜ್ಯ ಸರ್ಕಾರಗಳನ್ನು ಕೇಳಿ: ನಿರ್ಮಲಾ ಸೀತಾರಾಮನ್‌

ಅನೇಕ ಪ್ರಧಾನಿಗಳು ದೇಶವನ್ನು ಆಳಿದ್ದಾರೆ ಆದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸಬೇಕೆಂದು ಅವರು ಎಂದಿಗೂ ಒತ್ತಾಯಿಸಲಿಲ್ಲ ಎಂದು ಅವರು ಹೇಳಿದ್ದು, ಈಗಿನ ಸರ್ಕಾರ ಕೀಳು ಮಟ್ಟದಲ್ಲಿ ವರ್ತಿಸುತ್ತಿದೆ ಎಂದಿದ್ದಾರೆ.

“ತೆಲಂಗಾಣದಲ್ಲಿ ಉಚಿತ ಅಕ್ಕಿ ಯೋಜನೆಗೆ ಒಕ್ಕೂಟ ಸರ್ಕಾರ ಕೇವಲ 55% ಕೊಡುವು ನೀಡುತ್ತಿದ್ದು, ಉಳಿದ 45% ರಾಜ್ಯ ಸರ್ಕಾರ ನೀಡುತ್ತಿದೆ” ಎಂದು ಅವರು ಹೇಳಿದ್ದಾರೆ. ಉಚಿತ ಅಕ್ಕಿ ಯೋಜನೆಗೆ 3,610 ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಹಾಗಾದರೆ, ಪಡಿತರ ಅಂಗಡಿಗಳಲ್ಲಿ ಮುಖ್ಯಮಂತ್ರಿಗಳ ಚಿತ್ರ ಹಾಕುವಂತೆ ನಾವು ಒತ್ತಾಯಿಸಬೇಕೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಈ ನಡುವೆ ಹಲವಾರು ಜನರು ಸಚಿವರನ್ನು ಟ್ರೋಲ್ ಮಾಡಿದ್ದಾರೆ. ಚಿತ್ರ ನಟ ಪ್ರಕಾಶ್ ರಾಜ್ ಅವರು, ‘ತಗೊಳಿ, ಪೋಸ್ಟರ್‌ ಬಂದಿದೆ’ ಎಂದು ಎಲ್‌ಪಿಜಿ ಸಿಲಿಂಡರ್‌ ಮೇಲೆ ಅದರ ಬೆಲೆಯೊಂದಿಗೆ ಪ್ರಧಾನಿ ಮೋದಿಯ ಚಿತ್ರವನ್ನು ಅಂಟಿಸಿರುವ ವಿಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಟಿಆರ್‌ಎಸ್‌ ಪಕ್ಷದ ನಾಯಕ ಕೃಷ್ಣನ್ ಅವರು ಕೂಡಾ ಅದೇ ವಿಡಿಯೊವನ್ನು ಪೋಸ್ಟ್‌ ಮಾಡಿ, ನಿರ್ಮಲಾ ಸೀತಾರಾಮ್‌ ಅವರೆ, ಮೋದಿ ಅವರ ಫೊಟೊ ಬೇಕೇ ತೆಗೆದುಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...