Homeಮುಖಪುಟಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ‘ಬಲವಂತವಾಗಿ’ ಫ್ಲೈಟ್ ಕ್ಲಿಯರೆನ್ಸ್ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ, ಮನೋಜ್ ತಿವಾರಿ, ದುಬೆ ಅವರ ಇಬ್ಬರು ಪುತ್ರರು ಮತ್ತು ಇತರರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದಾದ ನಂತರ ದುಬೆ ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣದ ‘ನಿರ್ಬಂಧಿತ’ ಪ್ರದೇಶವನ್ನು ಪ್ರವೇಶಿಸುವ ಮೂಲಕ ‘ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡಿದ್ದಾರೆ’ ಎಂದು ದಿಯೋಘರ್ ಡೆಪ್ಯೂಟಿ ಕಮಿಷನರ್ ಮತ್ತು ಜಾರ್ಖಂಡ್ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಆರೋಪವನ್ನು ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿ ಪೊಲೀಸರು ದಿಯೋಘರ್‌ನಲ್ಲಿರುವ ಕುಂದಾ ಪೊಲೀಸ್ ಠಾಣೆಗೆ ತನಿಖೆಗಾಗಿ ಎಫ್‌ಐಆರ್‌ ಕಳುಹಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣ ಸಲಹಾ ಸಮಿತಿಯ ಅಧ್ಯಕ್ಷ ಸಂಸದ ನಿಶಿಕಾಂತ್ ದುಬೆ ಅವರು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 124A (ದೇಶದ್ರೋಹ), 353 (ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ), 448 (ಮನೆ ಅತಿಕ್ರಮಣ), 201 (ಸಾಕ್ಷಾಧಾರಗಳ ಕಣ್ಮರೆಗೆ ಕಾರಣ), 506 (ಅಪರಾಧ ಬೆದರಿಕೆ), 120 ಬಿ (ಅಪರಾಧದ ಪಿತೂರಿ) ಮತ್ತು ಅಧಿಕಾರಿಗಳ ರಹಸ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಯೋಘರ್ ಡೆಪ್ಯುಟಿ ಕಮಿಷನರ್ ಮಂಜುನಾಥ್ ಭಜಂತ್ರಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು (ಎಫ್‌ಐಆರ್) ಒಂದು ಅಸಂಬದ್ಧ ಮತ್ತು ಶೇ.100ರಷ್ಟು ಕಟ್ಟುಕಥೆಯಾಗಿದೆ. ಅವರು ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಎಟಿಸಿ ಕೋಣೆಗೆ ಪ್ರವೇಶಿಸುವ ಮೂಲಕ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಕ್ಲಿಯರೆನ್ಸ್‌ ಕೊಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಭದ್ರತಾ ಉಸ್ತುವಾರಿ ಸುಮನ್ ಆನಂದ್ ನೀಡಿದ ದೂರಿನ ಮೇರೆಗೆ ಸೆಪ್ಟೆಂಬರ್ 1ರಂದು ಕುಂದಾ ಪೊಲೀಸ್ ಠಾಣೆಯಲ್ಲಿ ದುಬೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಿಯೋಘರ್‌ನಿಂದ ಟೇಕಾಫ್ ಮಾಡಲು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನಿಂದ ಬಲವಂತವಾಗಿ ಕ್ಲಿಯರೆನ್ಸ್ ತೆಗೆದುಕೊಂಡ ಆರೋಪದ ಮೇಲೆ ಸಂಸದರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಗಸ್ಟ್ 31ರಂದು ವಿಮಾನ ನಿಲ್ದಾಣದಲ್ಲಿ ರಾತ್ರಿ ಟೇಕ್-ಆಫ್ ಅಥವಾ ಲ್ಯಾಂಡಿಂಗ್ ಸೌಲಭ್ಯವಿಲ್ಲ. ಸೆಪ್ಟಂಬರ್ 1 ರಂದು ಭದ್ರತಾ ಪ್ರಭಾರಿ ಸುಮನ್ ಆನಂದ್ ದೂರು ನೀಡಿದ್ದರು.

ಡಿಸಿ ಭಜಂತ್ರಿಯವರು ಜಾರ್ಖಂಡ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದು, “ದುಬೆ ಮತ್ತು ಇತರರು ಎಟಿಸಿ ಕೊಠಡಿಯೊಳಗೆ ಬಂದರು. ಕ್ಲಿಯರೆನ್ಸ್‌ಗಾಗಿ ಒತ್ತಡ ಹೇರಿದರು” ಎಂದು ಆರೋಪಿಸಿದ್ದಾರೆ.

ಇದಾದ ಬಳಿಕ ದುಬೆ ಅವರು ದೂರು ನೀಡಿದ್ದು ದೆಹಲಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 31 ರಂದು ದೆಹಲಿಗೆ ಪ್ರಯಾಣಿಸಬೇಕಾಗಿತ್ತು. ಭದ್ರತಾ ತಪಾಸಣೆಯ ನಂತರ ಆಗಸ್ಟ್ 31ರಂದು ಸಂಜೆ 5.25 ಫ್ಲೈಟ್ ಹತ್ತಲಾಯಿತು. ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಕೊರತೆಯ ಬಗ್ಗೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಪ್ರಕರಣವೊಂದು ಬಾಕಿ ಉಳಿದಿರುವುದರಿಂದ ಮತ್ತು ಸಾಕಷ್ಟು ಸಮಯವಿಲ್ಲದ ಕಾರಣ, ಈ ವಿಷಯದ ಕುರಿತು ಚರ್ಚಿಸಲು ನಾನು ವಿಮಾನ ನಿಲ್ದಾಣದ ನಿರ್ದೇಶಕರ ಕಚೇರಿಗೆ ಬರಿಗಾಲಿನಲ್ಲಿ ನಡೆದಿದ್ದೇನೆ ಎಂದು ದುಬೆ ಹೇಳಿದ್ದಾರೆ.

“ನಾನು ಹೋಗುತ್ತಿರುವಾಗ, ಜಾರ್ಖಂಡ್ ಪೊಲೀಸರು ಮತ್ತು (ರಾಜ್ಯ ಸರ್ಕಾರದ) ನೌಕರರು ನನ್ನನ್ನು ತಡೆದರು. ನನ್ನ ಇಬ್ಬರು ಗಂಡುಮಕ್ಕಳನ್ನು ನಿಂದಿಸಿದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದಿಯೋಘರ್ ಡಿಸಿಯ ಸೂಚನೆಯಲ್ಲಿ ಅವರು ನನ್ನ ಕೆಲಸಕ್ಕೆ ಅಡ್ಡಿಪಡಿಸಿದರು. ಮರುದಿನ ಜಿಲ್ಲಾಧಿಕಾರಿಯವರು ದಿಯೋಘರ್ ವಿಮಾನ ನಿಲ್ದಾಣದ ಸುರಕ್ಷಿತ ಡಿಆರ್‌ಡಿಒ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ನನಗೆ ತಿಳಿದಿತ್ತು. ಅಲ್ಲಿಗೆ ಪಿಎಂಒ ಅನುಮತಿಯ ನಂತರ ಮಾತ್ರ ಹೋಗಬಹುದು” ಎಂದು ದೆಹಲಿ ದುಬೆ ಆಪಾದಿಸಿದ್ದಾರೆ.

ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ದುಬೆ ಮತ್ತು ಭಜಂತ್ರಿ ನಡುವೆ ಟ್ವಿಟ್ಟರ್ ವಾರ್‌ ನಡೆದಿದೆ. ದುಬೆ: “…ನೀವು ವಿಮಾನ ನಿಲ್ದಾಣದೊಳಗೆ ಹೇಗೆ ಬಂದಿರಿ? ಯಾವ ಅಧಿಕಾರದ ಅಡಿಯಲ್ಲಿ ಬಂದಿರಿ? ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಹತಾಶರಾಗಿದ್ದೀರಿ”.

ಇದನ್ನೂ ಓದಿರಿ: ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಭಜಂತ್ರಿ: ಇದಕ್ಕೆ ಅಧಿಕಾರ ಹೊಂದಿದ್ದೇನೆ. ಪ್ರವೇಶಕ್ಕಾಗಿ ಗೇಟ್ ಪಾಸ್ ಇದೆ.

ದುಬೆ: “ಎಟಿಸಿ ಟವರ್‌ ಪ್ರವೇಶಿಸಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಎಲ್ಲಾ ಮಾನದಂಡಗಳನ್ನು ಉಲ್ಲಂಘಿಸಿದ್ದೀರಿ”.

ಭಜಂತ್ರಿ ಆರೋಪವನ್ನು ತಿರಸ್ಕರಿಸಿದ್ದಾರೆ. ಅಧಿಕಾರಿ ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಎಟಿಸಿ ಆವರಣವನ್ನು ಪ್ರವೇಶಿಸಲು, ಒಬ್ಬ ವ್ಯಕ್ತಿಗೆ ಏರೋಡ್ರೋಮ್ ಎಂಟ್ರಿ ಪರ್ಮಿಟ್ (AEP) ಅಗತ್ಯವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...