Homeಕರ್ನಾಟಕಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

ಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆ ಹಾಗೂ ಅದರ ಮುಖ್ಯಸ್ಥರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ಮೈಸೂರಿನಲ್ಲಿ ದೂರು ದಾಖಲಾಗಿದೆ.

“ನಮಗೆ ಮತ್ತು ಒಡನಾಡಿ ಸಂಸ್ಥೆಗೆ ಪೊಲೀಸ್‌ ರಕ್ಷಣೆ ನೀಡಬೇಕು” ಎಂದು ಕೋರಿ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿಯವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

“ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾ ಸ್ವಾಮೀಜಿಯ ಅನುಯಾಯಿಗಳು ಮತ್ತು ಮಠದ ಪರವಾಗಿರುವ ಕೆಲವು ಹಿತಾಸಕ್ತಿಗಳು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಹಾಗೂ ಪರಶು ಅವರಿಗೆ ಜೀವ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಹಲವಾರು ಕರೆಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಗಾಗಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಪರುಶರಾಮ್‌ ರವರಿಗೆ ಗನ್ ಮ್ಯಾನ್ ಹಾಗೂ ನಮ್ಮ ಕುಟುಂಬಗಳಿಗೂ ರಕ್ಷಣೆಯನ್ನು ಒದಗಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇವೆ. ಅಲ್ಲದೇ ಒಡನಾಡಿಯ ಮಡಿಲು ಸಂಸ್ಥೆಯು ಹೆಣ್ಣು ಮಕ್ಕಳ ಪುನರ್ ವಸತಿ ಕೇಂದ್ರವಾಗಿದ್ದು, ಹೆಣ್ಣು ಮಕ್ಕಳೇ ಇರುವ ಸಂಸ್ಥೆಯಾದ್ದರಿಂದ ಸಂಸ್ಥೆಯ ಎಲ್ಲಾ ಮಕ್ಕಳಿಗೂ ಸಿಬ್ಬಂದಿಗೂ ರಕ್ಷಣೆಯ ಅವಶ್ಯಕತೆ ಇರುತ್ತದೆ. ಹಾಗಾಗಿ ಪೊಲೀಸ್ ರಕ್ಷಣೆಯ ವ್ಯವಸ್ಥೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು” ಎಂದು ಅವರು ಕೋರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ಟ್ಯಾನ್ಲಿ, “ಈ ಪ್ರತಿಭಟನೆಯಲ್ಲಿ ನಾವು ಮಾಡಿದ್ದಾದರೂ ತಪ್ಪೇನಿದೆ? ಸ್ಥಳೀಯವಾಗಿ ನ್ಯಾಯ ಸಿಗದ ಕಾರಣ ನಮ್ಮ ಸಂಸ್ಥೆಯನ್ನು ಹುಡುಕಿಕೊಂಡು ಅನೇಕ ಸಂತ್ರಸ್ತರು ಬರುತ್ತಾರೆ. ಅಧಿಕಾರದ ಬಲದಿಂದ, ಧರ್ಮದ ಬಲದಿಂದ ಪ್ರಕರಣವನ್ನು ಮುಚ್ಚಿಹಾಕುತ್ತಾರೆ. ಈ ರೀತಿಯ ಹೇಸಿಗೆ ಕೆಲಸವನ್ನು ಒಡನಾಡಿ ಎಂದಿಗೂ ಮಾಡಿಲ್ಲ, ಮಾಡುವುದಿಲ್ಲ” ಎಂದಿದ್ದರು.

“ಎದೆಯಲ್ಲಿ ಕಿಚ್ಚು ಇಟ್ಟುಕೊಂಡು ಈ ಸಂಸ್ಥೆಯನ್ನು ಕಟ್ಟಿದ್ದೇವೆ. ನಾನಾಗಲೀ ಪರಶುವಾಗಲೀ ಮಕ್ಕಳಿಗೆ ಮಾನವೀಯ ಧರ್ಮವನ್ನು ಕಲಿಸುತ್ತಿದ್ದೇವೆ. ಮಕ್ಕಳ ಘನತೆಯ ಜೀವನವನ್ನು ಎತ್ತಿಹಿಡಿಯುತ್ತಿದ್ದೇವೆ. ಇದು ಇಂದು ನಿನ್ನೆಯ ಕೆಲಸವಲ್ಲ. ಒಡನಾಡಿಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುವವರಿಗೆ ಇದು ತಿಳಿಯಲಿ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

“ಸಂಸ್ಥೆಯನ್ನು ಯಾಕೆ ಟಾರ್ಗೆಟ್ ಮಾಡುತ್ತಿದ್ದೀರಿ? ನಿಮ್ಮ ಉದ್ದೇಶವೇನು? ನಮ್ಮ ಬಳಿ ಬಂದು ಮಕ್ಕಳು ನೋವು ಹೇಳಿಕೊಂಡಿದ್ದು ತಪ್ಪಾ? ಅವರ ಸಮಸ್ಯೆಗೆ ನಾವು ಕಿವಿಕೊಟ್ಟಿದ್ದು ತಪ್ಪಾ? ಅವರ ಸಮಸ್ಯೆಗಳನ್ನು ಗ್ರಹಿಸಿದ್ದು ತಪ್ಪಾ? ಅವರ ಸಮಲೋಚನೆ ಮಾಡಿ ಸ್ಥಿತಿಯನ್ನು ತಿಳಿದುಕೊಂಡಿದ್ದು ತಪ್ಪಾ? ಬಳಿಕ ಕಾನೂನು ಬದ್ಧವಾಗಿ ಪ್ರಕರಣವನ್ನು ಮಕ್ಕಳ ಕಲ್ಯಾಣ ಸಮಿತಿಗೆ ವರ್ಗಾಯಿಸಿದ್ದು ತಪ್ಪಾ?” ಎಂದು ಪ್ರಶ್ನಿಸಿದ್ದಾರೆ.

“ಆ ನಂತರದಲ್ಲಿ ಎಲ್ಲರೂ ಅವರವರ ಕೆಲಸವನ್ನು ಸರಿಯಾಗಿ ಮಾಡಿದ್ದರೆ ನಾವು ಹೆಚ್ಚು ಮುಂದೆ ಬರಬೇಕಾದ ಅವಶ್ಯಕತೆ ಇರಲಿಲ್ಲ. ಏನಪ್ಪಾ ಮಾಡೋಣ ಅಂತ ಪೊಲೀಸರು ಕೂಡ ಹುಬ್ಬೇರಿಸುತ್ತಾ ಕೂತಿದ್ದಾರೆ. ಏನಪ್ಪ ಮಾಡೋಣ ಅಂದರೆ ಹೇಗೆ? ಎಲ್ಲರ ವಿಚಾರದಲ್ಲಿ ಏನನ್ನು ಮಾಡಿದ್ದೀರೋ ಅದನ್ನೇ ಈ ಪ್ರಕರಣದಲ್ಲಿಯೂ ಮಾಡಿರಿ. ಇಲ್ಲಿ ಒಬ್ಬರಿಗೊಂದು ಕಾನೂನು, ಇನ್ನೊಬ್ಬರಿಗೊಂದು ಕಾನೂನು ಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...