Homeಕರ್ನಾಟಕಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

ಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆ ಹಾಗೂ ಅದರ ಮುಖ್ಯಸ್ಥರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ಮೈಸೂರಿನಲ್ಲಿ ದೂರು ದಾಖಲಾಗಿದೆ.

“ನಮಗೆ ಮತ್ತು ಒಡನಾಡಿ ಸಂಸ್ಥೆಗೆ ಪೊಲೀಸ್‌ ರಕ್ಷಣೆ ನೀಡಬೇಕು” ಎಂದು ಕೋರಿ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿಯವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

“ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾ ಸ್ವಾಮೀಜಿಯ ಅನುಯಾಯಿಗಳು ಮತ್ತು ಮಠದ ಪರವಾಗಿರುವ ಕೆಲವು ಹಿತಾಸಕ್ತಿಗಳು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಹಾಗೂ ಪರಶು ಅವರಿಗೆ ಜೀವ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಹಲವಾರು ಕರೆಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಗಾಗಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಪರುಶರಾಮ್‌ ರವರಿಗೆ ಗನ್ ಮ್ಯಾನ್ ಹಾಗೂ ನಮ್ಮ ಕುಟುಂಬಗಳಿಗೂ ರಕ್ಷಣೆಯನ್ನು ಒದಗಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇವೆ. ಅಲ್ಲದೇ ಒಡನಾಡಿಯ ಮಡಿಲು ಸಂಸ್ಥೆಯು ಹೆಣ್ಣು ಮಕ್ಕಳ ಪುನರ್ ವಸತಿ ಕೇಂದ್ರವಾಗಿದ್ದು, ಹೆಣ್ಣು ಮಕ್ಕಳೇ ಇರುವ ಸಂಸ್ಥೆಯಾದ್ದರಿಂದ ಸಂಸ್ಥೆಯ ಎಲ್ಲಾ ಮಕ್ಕಳಿಗೂ ಸಿಬ್ಬಂದಿಗೂ ರಕ್ಷಣೆಯ ಅವಶ್ಯಕತೆ ಇರುತ್ತದೆ. ಹಾಗಾಗಿ ಪೊಲೀಸ್ ರಕ್ಷಣೆಯ ವ್ಯವಸ್ಥೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು” ಎಂದು ಅವರು ಕೋರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ಟ್ಯಾನ್ಲಿ, “ಈ ಪ್ರತಿಭಟನೆಯಲ್ಲಿ ನಾವು ಮಾಡಿದ್ದಾದರೂ ತಪ್ಪೇನಿದೆ? ಸ್ಥಳೀಯವಾಗಿ ನ್ಯಾಯ ಸಿಗದ ಕಾರಣ ನಮ್ಮ ಸಂಸ್ಥೆಯನ್ನು ಹುಡುಕಿಕೊಂಡು ಅನೇಕ ಸಂತ್ರಸ್ತರು ಬರುತ್ತಾರೆ. ಅಧಿಕಾರದ ಬಲದಿಂದ, ಧರ್ಮದ ಬಲದಿಂದ ಪ್ರಕರಣವನ್ನು ಮುಚ್ಚಿಹಾಕುತ್ತಾರೆ. ಈ ರೀತಿಯ ಹೇಸಿಗೆ ಕೆಲಸವನ್ನು ಒಡನಾಡಿ ಎಂದಿಗೂ ಮಾಡಿಲ್ಲ, ಮಾಡುವುದಿಲ್ಲ” ಎಂದಿದ್ದರು.

“ಎದೆಯಲ್ಲಿ ಕಿಚ್ಚು ಇಟ್ಟುಕೊಂಡು ಈ ಸಂಸ್ಥೆಯನ್ನು ಕಟ್ಟಿದ್ದೇವೆ. ನಾನಾಗಲೀ ಪರಶುವಾಗಲೀ ಮಕ್ಕಳಿಗೆ ಮಾನವೀಯ ಧರ್ಮವನ್ನು ಕಲಿಸುತ್ತಿದ್ದೇವೆ. ಮಕ್ಕಳ ಘನತೆಯ ಜೀವನವನ್ನು ಎತ್ತಿಹಿಡಿಯುತ್ತಿದ್ದೇವೆ. ಇದು ಇಂದು ನಿನ್ನೆಯ ಕೆಲಸವಲ್ಲ. ಒಡನಾಡಿಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುವವರಿಗೆ ಇದು ತಿಳಿಯಲಿ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

“ಸಂಸ್ಥೆಯನ್ನು ಯಾಕೆ ಟಾರ್ಗೆಟ್ ಮಾಡುತ್ತಿದ್ದೀರಿ? ನಿಮ್ಮ ಉದ್ದೇಶವೇನು? ನಮ್ಮ ಬಳಿ ಬಂದು ಮಕ್ಕಳು ನೋವು ಹೇಳಿಕೊಂಡಿದ್ದು ತಪ್ಪಾ? ಅವರ ಸಮಸ್ಯೆಗೆ ನಾವು ಕಿವಿಕೊಟ್ಟಿದ್ದು ತಪ್ಪಾ? ಅವರ ಸಮಸ್ಯೆಗಳನ್ನು ಗ್ರಹಿಸಿದ್ದು ತಪ್ಪಾ? ಅವರ ಸಮಲೋಚನೆ ಮಾಡಿ ಸ್ಥಿತಿಯನ್ನು ತಿಳಿದುಕೊಂಡಿದ್ದು ತಪ್ಪಾ? ಬಳಿಕ ಕಾನೂನು ಬದ್ಧವಾಗಿ ಪ್ರಕರಣವನ್ನು ಮಕ್ಕಳ ಕಲ್ಯಾಣ ಸಮಿತಿಗೆ ವರ್ಗಾಯಿಸಿದ್ದು ತಪ್ಪಾ?” ಎಂದು ಪ್ರಶ್ನಿಸಿದ್ದಾರೆ.

“ಆ ನಂತರದಲ್ಲಿ ಎಲ್ಲರೂ ಅವರವರ ಕೆಲಸವನ್ನು ಸರಿಯಾಗಿ ಮಾಡಿದ್ದರೆ ನಾವು ಹೆಚ್ಚು ಮುಂದೆ ಬರಬೇಕಾದ ಅವಶ್ಯಕತೆ ಇರಲಿಲ್ಲ. ಏನಪ್ಪಾ ಮಾಡೋಣ ಅಂತ ಪೊಲೀಸರು ಕೂಡ ಹುಬ್ಬೇರಿಸುತ್ತಾ ಕೂತಿದ್ದಾರೆ. ಏನಪ್ಪ ಮಾಡೋಣ ಅಂದರೆ ಹೇಗೆ? ಎಲ್ಲರ ವಿಚಾರದಲ್ಲಿ ಏನನ್ನು ಮಾಡಿದ್ದೀರೋ ಅದನ್ನೇ ಈ ಪ್ರಕರಣದಲ್ಲಿಯೂ ಮಾಡಿರಿ. ಇಲ್ಲಿ ಒಬ್ಬರಿಗೊಂದು ಕಾನೂನು, ಇನ್ನೊಬ್ಬರಿಗೊಂದು ಕಾನೂನು ಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....