Homeಕರ್ನಾಟಕಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

ಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆ ಹಾಗೂ ಅದರ ಮುಖ್ಯಸ್ಥರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ಮೈಸೂರಿನಲ್ಲಿ ದೂರು ದಾಖಲಾಗಿದೆ.

“ನಮಗೆ ಮತ್ತು ಒಡನಾಡಿ ಸಂಸ್ಥೆಗೆ ಪೊಲೀಸ್‌ ರಕ್ಷಣೆ ನೀಡಬೇಕು” ಎಂದು ಕೋರಿ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿಯವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

“ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾ ಸ್ವಾಮೀಜಿಯ ಅನುಯಾಯಿಗಳು ಮತ್ತು ಮಠದ ಪರವಾಗಿರುವ ಕೆಲವು ಹಿತಾಸಕ್ತಿಗಳು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಹಾಗೂ ಪರಶು ಅವರಿಗೆ ಜೀವ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಹಲವಾರು ಕರೆಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಗಾಗಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಪರುಶರಾಮ್‌ ರವರಿಗೆ ಗನ್ ಮ್ಯಾನ್ ಹಾಗೂ ನಮ್ಮ ಕುಟುಂಬಗಳಿಗೂ ರಕ್ಷಣೆಯನ್ನು ಒದಗಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇವೆ. ಅಲ್ಲದೇ ಒಡನಾಡಿಯ ಮಡಿಲು ಸಂಸ್ಥೆಯು ಹೆಣ್ಣು ಮಕ್ಕಳ ಪುನರ್ ವಸತಿ ಕೇಂದ್ರವಾಗಿದ್ದು, ಹೆಣ್ಣು ಮಕ್ಕಳೇ ಇರುವ ಸಂಸ್ಥೆಯಾದ್ದರಿಂದ ಸಂಸ್ಥೆಯ ಎಲ್ಲಾ ಮಕ್ಕಳಿಗೂ ಸಿಬ್ಬಂದಿಗೂ ರಕ್ಷಣೆಯ ಅವಶ್ಯಕತೆ ಇರುತ್ತದೆ. ಹಾಗಾಗಿ ಪೊಲೀಸ್ ರಕ್ಷಣೆಯ ವ್ಯವಸ್ಥೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು” ಎಂದು ಅವರು ಕೋರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ಟ್ಯಾನ್ಲಿ, “ಈ ಪ್ರತಿಭಟನೆಯಲ್ಲಿ ನಾವು ಮಾಡಿದ್ದಾದರೂ ತಪ್ಪೇನಿದೆ? ಸ್ಥಳೀಯವಾಗಿ ನ್ಯಾಯ ಸಿಗದ ಕಾರಣ ನಮ್ಮ ಸಂಸ್ಥೆಯನ್ನು ಹುಡುಕಿಕೊಂಡು ಅನೇಕ ಸಂತ್ರಸ್ತರು ಬರುತ್ತಾರೆ. ಅಧಿಕಾರದ ಬಲದಿಂದ, ಧರ್ಮದ ಬಲದಿಂದ ಪ್ರಕರಣವನ್ನು ಮುಚ್ಚಿಹಾಕುತ್ತಾರೆ. ಈ ರೀತಿಯ ಹೇಸಿಗೆ ಕೆಲಸವನ್ನು ಒಡನಾಡಿ ಎಂದಿಗೂ ಮಾಡಿಲ್ಲ, ಮಾಡುವುದಿಲ್ಲ” ಎಂದಿದ್ದರು.

“ಎದೆಯಲ್ಲಿ ಕಿಚ್ಚು ಇಟ್ಟುಕೊಂಡು ಈ ಸಂಸ್ಥೆಯನ್ನು ಕಟ್ಟಿದ್ದೇವೆ. ನಾನಾಗಲೀ ಪರಶುವಾಗಲೀ ಮಕ್ಕಳಿಗೆ ಮಾನವೀಯ ಧರ್ಮವನ್ನು ಕಲಿಸುತ್ತಿದ್ದೇವೆ. ಮಕ್ಕಳ ಘನತೆಯ ಜೀವನವನ್ನು ಎತ್ತಿಹಿಡಿಯುತ್ತಿದ್ದೇವೆ. ಇದು ಇಂದು ನಿನ್ನೆಯ ಕೆಲಸವಲ್ಲ. ಒಡನಾಡಿಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುವವರಿಗೆ ಇದು ತಿಳಿಯಲಿ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

“ಸಂಸ್ಥೆಯನ್ನು ಯಾಕೆ ಟಾರ್ಗೆಟ್ ಮಾಡುತ್ತಿದ್ದೀರಿ? ನಿಮ್ಮ ಉದ್ದೇಶವೇನು? ನಮ್ಮ ಬಳಿ ಬಂದು ಮಕ್ಕಳು ನೋವು ಹೇಳಿಕೊಂಡಿದ್ದು ತಪ್ಪಾ? ಅವರ ಸಮಸ್ಯೆಗೆ ನಾವು ಕಿವಿಕೊಟ್ಟಿದ್ದು ತಪ್ಪಾ? ಅವರ ಸಮಸ್ಯೆಗಳನ್ನು ಗ್ರಹಿಸಿದ್ದು ತಪ್ಪಾ? ಅವರ ಸಮಲೋಚನೆ ಮಾಡಿ ಸ್ಥಿತಿಯನ್ನು ತಿಳಿದುಕೊಂಡಿದ್ದು ತಪ್ಪಾ? ಬಳಿಕ ಕಾನೂನು ಬದ್ಧವಾಗಿ ಪ್ರಕರಣವನ್ನು ಮಕ್ಕಳ ಕಲ್ಯಾಣ ಸಮಿತಿಗೆ ವರ್ಗಾಯಿಸಿದ್ದು ತಪ್ಪಾ?” ಎಂದು ಪ್ರಶ್ನಿಸಿದ್ದಾರೆ.

“ಆ ನಂತರದಲ್ಲಿ ಎಲ್ಲರೂ ಅವರವರ ಕೆಲಸವನ್ನು ಸರಿಯಾಗಿ ಮಾಡಿದ್ದರೆ ನಾವು ಹೆಚ್ಚು ಮುಂದೆ ಬರಬೇಕಾದ ಅವಶ್ಯಕತೆ ಇರಲಿಲ್ಲ. ಏನಪ್ಪಾ ಮಾಡೋಣ ಅಂತ ಪೊಲೀಸರು ಕೂಡ ಹುಬ್ಬೇರಿಸುತ್ತಾ ಕೂತಿದ್ದಾರೆ. ಏನಪ್ಪ ಮಾಡೋಣ ಅಂದರೆ ಹೇಗೆ? ಎಲ್ಲರ ವಿಚಾರದಲ್ಲಿ ಏನನ್ನು ಮಾಡಿದ್ದೀರೋ ಅದನ್ನೇ ಈ ಪ್ರಕರಣದಲ್ಲಿಯೂ ಮಾಡಿರಿ. ಇಲ್ಲಿ ಒಬ್ಬರಿಗೊಂದು ಕಾನೂನು, ಇನ್ನೊಬ್ಬರಿಗೊಂದು ಕಾನೂನು ಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...