Homeಕರ್ನಾಟಕಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

ಗೌರಿಯ ದನಿ ಅಡಗುವುದಿಲ್ಲ: ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಡನಾಡಿಗಳ ಪ್ರತಿಜ್ಞೆ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಐದನೇ ವರ್ಷದ ಸ್ಮರಣೆಯ ಭಾಗವಾಗಿ, ಗೌರಿಯವರ ಸಮಾಧಿಗೆ ಹೋರಾಟಗಾರರು, ಗೌರಿಯ ಒಡನಾಡಿಗಳು ಹಾಗೂ ಜನಪರ ಆಶಯಗಳಿಗಾಗಿ ದುಡಿಯುತ್ತಿರುವವರು ನಮನ ಸಲ್ಲಿಸಿದರು.

ಗೌರಿ ನಡೆದ ಹಾದಿಯಲ್ಲಿ ನಾವು ಕ್ರಮಿಸಬೇಕಾದ ಅನಿವಾರ್ಯತೆ ಹಾಗೂ ಕಾಲದ ತಲ್ಲಣಗಳಿಗೆ ಗೌರಿ ಸ್ಪಂದಿಸುತ್ತಿದ್ದ ರೀತಿಯನ್ನು ಸ್ಮರಿಸಿ ಭಾವುಕರಾದರು.

ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಗೌರಿಯವರ ಒಡನಾಡಿ ನೂರ್‌ ಶ್ರೀಧರ್‌ ಮಾತನಾಡಿ, “ಇಂದು ಗೌರಿ ಇದ್ದಿದ್ದರೆ ಕರ್ನಾಟಕದ ಪರಿಸ್ಥಿತಿ ನೋಡಿ ವಿಲವಿಲ ಒದ್ದಾಡುತ್ತಿದ್ದರು. ರಾಜ್ಯಾದ್ಯಂತ ಓಡಾಡುತ್ತಿದ್ದರು. ಈ ದುರಿತ ಕಾಲದಲ್ಲಿ ಏನು ಮಾಡಬೇಕೆಂದು ಚಿಂತಿಸುತ್ತಿದ್ದರು. ಒಂದು ಕ್ಷಣ ಸಮಾಧಾನದಿಂದ ಇರುತ್ತಿದ್ದ ಜೀವವಾಗಿರಲಿಲ್ಲ ಗೌರಿ” ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೌರಿಯ ಆಶಯಗಳನ್ನು ಮುಂದುವರಿಸುತ್ತಲೇ ಇದ್ದೇವೆ. ಗೌರಿಯ ದನಿಯನ್ನು, ಅವರ ಪತ್ರಿಕೆಯನ್ನು ಅಡಗಿಸಬೇಕು ಎಂದು ಹತ್ಯೆ ಮಾಡಿದರು. ಆದರೆ ಎಲ್ಲ ಸವಾಲುಗಳ ನಡುವೆಯೇ ಗೌರಿಯ ಪತ್ರಿಕೆಯನ್ನು ಮುಂದುವರಿಸಿದ್ದೇವೆ. ಟಾಬ್ಲ್ಯಾಡ್ ಕಾಲ ಮುಗಿಯಿತು, ವಾರಪತ್ರಿಕೆಗಳನ್ನು ಇನ್ನು ಮುಂದೆ ತರಲು ಸಾಧ್ಯವಿಲ್ಲ  ಅದೆಲ್ಲಾ ಅಭಿಪ್ರಾಯಗಳು ಬಂದವು. ಗೌರಿಯ ದನಿಯನ್ನು ನಿಲ್ಲಿಸಬಾರದೆಂದು ಪತ್ರಿಕೆಯನ್ನು ಹೊರತರುತ್ತಿದ್ದೇವೆ” ಎಂದು ತಿಳಿಸಿದರು.

“ಪತ್ರಿಕೆಯ ಹಿಂದಿನ ನೋವೇನು ಎಂಬುದು ಅನೇಕರಿಗೆ ಗೊತ್ತಿಲ್ಲ. ಗೌರಿಯ ಜೊತೆ ಕೆಲಸ ಮಾಡಿದ ತಂಡ ಚದುರಿಹೋಗಲಿಲ್ಲ. ಗೌರಿಯ ಆಶಯಗಳ ಜೊತೆ ನಿಂತು, ಅರ್ಧ ಸಂಬಳದಲ್ಲಿ ಕೆಲಸ ಮಾಡಿತು. ಕೆಲವು ಸಲ ಸಂಬಳವೇ ಇರಲಿಲ್ಲ. ಆದರೂ ಲಕ್ಷಾಂತರ ರೂಪಾಯಿ ಸಾಲವನ್ನು ತಲೆಯ ಮೇಲೆ ಹಾಕಿಕೊಂಡು ಪತ್ರಿಕೆಯನ್ನು ಮುಂದುವರಿಸಿದ್ದಾರೆ” ಎಂದು ಹೇಳಿದರು.

ಪತ್ರಿಕೆಯಷ್ಟೇ ಅಲ್ಲ, ಆಧುನಿಕ ಕಾಲಕ್ಕೆ ಹೊಂದಿಕೊಳ್ಳಬೇಕೆಂದು ಗೌರಿ ಬಯಸುತ್ತಿದ್ದರು. ಅದರ ಭಾಗವಾಗಿ ‘ನಾನುಗೌರಿ.ಕಾಂ’, ‘ಗೌರಿಲಂಕೇಶ್.ಕಾಂ’ (ಇಂಗ್ಲಿಷ್‌) ವೆಬ್‌ಸೈಟ್‌ಗಳು ಕೆಲಸ ಮಾಡುತ್ತಿವೆ. ಗೌರಿಯ ಹೆಸರಲ್ಲಿ ಪತ್ರಿಕೆಯನ್ನು ಮುಂದುವರಿಸಲು ಸರ್ಕಾರ ಅವಕಾಶ ಕೊಡಲಿಲ್ಲ. ಸ್ನೇಹಿತರು ತರುತ್ತಿದ್ದ ‘ನ್ಯಾಯಪಥ’ವನ್ನೇ ಗೌರಿಪತ್ರಿಕೆಯಾಗಿ ಮುಂದುವರಿಸಿಕೊಂಡು ಬಂದಿದ್ದೇವೆ ಎಂದು ವಿವರಿಸಿದರು.

ಮೊದಲೆಲ್ಲ ಪೀತ ಪತ್ರಿಕೋದ್ಯಮವಿತ್ತು. ಈಗ ಪ್ರೇತ ಪತ್ರಿಕೋದ್ಯಮ ಬಂದಿದೆ. ಇದರ ನಡುವೆ ಚಳವಳಿಗೆ ಬೆನ್ನೆಲುಬಾಗಿರುವ ಮಾಧ್ಯಮಗಳಿವೆ. ಪ್ರೇತ ಪತ್ರಿಕೋದ್ಯಮ ವಿರುದ್ಧ ‘ಪ್ರೀತಿ’ ಪತ್ರಿಕೋದ್ಯಮ ಬೆಳೆಯುತ್ತಿದೆ. ‘ವಾರ್ತಾಭಾರತಿ’, ‘ಈದಿನ.ಕಾಂ’, ‘ಪೀಪಲ್‌.ಕಾಂ’, ‘ಕನ್ನಡಒನ್‌.ಕಾಂ’, ‘ಪ್ರಜಾವಾಣಿ’, ‘ಹಿಂದೂ’ ಮೊದಲಾದ ಮಾಧ್ಯಮಗಳು ಚಳವಳಿಯನ್ನು ಮುಂದುವರಿಸಿವೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಅಕ್ಕಮಹಾದೇವಿ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಸಬೀಹ ಭೂಮಿಗೌಡ ಮಾತನಾಡಿ, “ಗೌರಿಯನ್ನು ಕೊಂದ ಶಕ್ತಿಗಳು ಮತ್ತಷ್ಟು ಬೆಳೆಯುತ್ತಿವೆ. ಕ್ರೌರ್ಯವನ್ನು ಮತ್ತಷ್ಟು ಹರಡುತ್ತಿವೆ. ಆದರೆ ಗೌರಿ ನಮ್ಮನ್ನು ಎಚ್ಚರಿಸುತ್ತಿದ್ದಾಳೆ. ನಾವು ಮಾಡುತ್ತಿರುತವ ಕೆಲಸ ಸಾಲುತ್ತಿಲ್ಲ ಎನ್ನುತ್ತಿಲ್ಲ” ಎಂದು ಎಚ್ಚರಿಸಿದರು.

ವಕೀಲರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಗೌರಿ ಇಂಗ್ಲಿಷ್‌ ಪತ್ರಿಕೋದ್ಯಮದಿಂದ ಕನ್ನಡಕ್ಕೆ ಬಂದವರು. ಕನ್ನಡ ಭಾಷೆ ಮೇಲೆ ಸಾಹಿತ್ಯಾತ್ಮಕ ಪ್ರಭುತ್ವ ಸಾಧಿಸಲಿಲ್ಲ. ಅವರ ಬರಹದಲ್ಲಿ ಸಾಹಿತ್ಯಿಕ ಶಬ್ದಗಳಿರಲಿಲ್ಲ. ಆದರೂ ಏಕೆ ಗೌರಿಯವರ ಬರಹ ಅವರನ್ನು ಚುಚ್ಚಿತು? ಕೇವಲ ಹತ್ತು ವರ್ಷಗಳಲ್ಲಿ ಅವರನ್ನು ಕೊಲ್ಲುವಂತೆ ಪ್ರೇರೇಪಿಸಿತು? ಏಕೆಂದರೆ ಅವರ ಬರಹದಲ್ಲಿ ನೈಜತೆ ಇತ್ತು. ಜನರ ಬಗ್ಗೆ ನಿಜವಾದ ಕಾಳಜಿ ಇತ್ತು” ಎಂದು ಹೇಳಿದರು.

ಇದನ್ನೂ ಓದಿರಿ: ಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

ಮನುಸ್ಮೃತಿ ಹಾಗೂ ಒಡೆದು ಆಳುವ ಮನಸ್ಥಿತಿಗಳಿಗೆ ಗೌರಿಯ ಕಾಳಜಿಗಳು ಆತಂಕ ತಂದಿದ್ದವು. ಗೌರಿಯನ್ನು ಕೊಂದರೆ ಮೇಲುಗೈ ಸಾಧಿಸಬಹುದು ಎಂದು ಭಾವಿಸಿದರು. ಆದರೆ ಗೌರಿ ಹತ್ಯೆಯ ಬಳಿಕ ಜನರು ಒಂದಾಗಿ ನಿಂತರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಸೃಷ್ಟಿಯಾಯಿತು. ಆ ನಂತರದಲ್ಲಿ ಈ ಕೊಲೆಗಡುಕರು ಹತ್ಯೆಗೆ ಕೈ ಹಾಕಿಲ್ಲ. ಆದರೆ ಬೇರೆ ಆಯಾಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಸತ್ಯಕ್ಕೆ ಕನ್ನಡಿ ಹಿಡಿದವರನ್ನು ಜೈಲಿಗೆ ಹಾಕುವ ಕೆಲಸ ಮಾಡುತ್ತಿದ್ದಾರೆ. ತೀಸ್ತಾ ಸೆಟಲ್ವಾಡ್‌ ಹಾಗೂ ಮೊಹಮ್ಮದ್‌ ಜುಬೇರ್‌ ಪ್ರಕರಣ ಇತ್ತೀಚಿನ ಉದಾಹರಣೆಗಳಾಗಿವೆ. ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದನ್ನು ನೋಡಿದ್ದೇವೆ. ಈ ಬೆಳವಣಿಗೆಗಳ ಹಿಂದಿನ ಮನಸ್ಥಿತಿಗಳನ್ನು ಒಡೆದು ಓಡಿಸಬೇಕಾಗಿದೆ ಎಂದು ಆಶಿಸಿದರು.

ಮಾಜಿ ಐಎಎಸ್ ಅಧಿಕಾರಿಯಾದ ಸಸಿಕಾಂತ್ ಸೆಂಥಿಲ್‌ ಮಾತನಾಡಿ, “ಗೌರಿಯ ಕೆಲಸವನ್ನು ಮುಂದುವರಿಸಲು ನಾವೆಲ್ಲ ಜೊತೆಗಿರುತ್ತೇವೆ. ಇದು ವ್ಯಕ್ತಿಗಳ ಜೊತೆಗಿನ ಸಮಸ್ಯೆಯಲ್ಲ, ಮನಸ್ಥಿತಿಗಳ ಜೊತೆಗಿನ ಹೋರಾಟ” ಎಂದರು.

ಗೌರಿಯವರ ತಾಯಿ ಇಂದಿರಾ ಲಂಕೇಶ್‌, ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಗೌರಿ ಸ್ಮಾರಕ ಟ್ರಸ್ಟ್ ಸದಸ್ಯರಾದ ಪ್ರೊ.ವಿ.ಎಸ್ ಶ್ರೀಧರ್, ದೀಪು, ಕೆ.ಎಲ್ ಅಶೋಕ್, ಬಹುಭಾಷ ನಟ ಪ್ರಕಾಶ್ ರಾಜ್,  ಸಾಮಾಜಿಕ ಹೋರಾಟಗಾರ್ತಿಯರಾದ ಅಕ್ಕೈ ಪದ್ಮಶಾಲಿ, ದು.ಸರಸ್ವತಿ, ಚಿಂತಕ ಶಿವಸುಂದರ್, ಸಿನಿಮಾ ನಿರ್ದೇಶಕ ಸಂಜಯ್ ಕಾಕ್, ಪ್ರೊ.ನಗರಿ ಬಾಬಯ್ಯ, ಇರ್ಷಾದ್ ಅಹಮದ್ ದೇಶಾಯಿ, ಕಲೀಂಉಲ್ಲಾ, ಮಲ್ಲಿಗೆ ಸಿರಿಮನೆ, ಡಿ.ಎನ್.ಗುರುಪ್ರಸಾದ್ ಸೇರಿದಂತೆ ಇತರರು ನಮನ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...