Homeಕರ್ನಾಟಕಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

ಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಮತಾಂಧ ಶಕ್ತಿಗಳು ಹತ್ಯೆ ಮಾಡಿ ಇಂದಿಗೆ ಐದು ವರ್ಷಗಳಾಗುತ್ತಿವೆ. ಈ ಹಿನ್ನಲೆಯಲ್ಲಿ ಗೌರಿ ಲಂಕೇಶ್ ಅವರ ಕುಟುಂಬ, ಅವರ ಒಡನಾಡಿಗಳು ಮತ್ತು ಹೋರಾಟಗಾರರು ಚಾಮರಾಜಪೇಟೆ ಸ್ಮಶಾನದಲ್ಲಿ ಇರುವ ಅವರ ಸಮಾಧಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.

ಜಗದ ತುಂಬಾ ಗೌರಿ ಲಂಕೇಶ್ ಹುಟ್ಟಿ ಐದು ವರ್ಷಗಳು ಆಗಿವೆ. ನೀವು ಗೌರಿಯನ್ನು ಕೊಲ್ಲಬಹುದು, ಅವರ ಆಶಯ ಚಿಂತನೆಗಳನ್ನಲ್ಲ. ನಾವೀಗ ಸಾವಿರ ಸಾವಿರ ಗೌರಿಯರು.

ಬಹುಭಾಷಾ ನಟ Prakash Raj ಅವರು ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಖ್ಯಾತ ಬರಹಗಾರ್ತಿ ಅರುಂಧತಿ ರಾಯ್ ಅವರು ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಗೌರಿ ಲಂಕೇಶ್ ಸ್ಮರಣೆ ಪ್ರಾರಂಭದ ವಿಡಿಯೊ.

ಗೌರಿ ಲಂಕೇಶ್ ಕುರಿತು ಅವರ ಒಡನಾಡಿ ಡಾ.ಸಬಿಹಾ ಭೂಮಿಗೌಡ ಅವರು ಕಣ್ಣೀರು ಸುರಿಸುತ್ತಾ ಮಾತನಾಡಿದರು.

ಕೆವಿಎಸ್‌ ತಂಡದಿಂದ,‘ಗೌರಿ ನಿಮಗೆ ಲಾಲ್ ಸಲಾಂ, ಗಗನವೆ ನಿಮಗೆ ನೀಲ್ ಸಲಾಂ’ ಹಾಡು.

ಗೌರಿ ಲಂಕೇಶ್‌ ಪತ್ರಿಕೆಯನ್ನು ಅವರ ಕೊಲೆಗಾರರಿಗೆ ತಡೆದು ನಿಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಹೋರಾಟಗಾರರಾದ ನೂರ್ ಶ್ರೀಧರ್ ಹೇಳಿದ್ದಾರೆ.

“ಅವಳು ನನಗೆ ಹೂವು ಹಾಕಬೇಕಿತ್ತು, ನಾನು ಹೂವು ಹಾಕುತ್ತಿದ್ದೇನೆ” ಎನ್ನುತ್ತಾ ಭಾವುಕರಾದ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್.

ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಸಿನಿಮಾ ನಿರ್ದೇಶಕ ಸಂಜಯ್ ಖಾಖ್.

‘ಗೌರಿ ಲಂಕೇಶ್ ತಮ್ಮ ವಿರೋಧಿಗಳಿಗೂ ಪ್ರೀತಿ ಹಂಚಿದವರು’ ~ಲೇಖಕಿ ದು.ಸರಸ್ವತಿ.

ಸಮಾಜ ವಿರೋಧಿ ಮನಸ್ಥಿತಿಗಳ ವಿರುದ್ಧ ಹೋರಾಡಬೇಕು. ~ ರಾಜಲಕ್ಷ್ಮಿ ಅಂಕಲಗಿ, ಹೈಕೋರ್ಟ್ ವಕೀಲರು.

ಗೌರಿ ಲಂಕೇಶ್ ನಮ್ಮ ಹೋರಾಟಗಳ ಸ್ಪೂರ್ತಿ. ~ಮಾಜಿ ಐಎಎಸ್ ಅಧಿಕಾರಿ ಸಸಿಕುಮಾರ್ ಸೆಂಥಿಲ್

ಗೌರಿ ಲಂಕೇಶ್ ಅವರ ಆಶಯಗಳನ್ನು ಹೊತ್ತು ಕೊಂಡು ಮುಂದೆ ಸಾಗುತ್ತೇವೆ. ~ಹೋರಾಟಗಾರ ಇರ್ಷಾದ್ ಅಹ್ಮದ್ ದೇಸಾಯಿ.

“ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು, ಮೆರವಣಿಗೆ ಹೊರಡುತ್ತಾರೆ”. ಗೌರಿ ಲಂಕೇಶ್ ಅವರ ಇಷ್ಟದ ಹಾಡನ್ನು ಹಾಡಿದ ಲೇಖಕಿ ದು. ಸರಸ್ವತಿ, ಹೋರಾಟಗಾರ್ತಿ ಮಲ್ಲಿಗೆ, ಸಿರಿಮನೆ, ಅಕ್ಕೈ ಪದ್ಮಶಾಲಿ, ಮಲ್ಲು ಕುಂಬಾರ್‌, ಕೌಸಲ್ಯ ಹಾಗೂ ಸಂಗಾತಿಗಳು.

ಇಂದು ಸಂಜೆ ಐದು ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆಯುವ “ಗೌರಿ ನೆನಪು” ಕಾರ್ಯಕ್ರಮದ ಬಗ್ಗೆ ಹೋರಾಟಗಾರ ಕೆ.ಎಲ್. ಅಶೋಕ್ ಅವರು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...