Homeಕರ್ನಾಟಕಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

- Advertisement -
- Advertisement -

| ಎನ್.ಗೌಡ |

ದೇವೇಗೌಡರ ರಾಜಕೀಯ ಗ್ರಾಫ್ ಅತ್ಯಂತ ಪಾತಾಳಕ್ಕಿಳಿದ ಹಲವು ಸಂದರ್ಭಗಳು ಕಳೆದ ನಾಲ್ಕು ದಶಕಗಳಲ್ಲಿ ಬಂದು ಹೋಗಿವೆ. ಆದರೆ, ಅವರು ಮತ್ತೆ ಮತ್ತೆ ಫೀನಿಕ್ಸ್ (ಧೂಳಿನಿಂದ ಮೇಲೆದ್ದು ಬರುತ್ತೇನೆ ಎಂದು ವಿದಾಯ ಭಾಷಣದಲ್ಲಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಅಬ್ಬರಿಸಿದ್ದರು)ನಂತೆ ಮೇಲೇಳುತ್ತಾ ಬರುತ್ತಾರೆ. ಹಾಗೆ ಮೇಲೆದ್ದು ಬರುವಾಗ ಅವರಿಗೆ ಸಾಥ್ ಕೊಟ್ಟ ಕೆಲವು ನಿರ್ದಿಷ್ಟ ಭಾಗಗಳಿವೆ. ನಿಧಾನಕ್ಕೆ ಅಂತಹ ಕ್ಷೇತ್ರಗಳ ಮೇಲೆ ಅವರ ಹಿಡಿತವೂ ಹೆಚ್ಚಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಸಹಾ ಅವುಗಳಲ್ಲಿ ಒಂದು. ಭೌಗೋಳಿಕವಾಗಿ ಒಂದು ಕಡೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಿಗೆ ಅದು ಹೊಂದಿಕೊಂಡಿರುವುದೂ ಅದಕ್ಕೆ ಕಾರಣವಿರಬಹುದು. ಇದೇ ಕ್ಷೇತ್ರದ ಎಂಎಲ್‍ಎ ಕೆ.ಸಿ.ನಾರಾಯಣಗೌಡ ಈಗ ರಾಜೀನಾಮೆ ಕೊಟ್ಟು ಮುಂಬೈನ ಸೋಫಿಟೆಲ್ ಸೇರಿಕೊಂಡಿರುವವರಲ್ಲಿ ಒಬ್ಬರು.

ಕೆ.ಆರ್.ಪೇಟೆ ಕೃಷ್ಣ ಅವರು ಈ ಕ್ಷೇತ್ರದಲ್ಲಿ ಸಾಕಷ್ಟು ಕಾಲ ದೇವೇಗೌಡರ ಪಕ್ಷವನ್ನು ಪ್ರತಿನಿಧಿಸಿದ್ದ ಹಿರಿಯ ರಾಜಕಾರಣಿ. ಒಮ್ಮೆ ಸಂಸತ್ ಸದಸ್ಯರೂ (ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ) ಆಗಿದ್ದ ಅವರು 2004ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಧಿಕಾರಕ್ಕೆ ಬಂದಾಗ ಸ್ಪೀಕರ್ ಆಗಿದ್ದರು. ನಂತರದ ಜೆಡಿಎಸ್-ಬಿಜೆಪಿ ಮೈತ್ರಿಯನ್ನೂ (ದೇವೇಗೌಡರ ಸೂಚನೆಗಳಿಗನುಗುಣವಾಗಿ) ಸ್ಪೀಕರ್ ಆಗಿ ನಿಭಾಯಿಸಿದ್ದರು. 2008ರಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಕೆ.ಬಿ.ಚಂದ್ರಶೇಖರ್ ಎದುರು ಸೋತಿದ್ದರು. ಕೇವಲ 3,500 ಮತಗಳಿಂದ ಸೋತಿದ್ದರಿಂದ ನಂತರದ ಸಾಲಿನಲ್ಲಿ, ಅಂದರೆ 2013ರಲ್ಲೂ ತಮಗೇ ಟಿಕೆಟ್ ಎಂದು ಕೃಷ್ಣ ಭಾವಿಸಿದ್ದು ಸಹಜವಾಗಿತ್ತು. ಆದರೆ ಮುಂಬೈನಲ್ಲಿ ಹೋಟೆಲ್ ಮತ್ತಿತರ ಬಿಸಿನೆಸ್ ಮಾಡಿಕೊಂಡಿದ್ದ ಕೆ.ಸಿ.ನಾರಾಯಣಗೌಡರು ಅಷ್ಟು ಹೊತ್ತಿಗೆ ಕೆ.ಆರ್.ಪೇಟೆಯಲ್ಲಿ ‘ಸಮಾಜ ಸೇವೆ’ ಶುರು ಹಚ್ಚಿಕೊಂಡಿದ್ದರು.

ಹಣದ ಕುಳಗಳಿಗೆ ಮೊದಲ ಆದ್ಯತೆ ಕೊಡುವ ದೇವೇಗೌಡರ ಮನದಿಂಗಿತ ಅರಿವಾಗತೊಡಗಿ ಕೃಷ್ಣರಿಗೆ ಆತಂಕ ಶುರುವಾಯಿತು. ‘ಏನು ಮಾಡೋಣ ಗುರುಗಳೇ, ನಮಗೂ ಚುನಾವಣೆ ನಡೆಸಲು ಹಣದ ಅಗತ್ಯ ಇರುತ್ತೆ. ಬಹಳ ಕಷ್ಟದಲ್ಲಿದ್ದೇವೆ’ ಎಂದರು ದೊಡ್ಡಗೌಡರು. ಪ್ರಾಮಾಣಿಕತೆ ಮತ್ತಿತರ ಸಾರ್ವಜನಿಕ ಮೌಲ್ಯಗಳನ್ನು ಇನ್ನೂ ಉಳಿಸಿಕೊಂಡಿದ್ದ ಕೃಷ್ಣರಿಗೆ ಬೇರೆ ದಾರಿಯಿರಲಿಲ್ಲ. ದೇವೇಗೌಡರ ಬಳಿ ಹೋಗಿ ‘ನಾನು ಅನ್ಯಾಯದ ಹಣ ಸಂಪಾದನೆ ಮಾಡಿಲ್ಲ; ನನ್ನದೊಂದು ಸೈಟ್ ಇದೆ. ಅದನ್ನು ಮಾರಿ ಎಷ್ಟು ಹಣ ಬರುತ್ತೋ ಅಷ್ಟನ್ನು ಕೊಡುತ್ತೇನೆ’ ಎಂದರು. ‘ಸರಿ ನೋಡೋಣ’ ಎಂದ ದೊಡ್ಡಗೌಡರು, ಟಿಕೆಟ್ ಕೊಟ್ಟಿದ್ದು ಕೆ.ಸಿ.ನಾರಾಯಣಗೌಡರಿಗೆ!

ಬೇಸತ್ತ ಕೃಷ್ಣ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್‍ನ ಪಾರಂಪರಿಕ ಓಟ್‍ಬ್ಯಾಂಕ್ ಮತ್ತು ತಮ್ಮ ಕುಟುಂಬದ ಹಿಡಿತ ಎರಡನ್ನೂ ಹೊಂದಿದ್ದ ಕೆಬಿಸಿ ಎರಡನೇ ಸ್ಥಾನಕ್ಕೆ ಬಂದರು. 30,000 ಮತಗಳನ್ನು ಪಡೆದ ಕೃಷ್ಣ ಅವರು ಮೂರನೇ ಸ್ಥಾನದಲ್ಲಿದ್ದರು. ಹೀಗಿದ್ದೂ ಜೆಡಿಎಸ್ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆದ್ದರು. ಇದು ದೇವೇಗೌಡರು ಮತ್ತು ಅವರ ಪಕ್ಷಕ್ಕೆ ಕೆ.ಆರ್.ಪೇಟೆ ಮತದಾರರು ತೋರಿದ ನಿಷ್ಠೆಯ ಪ್ರತೀಕವಾಗಿತ್ತು. ಅದು 2018ರ ಚುನಾವಣೆಯಲ್ಲೂ ಎದ್ದು ಕಂಡಿತು.

ಈ ಸಾರಿ ಕೆ.ಸಿ.ಎನ್.ಗೆ ಟಿಕೆಟ್ ಇಲ್ಲ ಎಂಬ ಸಂದೇಶ ಹರಿದಾಡಲು ಆರಂಭವಾಯಿತು. ಅದಕ್ಕೆ ತಕ್ಕಂತೆ ಟಿಕೆಟ್ ಹಂಚಿಕೆಯ ಮೊದಲ ಪಟ್ಟಿಗಳಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಅಭ್ಯರ್ಥಿಯ ಘೋಷಣೆಯೂ ಆಗಲಿಲ್ಲ. ಅನಿವಾರ್ಯವಾಗಿ ಮತ್ತೊಮ್ಮೆ ಕಪ್ಪ ಸಲ್ಲಿಸಿ ನಾರಾಯಣಗೌಡರು ಟಿಕೆಟ್ ಪಡೆದುಕೊಂಡರು. ತಾನು ಭ್ರಷ್ಟಾಚಾರ ಮಾಡಲಿಲ್ಲ, ಪಕ್ಷಕ್ಕೆ ನಿಷ್ಠನಾಗಿದ್ದೆ, ಇದ್ದುದರಲ್ಲಿ ಚೆನ್ನಾಗಿ ಕೆಲಸ ಮಾಡಿದ್ದೇನೆ, ನನ್ನಂಥವನಿಗೆ ಹೀಗೆ ಮಾಡಿದರಲ್ಲಾ ಎಂಬ ಸಿಟ್ಟು ನಾರಾಯಣಗೌಡರಲ್ಲಿ ಹುಟ್ಟಿಕೊಂಡು ಬೆಳೆದು ಇದೀಗ ಅದು ಬಂಡಾಯವೇಳುವವರೆಗೆ ಕೊಂಡೊಯ್ದಿದೆ. ಏಕೆಂದರೆ, ಸ್ವತಃ ದುಡ್ಡಿನ ಕುಳವಾದ ಗೌಡರಿಗೆ ಬಿಜೆಪಿಯ 30 ಕೋಟಿ ಆಸೆ ಹುಟ್ಟಿಸಿರಲಾರದು. ಆದರೆ ನಾರಾಯಣಗೌಡರು ಮರೆಯುತ್ತಿರುವ ಒಂದು ವಿಷಯವಿದೆ. ಈ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕೃಷ್ಣ ಅವರೂ ಕೆ.ಬಿ.ಸಿಗೇ ಬೆಂಬಲಿಸಿದ್ದರೂ, ನಾರಾಯಣಗೌಡರು 17,000ಕ್ಕೂ ಹೆಚ್ಚು ಅಂತರದಿಂದ ಗೆಲ್ಲಲು ಜೆಡಿಎಸ್ ಟಿಕೆಟ್ಟೇ ಕಾರಣ. ದೇವೇಗೌಡರು ಕೆ.ಆರ್.ಪೇಟೆಯವರಿಗೆ ಅದೇನು ಮಾಯ ಮಾಡಿದ್ದಾರೋ ಗೊತ್ತಿಲ್ಲ ಎಂದು ಜನ ಆಡಿಕೊಳ್ಳುವ ಹಾಗೆ ಫಲಿತಾಂಶ ಬಂದಿತು.

ಬಹುಶಃ ಇದೇ ಪರಿಸ್ಥಿತಿ ಎಚ್.ವಿಶ್ವನಾಥ್‍ರಿಗೂ ಉಂಟಾಗಬಹುದು. ಏಕೆಂದರೆ ಕೆ.ಆರ್.ನಗರದಲ್ಲಿ ಮತ್ತೆ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಸ್ಥಿತಿ ಇದ್ದ ವಿಶ್ವನಾಥ್‍ರಿಗೆ ಜಿಟಿಡಿ ಪ್ರತಿನಿಧಿಸುತ್ತಿದ್ದ ಹುಣಸೂರನ್ನು ದೇವೇಗೌಡರು ಕೊಡಿಸಿದ್ದರು. ಇನ್ನೊಬ್ಬ ಜೆಡಿಎಸ್ ಶಾಸಕ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯರ ಪರಿಸ್ಥಿತಿ ಮಾತ್ರ ಭಿನ್ನ ಇರಬಹುದು. ನಗರ ಪ್ರದೇಶದಲ್ಲಿ ಬಿಜೆಪಿಗೆ ಸೇರಿದರೆ ಅನುಕೂಲವೂ ಉಂಟಾಗಬಹುದು. ಆದರೆ ಜೆಡಿಎಸ್‍ನ ಬೆಂಬಲ ಇಲ್ಲದೇ ಎಚ್.ವಿಶ್ವನಾಥ್ ಮತ್ತೆ ಹುಣಸೂರಿನಲ್ಲಿ ಗೆಲ್ಲುವುದು ಅನುಮಾನ.

ಕೆ.ಆರ್.ಪೇಟೆಯ ವಿಚಾರದಲ್ಲಿ ಅಂತಹ ಯಾವ ಅನುಮಾನವೂ ಇಲ್ಲ ಎಂಬುದು ಮಂಡ್ಯ ಜಿಲ್ಲೆಯ ರಾಜಕಾರಣ ಗೊತ್ತಿದ್ದವರ ಅನಿಸಿಕೆ. ಮೊನ್ನಿನ ಲೋಕಸಭಾ ಚುನಾವಣೆಯ ಅಲೆಯ ಸ್ವರೂಪ ಬೇರೆ ಇತ್ತು. ಅದನ್ನು ಇಟ್ಟುಕೊಂಡು ‘ದೇವೇಗೌಡರ ಕುಟುಂಬಕ್ಕೆ ಅವಮಾನ ಮಾಡಿದ’ ನಾರಾಯಣಗೌಡರನ್ನು ಕೆ.ಆರ್.ಪೇಟೆಯ ಜನರು ಬಿಜೆಪಿ ಅಭ್ಯರ್ಥಿಯನ್ನಾಗಿ ಗೆಲ್ಲಿಸುವುದು ಸಾಧ್ಯವೇ ಇಲ್ಲ ಎಂಬುದು ಸ್ಥಳೀಯರ ಅನಿಸಿಕೆ. ಅಲ್ಲಿಗೆ ನಾರಾಯಣಗೌಡರ ರಾಜಕಾರಣ ಮುಗಿಯಿತೇ ಎಂಬ ಪ್ರಶ್ನೆಗೆ ಮುಂದಿನ ತಿಂಗಳುಗಳು ಉತ್ತರ ನೀಡುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...