Homeಮುಖಪುಟಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

- Advertisement -
- Advertisement -

ಭಾನುವಾರ ರಾತ್ರಿ ನಡೆದ ಏಷ್ಯಾಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಸೋಲು ಅನುಭವಿಸಿತು. ಆ ಪಂದ್ಯದ 18ನೇ ಓವರ್‌ನಲ್ಲಿ ರವಿ ಬಿಷ್ಣೋಯ್ ಬೌಲಿಂಗ್‌ನಲ್ಲಿ ಪಾಕ್ ಆಟಗಾರ ಆಸಿಫ್ ಅಲಿ ನೀಡಿದ ಕ್ಯಾಚ್ ಅನ್ನು ಅರ್ಶದೀಪ್ ಸಿಂಗ್ ಕೈ ಚೆಲ್ಲಿದರು. ಆನಂತರ ಕೊನೆಯ ಓವರ್‌ನಲ್ಲಿ 7 ರನ್‌ ಅನ್ನು ಡಿಫೆಂಡ್ ಮಾಡಿಕೊಳ್ಳಲಾಗದ ಕಾರಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟ್ರೋಲ್ ವ್ಯಕ್ತವಾಗಿದೆ. ಆದರೆ ಅದನ್ನು ಖಂಡಿಸಿರುವ ಭಾರತ ತಂಡದ ಹಿರಿಯ ಆಟಗಾರರಾದ ಹರ್ಭಜನ್ ಸಿಂಗ್ ಮತ್ತು ಇರ್ಫಾನ್ ಪಠಾಣ್ ಅರ್ಶದೀಪ್ ಪರ ದನಿಯೆತ್ತಿದ್ದಾರೆ.

“ಯುವ ಆಟಗಾರರನ್ನು ಟೀಕಿಸುವುದನ್ನು ನಿಲ್ಲಿಸಿ. ಯಾರೂ ಕೂಡ ಬೇಕಂತ ಕ್ಯಾಚ್ ಕೈಚೆಲ್ಲುವುದಿಲ್ಲ. ಭಾರತದ ಯುವ ತಂಡದ ಬಗ್ಗೆ ನಾವು ಅಭಿಮಾನ ವ್ಯಕ್ತಪಡಿಸಬೇಕು. ಪಾಕಿಸ್ತಾನ ನಮಗಿಂತ ಚೆನ್ನಾಗಿ ಆಡಿತು. ಆದರೆ ಭಾರತ ತಂಡ ಮತ್ತು ಅರ್ಶದೀಪ್ ವಿರುದ್ಧ ಕೊಳಕಾಗಿ ಕಮೆಂಟ್ ಮಾಡುವವರ ಬಗ್ಗೆ ನಾಚಿಕೆಯೆನಿಸುತ್ತದೆ. ಅರ್ಶ್ ಎಂದರೆ ಚಿನ್ನ” ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಹರ್ಶದೀಪ್ ಗಟ್ಟಿ ವ್ಯಕ್ತಿತ್ವವುಳ್ಳವರು. ಹಾಗೆಯೇ ಇರಿ ಎಂದು ಇರ್ಫಾನ್ ಪಠಾಣ್ ಟ್ವೀಟ್ ಮಾಡುವ ಮೂಲಕ ಬೆಂಬಲ ನೀಡಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಕೂಡ ಹರ್ಶದೀಪ್ ಬೆಂಬಲಕ್ಕೆ ನಿಂತಿದ್ದಾರೆ. “ನಾವೆಲ್ಲರೂ ಮನುಷ್ಯರು. ಹಾಗಾಗಿ ಕ್ರೀಡೆಯಲ್ಲಿ ನಾವೆಲ್ಲರೂ ತಪ್ಪು ಮಾಡಬಹುದು. ಆ ತಪ್ಪುಗಳಿಗಾಗಿ ದಯವಿಟ್ಟು ಯಾರನ್ನೂ ಅವಮಾನಿಸಬೇಡಿ” ಎಂದು ಬರೆದು ಹರ್ಶದೀಪ್‌ರವರನ್ನು ಟ್ಯಾಗ್ ಮಾಡಿದ್ದಾರೆ.

ಪಂದ್ಯ ಮುಗಿದ ನಂತರ ವಿರಾಟ್ ಕೊಹ್ಲಿ ಸಹ ಅರ್ಶದೀಪ್ ಬೆಂಬಲಿಸಿ ಮಾತನಾಡಿದ್ದಾರೆ. “ಎಲ್ಲರೂ ತಪ್ಪು ಮಾಡುತ್ತಾರೆ. ತುಂಬಾ ಒತ್ತಡ ಸನ್ನಿವೇ‍ಷವಿದ್ದಾಗ ತಪ್ಪುಗಳಾಗುವುದು ಸಹಜ. ನನಗಿನ್ನೂ ನೆನಪಿದೆ, ನನ್ನ ಮೊದಲ ಪಂದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಎದುರಾಗಿತ್ತು. ಆದರೆ ಎಂದು ಶಾಹಿದ್ ಅಫ್ರಿದಿ ಎದುರು ನಾನು ಕೆಟ್ಟ ಹೊಡೆತ ಹೊಡೆದು ಔಟ್ ಆದೆ. ಅಂದು ರಾತ್ರಿ ನಾನು ನಿದ್ರೆ ಮಾಡಲಿಲ್ಲ ಮತ್ತು ನನ್ನ ಕ್ರಿಕೆಟ್ ಜೀವನ ಮುಗಿಯಿತು ಎಂದುಕೊಂಡೆ. ಆದರೆ ಹಾಗಾಗಲಿಲ್ಲ. ಭಾರತ ತಂಡದಲ್ಲಿ ಹಿರಿಯ ಆಟಗಾರರಿದ್ದಾರೆ. ಒಳ್ಳೆಯ ತಂಡಸ್ಪೂರ್ತಿಯಿದೆ. ಉತ್ತಮ ನಾಯಕ ಮತ್ತು ಕೋಚ್ ಇದ್ದಾರೆ. ಆಟಗಾರರು ತಮ್ಮ ತಪ್ಪುಗಳಿಂದ ಪಾಠ ಕಲಿಯುತ್ತಾರೆ. ತಪ್ಪನ್ನು ಒಪ್ಪಿಕೊಂಡು ಯಾಕಾಯಿತು ಎಂದು ವಿಶ್ಲೇಷಿಸಿ ಮತ್ತೆ ಅಂಥದ್ದೆ ಒತ್ತಡದ ಸಂದರ್ಭಗಳನ್ನು ನಿಭಾಯಿಸುತ್ತಾರೆ’ ಎಂದಿದ್ದಾರೆ.

ಪಂದ್ಯದಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದರೆ ಪಾಕ್ ತಂಡ ಒಂದು ಎಸೆತ ಬಾಕಿ ಇರುವಂತೆಯೇ ಐದು ವಿಕೆಟ್ ಕಳೆದುಕೊಂಡು 182 ರನ್ ಗಳಿಸಿ ಜಯ ಸಾಧಿಸಿತು.

ಇದನ್ನೂ ಓದಿ: ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...