Homeಮುಖಪುಟಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

- Advertisement -
- Advertisement -

ಭಾನುವಾರ ರಾತ್ರಿ ನಡೆದ ಏಷ್ಯಾಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಸೋಲು ಅನುಭವಿಸಿತು. ಆ ಪಂದ್ಯದ 18ನೇ ಓವರ್‌ನಲ್ಲಿ ರವಿ ಬಿಷ್ಣೋಯ್ ಬೌಲಿಂಗ್‌ನಲ್ಲಿ ಪಾಕ್ ಆಟಗಾರ ಆಸಿಫ್ ಅಲಿ ನೀಡಿದ ಕ್ಯಾಚ್ ಅನ್ನು ಅರ್ಶದೀಪ್ ಸಿಂಗ್ ಕೈ ಚೆಲ್ಲಿದರು. ಆನಂತರ ಕೊನೆಯ ಓವರ್‌ನಲ್ಲಿ 7 ರನ್‌ ಅನ್ನು ಡಿಫೆಂಡ್ ಮಾಡಿಕೊಳ್ಳಲಾಗದ ಕಾರಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟ್ರೋಲ್ ವ್ಯಕ್ತವಾಗಿದೆ. ಆದರೆ ಅದನ್ನು ಖಂಡಿಸಿರುವ ಭಾರತ ತಂಡದ ಹಿರಿಯ ಆಟಗಾರರಾದ ಹರ್ಭಜನ್ ಸಿಂಗ್ ಮತ್ತು ಇರ್ಫಾನ್ ಪಠಾಣ್ ಅರ್ಶದೀಪ್ ಪರ ದನಿಯೆತ್ತಿದ್ದಾರೆ.

“ಯುವ ಆಟಗಾರರನ್ನು ಟೀಕಿಸುವುದನ್ನು ನಿಲ್ಲಿಸಿ. ಯಾರೂ ಕೂಡ ಬೇಕಂತ ಕ್ಯಾಚ್ ಕೈಚೆಲ್ಲುವುದಿಲ್ಲ. ಭಾರತದ ಯುವ ತಂಡದ ಬಗ್ಗೆ ನಾವು ಅಭಿಮಾನ ವ್ಯಕ್ತಪಡಿಸಬೇಕು. ಪಾಕಿಸ್ತಾನ ನಮಗಿಂತ ಚೆನ್ನಾಗಿ ಆಡಿತು. ಆದರೆ ಭಾರತ ತಂಡ ಮತ್ತು ಅರ್ಶದೀಪ್ ವಿರುದ್ಧ ಕೊಳಕಾಗಿ ಕಮೆಂಟ್ ಮಾಡುವವರ ಬಗ್ಗೆ ನಾಚಿಕೆಯೆನಿಸುತ್ತದೆ. ಅರ್ಶ್ ಎಂದರೆ ಚಿನ್ನ” ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಹರ್ಶದೀಪ್ ಗಟ್ಟಿ ವ್ಯಕ್ತಿತ್ವವುಳ್ಳವರು. ಹಾಗೆಯೇ ಇರಿ ಎಂದು ಇರ್ಫಾನ್ ಪಠಾಣ್ ಟ್ವೀಟ್ ಮಾಡುವ ಮೂಲಕ ಬೆಂಬಲ ನೀಡಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಕೂಡ ಹರ್ಶದೀಪ್ ಬೆಂಬಲಕ್ಕೆ ನಿಂತಿದ್ದಾರೆ. “ನಾವೆಲ್ಲರೂ ಮನುಷ್ಯರು. ಹಾಗಾಗಿ ಕ್ರೀಡೆಯಲ್ಲಿ ನಾವೆಲ್ಲರೂ ತಪ್ಪು ಮಾಡಬಹುದು. ಆ ತಪ್ಪುಗಳಿಗಾಗಿ ದಯವಿಟ್ಟು ಯಾರನ್ನೂ ಅವಮಾನಿಸಬೇಡಿ” ಎಂದು ಬರೆದು ಹರ್ಶದೀಪ್‌ರವರನ್ನು ಟ್ಯಾಗ್ ಮಾಡಿದ್ದಾರೆ.

ಪಂದ್ಯ ಮುಗಿದ ನಂತರ ವಿರಾಟ್ ಕೊಹ್ಲಿ ಸಹ ಅರ್ಶದೀಪ್ ಬೆಂಬಲಿಸಿ ಮಾತನಾಡಿದ್ದಾರೆ. “ಎಲ್ಲರೂ ತಪ್ಪು ಮಾಡುತ್ತಾರೆ. ತುಂಬಾ ಒತ್ತಡ ಸನ್ನಿವೇ‍ಷವಿದ್ದಾಗ ತಪ್ಪುಗಳಾಗುವುದು ಸಹಜ. ನನಗಿನ್ನೂ ನೆನಪಿದೆ, ನನ್ನ ಮೊದಲ ಪಂದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಎದುರಾಗಿತ್ತು. ಆದರೆ ಎಂದು ಶಾಹಿದ್ ಅಫ್ರಿದಿ ಎದುರು ನಾನು ಕೆಟ್ಟ ಹೊಡೆತ ಹೊಡೆದು ಔಟ್ ಆದೆ. ಅಂದು ರಾತ್ರಿ ನಾನು ನಿದ್ರೆ ಮಾಡಲಿಲ್ಲ ಮತ್ತು ನನ್ನ ಕ್ರಿಕೆಟ್ ಜೀವನ ಮುಗಿಯಿತು ಎಂದುಕೊಂಡೆ. ಆದರೆ ಹಾಗಾಗಲಿಲ್ಲ. ಭಾರತ ತಂಡದಲ್ಲಿ ಹಿರಿಯ ಆಟಗಾರರಿದ್ದಾರೆ. ಒಳ್ಳೆಯ ತಂಡಸ್ಪೂರ್ತಿಯಿದೆ. ಉತ್ತಮ ನಾಯಕ ಮತ್ತು ಕೋಚ್ ಇದ್ದಾರೆ. ಆಟಗಾರರು ತಮ್ಮ ತಪ್ಪುಗಳಿಂದ ಪಾಠ ಕಲಿಯುತ್ತಾರೆ. ತಪ್ಪನ್ನು ಒಪ್ಪಿಕೊಂಡು ಯಾಕಾಯಿತು ಎಂದು ವಿಶ್ಲೇಷಿಸಿ ಮತ್ತೆ ಅಂಥದ್ದೆ ಒತ್ತಡದ ಸಂದರ್ಭಗಳನ್ನು ನಿಭಾಯಿಸುತ್ತಾರೆ’ ಎಂದಿದ್ದಾರೆ.

ಪಂದ್ಯದಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದರೆ ಪಾಕ್ ತಂಡ ಒಂದು ಎಸೆತ ಬಾಕಿ ಇರುವಂತೆಯೇ ಐದು ವಿಕೆಟ್ ಕಳೆದುಕೊಂಡು 182 ರನ್ ಗಳಿಸಿ ಜಯ ಸಾಧಿಸಿತು.

ಇದನ್ನೂ ಓದಿ: ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...