Homeಮುಖಪುಟಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಈ ವಿದ್ಯಾರ್ಥಿಗಳು ಮತ್ತು ಅವರ ತಾಯಂದಿರು ಮೂರು ವಾರದಿಂದ ಹೋರಾಡುತ್ತಿರುವುದಾರೂ ಏಕೆ ಗೊತ್ತಾ?

- Advertisement -
- Advertisement -

ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ

ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು ಸಹ ಧರಣಿಯಲ್ಲಿ ಕುಳಿತಿದ್ದಾರೆ. ಜೊತೆಗೆ ಪಿಥೋರಘಡದ ಬೀದಿಗಳಲ್ಲಿ ವಿದ್ಯಾರ್ಥಿಗಳು ಪೋಸ್ಟರ್‌ಗಳೊಂದಿಗೆ ಮೌನ ಮೆರವಣಿಗೆ ನಡೆಸುತ್ತಿದ್ದಾರೆ.

ಪಿಥೋರಘಡ ನೇಪಾಳ ಮತ್ತು ಚೀನಾವನ್ನು ಅದರ ಗಡಿಯಾಗಿ ಹೊಂದಿರುವ ಉತ್ತರಖಂಡ ರಾಜ್ಯದ ಪಟ್ಟಣ. 70 ರ ದಶಕದಲ್ಲಿ ಬೆಟ್ಟ ಪ್ರದೇಶಗಳಿಗಳಲ್ಲಿ ವಿಶ್ವವಿದ್ಯಾನಿಲಯಗಳು ಬೇಕೆಂಬ ದೊಡ್ಡ ವಿದ್ಯಾರ್ಥಿ ಚಳುವಳಿ ನಡೆದಿತ್ತು. ಆ ಹೋರಾಟದಲ್ಲಿ ಇಬ್ಬರು ಯುವ ವಿದ್ಯಾರ್ಥಿಗಳು ಪೊಲೀಸ್ ಶೂಟಿಂಗ್‌ನಲ್ಲಿ ಪ್ರಾಣ ಕಳೆದುಕೊಂಡರು. ನಂತರವಷ್ಟೇ ಅಲ್ಲಿ ಕುಮಾನ್ ಮತ್ತು ಗರ್ವಾಲ್ ವಿಶ್ವವಿದ್ಯಾಲಯವನ್ನು 1973 ರಲ್ಲಿ ತೆರೆಯಲಾಯಿತು.

ಈ ಕಾಲೇಜಿನಲ್ಲಿ 7000 ವಿದ್ಯಾರ್ಥಿಗಳಿದ್ದು, ಕಾಲೇಜಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ವಿಷಯವನ್ನು ಸಚಿವರಿಗೆ ಮುಟ್ಟಿಸಲು ವಿದ್ಯಾರ್ಥಿಗಳು ಅಕ್ಟೋಬರ್ 2018 ರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ಅಂದಿನಿಂದ ಅವರು ಡಿಸಿ ಕಚೇರಿಗೆ 5 ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಅವರ ಮನವಿ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಅವರು ಧರಣಿಗಳನ್ನು ಪ್ರಾರಂಭಿಸಿದ್ದಾರೆ. ಈ ವಿದ್ಯಾರ್ಥಿಗಳ ತಾಯಂದಿರು ಸಹ ಮೆರವಣಿಗೆಯಲ್ಲಿ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ.

ಕಾಲೇಜು ಗ್ರಂಥಾಲಯದಲ್ಲಿನ ಪುಸ್ತಕಗಳು ತುಂಬಾ ಹಳೆಯವು, ತೇವ ಮತ್ತು ದೂಳಿಡಿದು ಕೂತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಕಾಲೇಜಿನಲ್ಲಿ ಕಲಿಸಲಾಗುವ ವಿಷಯಗಳ ಕುರಿತ ಪುಸ್ತಕಗಳು ಗ್ರಂಥಾಲಯದಲ್ಲಿಲ್ಲ. ಅನೇಕ ವಿದ್ಯಾರ್ಥಿಗಳು ಇತರ ನಗರಗಳಿಂದ, ಕೆಲವೊಮ್ಮೆ ದೆಹಲಿಯಿಂದ ಪುಸ್ತಕಗಳನ್ನು ಪಡೆಯಲು 8-10 ಗಂಟೆಗಳ ಬಸ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಪ್ರಯೋಗಾಲಯಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

1990 ರ ದಶಕದಿಂದಲೂ ಸಣ್ಣ ಪಟ್ಟಣಗಳಲ್ಲಿನ ಕಾಲೇಜುಗಳನ್ನು ಮುಚ್ಚುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರು ಇಲ್ಲ, ಗ್ರಂಥಾಲಯಗಳಿಲ್ಲ. ಭಾರತದ ವೆಚ್ಚ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ 70,817 ಗ್ರಂಥಾಲಯಗಳು ಮತ್ತು ನಗರ ಪ್ರದೇಶಗಳಲ್ಲಿ 4,580 ಗಳು ಕ್ರಮವಾಗಿ 830 ದಶಲಕ್ಷ ಮತ್ತು 370 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ,. 2011 ರ ಜನಗಣತಿಯ ಪ್ರಕಾರ ಮೊದಲ ಬಾರಿಗೆ ಗ್ರಂಥಾಲಯಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಆ ಪ್ರಕಾರ ಸರಿಸುಮಾರು ಪ್ರತಿ 11,500 ಜನರಿಗೆ ಒಂದು ಗ್ರಾಮೀಣ ಗ್ರಂಥಾಲಯ ಮತ್ತು 80,000 ಕ್ಕೂ ಹೆಚ್ಚು ಜನರಿಗೆ ಒಂದು ನಗರ ಗ್ರಂಥಾಲಯ ಮಾತ್ರ ಇವೆ. ಆದಾಗ್ಯೂ, ಈ ಗ್ರಂಥಾಲಯಗಳ ಕಾರ್ಯಕ್ಷಮತೆ ಮತ್ತು ಸೇವಾ ಸಾಮರ್ಥ್ಯಗಳ ಬಗ್ಗೆ ಯಾವುದೇ ನಿಖರವಾದ ಮಾಹಿತಿಯಿಲ್ಲ – ಗ್ರಾಮೀಣ ಗ್ರಂಥಾಲಯಗಳು ಕೆಲವು ಪುಸ್ತಕಗಳನ್ನು ಹೊಂದಿರುವ ಕೋಣೆಯಾಗಿರಬಹುದು, ಆದರೆ ಇತರವು ಖಾಸಗಿ ದಾನಿಗಳು ಅಥವಾ ಎನ್‌ಜಿಒಗಳ ಬೆಂಬಲದ ಮೂಲಕ ನಡೆಯಬಹುದಾಗಿವೆ.

ಅಮೇರಿಕಾದಲ್ಲಿ  ಗ್ರಂಥಾಲಯಕ್ಕಾಗಿ ವರ್ಷಕ್ಕೆ ಒಬ್ಬ ವ್ಯಕ್ತಿಗೆ 36 ಡಾಲರ್ ಖರ್ಚು ಮಾಡುತ್ತದೆ, ಮತ್ತು ಭಾರತದಲ್ಲಿ ಭಾರತದಲ್ಲಿ ಒಬ್ಬ ವ್ಯಕ್ತಿಗೆ 7 ಪೈಸಾ ಖರ್ಚು ಮಾಡುತ್ತದೆ. ಹಾಗಾದರೆ ಭಾರತ ತನ್ನ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದೆ? ನಮ್ಮ ಯುವಜನರಿಗೆ ಉತ್ತಮ ಪುಸ್ತಕಗಳು ಸಿಗದಿದ್ದರೆ ನಾವು ಹೇಗೆ ಮಹಾಶಕ್ತಿಯಾಗುತ್ತೇವೆ? ನಾವು ಹೇಗೆ ವಿಶ್ವಗುರು ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...