Homeಸಿನಿಮಾಕ್ರೀಡೆಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

ಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

- Advertisement -
- Advertisement -

ಏಷ್ಯಾ ಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಮಹತ್ವದ  ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು ಭಾರತ ತಂಡವು ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ ಫೈನಲ್ ತಲುಪುವ ಕನಸಿಗೆ ಜೀವ ಬರಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಮಾತ್ರವಲ್ಲ ದೊಡ್ಡ ಅಂತರದ ಗೆಲುವು ಬೇಕಾಗಿದೆ. ಇಲ್ಲದಿದ್ದಲ್ಲಿ ಟೂರ್ನಿಯಿಂದ ಹೊರಬೀಳುವ ಒತ್ತಡದಲ್ಲಿದೆ ಭಾರತ ತಂಡ.

ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳು

ಏಷ್ಯಾ ಕಪ್‌ ಟೂರ್ನಿಯ ನಿಯಮದ ಪ್ರಕಾರ ಸೂಪರ್ 4 ಹಂತದಲ್ಲಿ 4 ತಂಡಗಳಲ್ಲಿ ಮೊದಲ ಎರಡು ಸ್ಥಾನ ಗಳಿಸಿದ ತಂಡಗಳು ನೇರವಾಗಿ ಫೈನಲ್‌ಗೆ ತಲುಪುತ್ತವೆ. ಭಾರತ ತಂಡವು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸೋಲು ಕಂಡಿದೆ. ಈಗ ಅದು ಫೈನಲ್ ಪ್ರವೇಶಿಸಬೇಕಾದರೆ ತನ್ನ ಉಳಿದ 2 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ಒಂದು ವೇಳೆ ಸಣ್ಣ ಅಂತರದಲ್ಲಿ ಗೆದ್ದರೆ ಉಳಿದ ತಂಡಗಳ ಸೋಲು-ಗೆಲುವುಗಳನ್ನು ನೋಡುತ್ತಾ ಅದೃ‍ಷ್ಟ ಪರೀಕ್ಷೆ ಮಾಡಬೇಕಿದೆ. ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳ ಈ ಕೆಳಗಿನಂತಿವೆ.

ಸಾಧ್ಯತೆ 1

ಭಾರತ ತಂಡವು ಇಂದು ಶ್ರೀಲಂಕಾ ವಿರುದ್ಧ ಮತ್ತು ಸೆಪ್ಟಂಬರ್ 8 ರಂದು ಆಫ್ಘಾನಿಸ್ತಾನ ತಂಡದ ಎದುರು ದೊಡ್ಡ ಅಂತರದಲ್ಲಿ ಗೆಲ್ಲಬೇಕು. ಆನಂತರ ಪಾಕಿಸ್ತಾನವು ಶ್ರೀಲಂಕಾ ತಂಡವನ್ನು ಸೋಲಿಸಿದರೆ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ತಂಡಗಳರೆಡು ತಲಾ ಎರಡು ಸೋಲುಗಳೊಂದಿಗೆ ಟೂರ್ನಿಯಿಂದ ಹೊರಬೀಳುತ್ತವೆ. ಪಾಕಿಸ್ತಾನ ಮತ್ತು ಭಾರತ ಫೈನಲ್ ಪ್ರವೇಶಿಸುತ್ತವೆ. ಒಂದು ವೇಳೆ ಪಾಕಿಸ್ತಾನ ತನ್ನ ಮುಂದಿನ ಎರಡು ಪಂದ್ಯಗಳನ್ನು ಸೋತರೆ ಅದು ಟೂರ್ನಿಯಿಂದ ಹೊರಬೀಳುತ್ತದೆ. ಭಾರತದ ಸಾಧ್ಯತೆ ತೆರೆದುಕೊಳ್ಳುತ್ತದೆ.

ಸಾಧ್ಯತೆ 2

ಶ್ರೀಲಂಕಾ ತಂಡವು ಭಾರತದ ಎದುರು ಸೋತು ಮತ್ತು ಪಾಕಿಸ್ತಾನದ ಎದುರು ಗೆದ್ದರೆ ಆಗ ನೆಟ್ ರನ್ ರೇಟ್ ಲೆಕ್ಕಕ್ಕೆ ಬರುತ್ತದೆ. ಏಕೆಂದರೆ ಆಗ ಪಾಕಿಸ್ತಾನ, ಭಾರತ ಮತ್ತು ಶ್ರೀಲಂಕಾ ಮೂರು ತಂಡಗಳು ಸಹ ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿರುತ್ತವೆ. ಹಾಗಾಗಿ ಭಾರತವು ಮುಂದಿನ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾಗಿದೆ ಮತ್ತು ತನ್ನ ನೆಟ್ ರನ್‌ ರೇಟ್ ಅನ್ನು ಹೆಚ್ಚಿಸಿಕೊಳ್ಳಬೇಕಾಗಿದೆ.

ಸದ್ಯ ಭಾರತದ ನೆಟ್ ರನ್‌ರೇಟ್ -0.126 ಇದೆ. ಶ್ರೀಲಂಕಾ ತಂಡವು +0.589 ಮತ್ತು ಪಾಕಿಸ್ತಾನ ತಂಡವು +0.126 ರನ್ ರೇಟ್ ಹೊಂದಿದೆ. ಆಫ್ಘಾನಿಸ್ತಾನವು -0.589 ನೆಟ್ ರನ್ ರೇಟ್ ಹೊಂದಿದೆ. ಹಾಗಾಗಿ ಅದಕ್ಕೆ ಸಾಧ್ಯತೆಗಳು ಕಡಿಮೆ ಇವೆ.

ಶ್ರೀಲಂಕಾ ತಂಡವು ಸೂಪರ್ 4 ಹಂತದಲ್ಲಿ ಆಫ್ಘಾನಿಸ್ತಾನ ತಂಡದ ಎದುರು ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿದೆ. ಹಾಗಾಗಿ ಇಂದಿನ ಪಂದ್ಯವು ಮಹತ್ವ ಪಡೆದಿದೆ.

ಇದನ್ನೂ ಓದಿ: ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...