Homeಮುಖಪುಟಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಪಾಟ್ನಾದಲ್ಲಿರುವ ಅವರ ನಿವಾಸದಲ್ಲಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಮಾಜಿ ಸಿಎಂ ರಾಬ್ರಿ ದೇವಿ ಅವರ ಸಮ್ಮುಖದಲ್ಲಿ ಸೋಮವಾರ ಭೇಟಿಯಾಗಿದ್ದಾರೆ. ಇದರ ನಂತರ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತುಕತೆಗಾಗಿ ಭೇಟಿ ಮಾಡಿದ್ದಾರೆ.

“ನಾನು ಲಾಲು ಯಾದವ್ ಅವರೊಂದಿಗೆ ಮಾತನಾಡಿದ್ದೇನೆ. ನಂತರ ದೆಹಲಿಗೆ ಭೇಟಿ ನೀಡಲಿದ್ದು ಅಲ್ಲಿ ರಾಷ್ಟ್ರಪತಿ ಮತ್ತು ಉಪಾ ರಾಷ್ಟ್ರಪತಿಯನ್ನು ಭೇಟಿ ಮಾಡಲಿದ್ದೇನೆ. ಇದರ ನಂತರ ನಾವು ಸಂಜೆ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತೇವೆ” ಎಂದು ನಿತೀಶ್‌ ಕುಮಾರ್ ದೆಹಲಿಗೆ ತೆರಳುವ ಮೊದಲು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಕ್ಕಾಗಿ ಅವರು ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಕೈಜೋಡಿಸಿದ ನಂತರ ನಿತೀಶ್ ಕುಮಾರ್ ಅವರು ವಿಪಕ್ಷಗಳ ನಾಯಕರನ್ನು ಇದೇ ಮೊದಲ ಬಾರಿಗೆ ಭೇಟಿಯಾಗಿದ್ದಾರೆ.

ರಾಹುಲ್ ಗಾಂಧಿ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿತೀಶ್‌ ಕುಮಾರ್‌, ಉನ್ನತ ಹುದ್ದೆ ಬಗ್ಗೆ ಯಾವುದೇ ಆಕಾಂಕ್ಷೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಪ್ರತಿಪಕ್ಷಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ. ಈ ನಿಟ್ಟಿನಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆ ವೇಳೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸಲಾಗುತ್ತಿದೆ. ನನಗೆ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿಕೊಳ್ಳುವ ಯಾವುದೇ ಉದ್ದೇಶವಿಲ್ಲ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ಈ ಭೇಟಿಗೂ ಮೊದಲು ಜೆಡಿಯು ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಮಂಡಳಿ ಸಭೆಯನ್ನು ನಡೆಸಿತ್ತು.

ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತೀಶ್‌ ಕುಮಾರ್,“ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೋರಾಡಿದರೆ, ಬಿಜೆಪಿಯನ್ನು ಪ್ಯಾಕ್ ಮಾಡಬಹುದು ಅಥವಾ ಸುಮಾರು 50 ಸ್ಥಾನಗಳಿಗೆ ಸೀಮಿತಗೊಳಿಸಬಹುದು. ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಬಿಜೆಪಿ ಸಾಮಾಜಿಕವಾಗಿ ಮತ್ತು ಕೋಮು ಸೌಹಾರ್ದತೆಗೆ ಭಂಗ ತಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್‌ ಕುಮಾರ್,“ನಾವು ಮೊದಲು ಎನ್‌ಡಿಎ ಮೈತ್ರಿಯನ್ನು ಮುರಿದ ನಂತರ ಎಲ್ಲವೂ ಚೆನ್ನಾಗಿತ್ತು. ಆದರೆ ನಂತರ ನಾವು 2017 ರಲ್ಲಿ ಮತ್ತೆ ಅವರೊಂದಿಗೆ ಕೈಜೋಡಿಸಿ ತಪ್ಪು ಮಾಡಿದೆವು. ಇದರಿಂದಾಗಿ ಕೆಲವು ರಾಜ್ಯಗಳ ಜನರು ನಮ್ಮಿಂದ ಬೇರ್ಪಟ್ಟರು. ಆದರೆ ಈಗ ನಾವು ಮತ್ತೆ ಅವರಿಂದ ಬೇರ್ಪಟ್ಟಿದ್ದು, ಈ ಬಗ್ಗೆ ಅವರು ಒಳ್ಳೆಯ ಮಾತನಾಡಿದ್ದಾರೆ” ಎಂದು ಹೇಳಿದ್ದಾರೆ.

ಈ ಮಧ್ಯೆ ನಿತೀಶ್ ಕುಮಾರ್ ಅವರನ್ನು 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ವಿವಿಧ ಪೋಸ್ಟರ್‌ಗಳು ಗುರುವಾರ ಪಾಟ್ನಾದಲ್ಲಿ ಕಂಡುಬಂದಿವೆ. ಜೆಡಿಯು ಹಾಕಿರುವ ಪೋಸ್ಟರ್‌ಗಳಲ್ಲಿ ಉತ್ತಮ ಆಡಳಿತದ ಭರವಸೆ ನೀಡಲಾಗಿವೆ.

ಇದರ ಜೊತೆಗೆ ತೇಜಸ್ವಿ ಯಾದವ್ ಕೂಡಾ 2024 ರ ಚುನಾವಣೆಯಲ್ಲಿ ಪ್ರಧಾನಿ ಹುದ್ದೆಗೆ ನಿತೀಶ್‌ ಕುಮಾರ್ ಅವರು ‘ಪ್ರಬಲ ಅಭ್ಯರ್ಥಿ’ ಆಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಇಂದು ವಿಶ್ವಾಸಮತ ಯಾಚನೆ ಬೆನ್ನಲ್ಲೆ RJD ಹಿರಿಯ ನಾಯಕರ ಮನೆ ಮೇಲೆ CBI ದಾಳಿ

2020ರಲ್ಲಿ ಬಿಜೆಪಿ-ಜೆಡಿ(ಯು) ಮೈತ್ರಿಯಲ್ಲಿ ಚುನಾವಣೆ ಎದುರಿಸಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡುವುದರೊಂದಿಗೆ ಎನ್‌ಡಿಎ ಮೈತ್ರಿ ಸರ್ಕಾರ ರಚನೆಯಾಗಿತ್ತು. ಇದಾಗಿ ಎರಡು ವರ್ಷಗಳ ಅಂತರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡು ಹೊಸ ಸರ್ಕಾರ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...