Homeಕರ್ನಾಟಕಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ಗೆ ಭೇಟಿ ನೀಡಿ ಅಲ್ಲಿನ ತಿಂಡಿಗಳನ್ನು ಪ್ರಚಾರ ಮಾಡಿರುವ ವಿಡಿಯೊ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಬೆಂಗಳೂರಿನಲ್ಲಿ 51 ವರ್ಷಗಳ ಇತಿಹಾಸದಲ್ಲೆ ದಾಖಲೆಯ ಮಳೆ ಸುರಿದಿದೆ ಎಂದು ವರದಿಯಾಗಿದೆ. ಮಳೆಯ ಪರಿಣಾಮ ಬೆಂಗಳೂರಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದು ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ನೆರೆಯಿಂದಾಗಿ ಒಬ್ಬ ಯುವತಿ ವಿದ್ಯುತ್‌ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ನೆರೆಯು ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯ ಫಲ ಎಂದು ದೇಶದಾದ್ಯಂತ ಆಕ್ರೋಶವೂ ಭುಗಿಲೆದ್ದಿದೆ. ಈ ನಡುವೆ ಕ್ಷೇತ್ರವೊಂದನ್ನು ಪ್ರತಿನಿಧಿಸುವ ಸಂಸದರೊಬ್ಬರು ಜನರು ಸಂಕಷ್ಟದಲ್ಲಿ ಇರುವಾಗ ಅದರ ಬಗ್ಗೆ ಮಾತನಾಡದೆ ಯಾವುದೊ ಹೋಟೆಲ್ ಒಂದಕ್ಕೆ ತೆರಳಿ ಅದನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ಕೂಡಾ ಎದ್ದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಅವರು ಇನ್ಸ್‌ಟಾಗ್ರಾಂನಲ್ಲಿ ದೋಸೆಯ ಚಿತ್ರವೊಂದನ್ನು ನೋಡಿ ‘ಟೆಂಪ್ಟ್‌’ ಆಗಿ ಪದ್ಮನಾಗ ನಗರದ ಬಳಿಯ ಹೊಟೆಲ್‌ಗೆ ಬಂದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

“ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ ದೋಸೆ. ನೀವು ಬನ್ನಿ. ಅದನ್ನು ನೀವು ತಿಂದಾಗಲೆ ಅದರ ಆಸ್ವಾದನೆ ಗೊತ್ತಾಗೋದು. ಬಹಳ ಚೆನ್ನಾಗಿದೆ, ದಯವಿಟ್ಟು ಬನ್ನಿ. ಅದಲ್ಲದೆ ಇವರ ಉಪ್ಪಿಟ್ಟ ಬಹಳ ಚೆನ್ನಾಗಿದೆ. ಮನೆಯಲ್ಲಿ ಮಾಡಿದ್ರೆ ಮುಖ ಸಿಂಡರಿಸಿಕೊಂಡು ತಿಂತಾ ಇರಲಿಲ್ಲ. ಆದರೆ ಇಲ್ಲಿ ಉಪ್ಪಿಟ್ಟು ಬಹಳ ಚೆನ್ನಾಗಿದೆ. ಅದನ್ನೂ ಕೂಡಾ ಟ್ರೈ ಮಾಡಿ. ಧನ್ಯವಾದ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಲಾವಣ್ಯ ಬಳ್ಳಾಲ್ ಅವರು, “ಈ ವಿಡಿಯೊ ಸೆಪ್ಟೆಂಬರ್‌ 5 ರಂದು ಮಾಡಿದ್ದು. ಬೆಂಗಳೂರು ಮುಳುಗುತ್ತಿರುವಾಗ ತೇಜಸ್ವಿ ಸೂರ್ಯ ಒಳ್ಳೆಯ ಬೆಳಗ್ಗಿನ ತಿಂಡಿಯನ್ನು ತಿಂದು ಎಂಜಾಯ್ ಮಾಡುತ್ತಿದ್ದರು. ನೆರೆ ಬಂದಿರುವ ಪ್ರದೇಶದಕ್ಕೆ ಅವರು ಒಂದು ಬಾರಿಯಾದರೂ ಭೇಟಿ ನೀಡಿದ್ದಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸಾಮಾಜಿಕ ಕಾರ್ಯಕರ್ತ ಚೇತನ್ ಕೃಷ್ಣ ಅವರು, “ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕು. ಬೆಂಗಳೂರಿನ ಅರ್ಧ ಭಾಗ ಜಲಾವೃತವಾದಾಗ ಈ ಚೈಲ್ಡ್‌‌ ಚಪಾತಿ ಏನೂ ಆಗಿಲ್ಲ ಎಂಬಂತೆ ದೋಸೆ ಸವಿಯುತ್ತಿದ್ದಾರೆ. ಎಂತಹ ಅಸೂಕ್ಷ್ಮಯುಳ್ಳ ಕಪಟಿ” ಎಂದು ಕಿಡಿ ಕಾರಿದ್ದಾರೆ.

ಗಣೇಶ್ ನಚಿಕೇತು ಅವರು, “ಇಡೀ ಬೆಂಗಳೂರು ನಗರ ಜಲಾವೃತವಾಗಿದೆ. ಜನರು ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬೇಜವಾಬ್ದಾರಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಯಾವುದೋ ಹೋಟೆಲ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ವೀಡಿಯೊ ಸೆಪ್ಟೆಂಬರ್ 5 ರದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಭೂಷಣ್‌ ನಾಗ್‌ ಅವರು, “ಸಭೆಯೊಂದರಲ್ಲಿ ಬಿಜೆಪಿಯ ಪದ್ಮನಾಭನಗರ ಶಾಸಕ ಅಶೋಕ ಮಲಗಿದ್ದರೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ಮಾರುತ್ತಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಆದರೆ ಈ ವ್ಯಕ್ತಿಗಳು ವಿಶ್ರಾಂತಿಯಲ್ಲಿದ್ದು, ಚಿಲ್ ಆಗಿದ್ದಾರೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಹೆದ್ದಾರಿ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಂಡ ತೇಜಸ್ವಿ ಸೂರ್ಯ: ಸೂರ್ಯನ ಕೆಳಗೂ ಕತ್ತಲೆ ಎಂದ ಅಖಿಲೇಶ್ ಯಾದವ್

ವೈಟ್‌ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಹೇಳ್ಲಾ ……ಎಂಎಲ್ಎ ….ಎಂಪಿ ಆಗೋವರೆಲ್ಲ ಸಂಸಾರಿಗಳಾಗಿರಬೇಕು…..ಯುವಕರಿಗೆ ಕೊಟ್ಟು ದೇಶ ಉದ್ದಾರ ಆಗುತ್ತೆ ಅನ್ನೋದು ಕೇವಲ ಕಲ್ಪನೆ……. ಅವರು ದೊಡ್ಡ ಭ್ರಮೆಯಲ್ಲಿಟ್ಟುಕೊಂಡು ಭಾಷಣ ಬಿಗಿದ್ದಾರೆ ಅಷ್ಟೇ…..ಸಾಮಾಜಿಕ ಜ್ಞಾನ ಇರುವುದಿಲ್ಲ… ಇನ್ನು ಮುಂದೆ ಚುನಾವಣೆಯಲ್ಲಿ ಮತ ಹಾಕುವರೇ ಯೋಚನೆ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...