Homeಕರ್ನಾಟಕಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ಗೆ ಭೇಟಿ ನೀಡಿ ಅಲ್ಲಿನ ತಿಂಡಿಗಳನ್ನು ಪ್ರಚಾರ ಮಾಡಿರುವ ವಿಡಿಯೊ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಬೆಂಗಳೂರಿನಲ್ಲಿ 51 ವರ್ಷಗಳ ಇತಿಹಾಸದಲ್ಲೆ ದಾಖಲೆಯ ಮಳೆ ಸುರಿದಿದೆ ಎಂದು ವರದಿಯಾಗಿದೆ. ಮಳೆಯ ಪರಿಣಾಮ ಬೆಂಗಳೂರಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದು ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ನೆರೆಯಿಂದಾಗಿ ಒಬ್ಬ ಯುವತಿ ವಿದ್ಯುತ್‌ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ನೆರೆಯು ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯ ಫಲ ಎಂದು ದೇಶದಾದ್ಯಂತ ಆಕ್ರೋಶವೂ ಭುಗಿಲೆದ್ದಿದೆ. ಈ ನಡುವೆ ಕ್ಷೇತ್ರವೊಂದನ್ನು ಪ್ರತಿನಿಧಿಸುವ ಸಂಸದರೊಬ್ಬರು ಜನರು ಸಂಕಷ್ಟದಲ್ಲಿ ಇರುವಾಗ ಅದರ ಬಗ್ಗೆ ಮಾತನಾಡದೆ ಯಾವುದೊ ಹೋಟೆಲ್ ಒಂದಕ್ಕೆ ತೆರಳಿ ಅದನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ಕೂಡಾ ಎದ್ದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಅವರು ಇನ್ಸ್‌ಟಾಗ್ರಾಂನಲ್ಲಿ ದೋಸೆಯ ಚಿತ್ರವೊಂದನ್ನು ನೋಡಿ ‘ಟೆಂಪ್ಟ್‌’ ಆಗಿ ಪದ್ಮನಾಗ ನಗರದ ಬಳಿಯ ಹೊಟೆಲ್‌ಗೆ ಬಂದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

“ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ ದೋಸೆ. ನೀವು ಬನ್ನಿ. ಅದನ್ನು ನೀವು ತಿಂದಾಗಲೆ ಅದರ ಆಸ್ವಾದನೆ ಗೊತ್ತಾಗೋದು. ಬಹಳ ಚೆನ್ನಾಗಿದೆ, ದಯವಿಟ್ಟು ಬನ್ನಿ. ಅದಲ್ಲದೆ ಇವರ ಉಪ್ಪಿಟ್ಟ ಬಹಳ ಚೆನ್ನಾಗಿದೆ. ಮನೆಯಲ್ಲಿ ಮಾಡಿದ್ರೆ ಮುಖ ಸಿಂಡರಿಸಿಕೊಂಡು ತಿಂತಾ ಇರಲಿಲ್ಲ. ಆದರೆ ಇಲ್ಲಿ ಉಪ್ಪಿಟ್ಟು ಬಹಳ ಚೆನ್ನಾಗಿದೆ. ಅದನ್ನೂ ಕೂಡಾ ಟ್ರೈ ಮಾಡಿ. ಧನ್ಯವಾದ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಲಾವಣ್ಯ ಬಳ್ಳಾಲ್ ಅವರು, “ಈ ವಿಡಿಯೊ ಸೆಪ್ಟೆಂಬರ್‌ 5 ರಂದು ಮಾಡಿದ್ದು. ಬೆಂಗಳೂರು ಮುಳುಗುತ್ತಿರುವಾಗ ತೇಜಸ್ವಿ ಸೂರ್ಯ ಒಳ್ಳೆಯ ಬೆಳಗ್ಗಿನ ತಿಂಡಿಯನ್ನು ತಿಂದು ಎಂಜಾಯ್ ಮಾಡುತ್ತಿದ್ದರು. ನೆರೆ ಬಂದಿರುವ ಪ್ರದೇಶದಕ್ಕೆ ಅವರು ಒಂದು ಬಾರಿಯಾದರೂ ಭೇಟಿ ನೀಡಿದ್ದಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸಾಮಾಜಿಕ ಕಾರ್ಯಕರ್ತ ಚೇತನ್ ಕೃಷ್ಣ ಅವರು, “ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕು. ಬೆಂಗಳೂರಿನ ಅರ್ಧ ಭಾಗ ಜಲಾವೃತವಾದಾಗ ಈ ಚೈಲ್ಡ್‌‌ ಚಪಾತಿ ಏನೂ ಆಗಿಲ್ಲ ಎಂಬಂತೆ ದೋಸೆ ಸವಿಯುತ್ತಿದ್ದಾರೆ. ಎಂತಹ ಅಸೂಕ್ಷ್ಮಯುಳ್ಳ ಕಪಟಿ” ಎಂದು ಕಿಡಿ ಕಾರಿದ್ದಾರೆ.

ಗಣೇಶ್ ನಚಿಕೇತು ಅವರು, “ಇಡೀ ಬೆಂಗಳೂರು ನಗರ ಜಲಾವೃತವಾಗಿದೆ. ಜನರು ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬೇಜವಾಬ್ದಾರಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಯಾವುದೋ ಹೋಟೆಲ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ವೀಡಿಯೊ ಸೆಪ್ಟೆಂಬರ್ 5 ರದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಭೂಷಣ್‌ ನಾಗ್‌ ಅವರು, “ಸಭೆಯೊಂದರಲ್ಲಿ ಬಿಜೆಪಿಯ ಪದ್ಮನಾಭನಗರ ಶಾಸಕ ಅಶೋಕ ಮಲಗಿದ್ದರೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ಮಾರುತ್ತಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಆದರೆ ಈ ವ್ಯಕ್ತಿಗಳು ವಿಶ್ರಾಂತಿಯಲ್ಲಿದ್ದು, ಚಿಲ್ ಆಗಿದ್ದಾರೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಹೆದ್ದಾರಿ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಂಡ ತೇಜಸ್ವಿ ಸೂರ್ಯ: ಸೂರ್ಯನ ಕೆಳಗೂ ಕತ್ತಲೆ ಎಂದ ಅಖಿಲೇಶ್ ಯಾದವ್

ವೈಟ್‌ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಹೇಳ್ಲಾ ……ಎಂಎಲ್ಎ ….ಎಂಪಿ ಆಗೋವರೆಲ್ಲ ಸಂಸಾರಿಗಳಾಗಿರಬೇಕು…..ಯುವಕರಿಗೆ ಕೊಟ್ಟು ದೇಶ ಉದ್ದಾರ ಆಗುತ್ತೆ ಅನ್ನೋದು ಕೇವಲ ಕಲ್ಪನೆ……. ಅವರು ದೊಡ್ಡ ಭ್ರಮೆಯಲ್ಲಿಟ್ಟುಕೊಂಡು ಭಾಷಣ ಬಿಗಿದ್ದಾರೆ ಅಷ್ಟೇ…..ಸಾಮಾಜಿಕ ಜ್ಞಾನ ಇರುವುದಿಲ್ಲ… ಇನ್ನು ಮುಂದೆ ಚುನಾವಣೆಯಲ್ಲಿ ಮತ ಹಾಕುವರೇ ಯೋಚನೆ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...