Homeಕರ್ನಾಟಕಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ಗೆ ಭೇಟಿ ನೀಡಿ ಅಲ್ಲಿನ ತಿಂಡಿಗಳನ್ನು ಪ್ರಚಾರ ಮಾಡಿರುವ ವಿಡಿಯೊ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಬೆಂಗಳೂರಿನಲ್ಲಿ 51 ವರ್ಷಗಳ ಇತಿಹಾಸದಲ್ಲೆ ದಾಖಲೆಯ ಮಳೆ ಸುರಿದಿದೆ ಎಂದು ವರದಿಯಾಗಿದೆ. ಮಳೆಯ ಪರಿಣಾಮ ಬೆಂಗಳೂರಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದು ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ನೆರೆಯಿಂದಾಗಿ ಒಬ್ಬ ಯುವತಿ ವಿದ್ಯುತ್‌ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ನೆರೆಯು ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯ ಫಲ ಎಂದು ದೇಶದಾದ್ಯಂತ ಆಕ್ರೋಶವೂ ಭುಗಿಲೆದ್ದಿದೆ. ಈ ನಡುವೆ ಕ್ಷೇತ್ರವೊಂದನ್ನು ಪ್ರತಿನಿಧಿಸುವ ಸಂಸದರೊಬ್ಬರು ಜನರು ಸಂಕಷ್ಟದಲ್ಲಿ ಇರುವಾಗ ಅದರ ಬಗ್ಗೆ ಮಾತನಾಡದೆ ಯಾವುದೊ ಹೋಟೆಲ್ ಒಂದಕ್ಕೆ ತೆರಳಿ ಅದನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ಕೂಡಾ ಎದ್ದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಅವರು ಇನ್ಸ್‌ಟಾಗ್ರಾಂನಲ್ಲಿ ದೋಸೆಯ ಚಿತ್ರವೊಂದನ್ನು ನೋಡಿ ‘ಟೆಂಪ್ಟ್‌’ ಆಗಿ ಪದ್ಮನಾಗ ನಗರದ ಬಳಿಯ ಹೊಟೆಲ್‌ಗೆ ಬಂದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

“ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ ದೋಸೆ. ನೀವು ಬನ್ನಿ. ಅದನ್ನು ನೀವು ತಿಂದಾಗಲೆ ಅದರ ಆಸ್ವಾದನೆ ಗೊತ್ತಾಗೋದು. ಬಹಳ ಚೆನ್ನಾಗಿದೆ, ದಯವಿಟ್ಟು ಬನ್ನಿ. ಅದಲ್ಲದೆ ಇವರ ಉಪ್ಪಿಟ್ಟ ಬಹಳ ಚೆನ್ನಾಗಿದೆ. ಮನೆಯಲ್ಲಿ ಮಾಡಿದ್ರೆ ಮುಖ ಸಿಂಡರಿಸಿಕೊಂಡು ತಿಂತಾ ಇರಲಿಲ್ಲ. ಆದರೆ ಇಲ್ಲಿ ಉಪ್ಪಿಟ್ಟು ಬಹಳ ಚೆನ್ನಾಗಿದೆ. ಅದನ್ನೂ ಕೂಡಾ ಟ್ರೈ ಮಾಡಿ. ಧನ್ಯವಾದ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಲಾವಣ್ಯ ಬಳ್ಳಾಲ್ ಅವರು, “ಈ ವಿಡಿಯೊ ಸೆಪ್ಟೆಂಬರ್‌ 5 ರಂದು ಮಾಡಿದ್ದು. ಬೆಂಗಳೂರು ಮುಳುಗುತ್ತಿರುವಾಗ ತೇಜಸ್ವಿ ಸೂರ್ಯ ಒಳ್ಳೆಯ ಬೆಳಗ್ಗಿನ ತಿಂಡಿಯನ್ನು ತಿಂದು ಎಂಜಾಯ್ ಮಾಡುತ್ತಿದ್ದರು. ನೆರೆ ಬಂದಿರುವ ಪ್ರದೇಶದಕ್ಕೆ ಅವರು ಒಂದು ಬಾರಿಯಾದರೂ ಭೇಟಿ ನೀಡಿದ್ದಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸಾಮಾಜಿಕ ಕಾರ್ಯಕರ್ತ ಚೇತನ್ ಕೃಷ್ಣ ಅವರು, “ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕು. ಬೆಂಗಳೂರಿನ ಅರ್ಧ ಭಾಗ ಜಲಾವೃತವಾದಾಗ ಈ ಚೈಲ್ಡ್‌‌ ಚಪಾತಿ ಏನೂ ಆಗಿಲ್ಲ ಎಂಬಂತೆ ದೋಸೆ ಸವಿಯುತ್ತಿದ್ದಾರೆ. ಎಂತಹ ಅಸೂಕ್ಷ್ಮಯುಳ್ಳ ಕಪಟಿ” ಎಂದು ಕಿಡಿ ಕಾರಿದ್ದಾರೆ.

ಗಣೇಶ್ ನಚಿಕೇತು ಅವರು, “ಇಡೀ ಬೆಂಗಳೂರು ನಗರ ಜಲಾವೃತವಾಗಿದೆ. ಜನರು ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬೇಜವಾಬ್ದಾರಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಯಾವುದೋ ಹೋಟೆಲ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ವೀಡಿಯೊ ಸೆಪ್ಟೆಂಬರ್ 5 ರದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಭೂಷಣ್‌ ನಾಗ್‌ ಅವರು, “ಸಭೆಯೊಂದರಲ್ಲಿ ಬಿಜೆಪಿಯ ಪದ್ಮನಾಭನಗರ ಶಾಸಕ ಅಶೋಕ ಮಲಗಿದ್ದರೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ಮಾರುತ್ತಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಆದರೆ ಈ ವ್ಯಕ್ತಿಗಳು ವಿಶ್ರಾಂತಿಯಲ್ಲಿದ್ದು, ಚಿಲ್ ಆಗಿದ್ದಾರೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಹೆದ್ದಾರಿ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಂಡ ತೇಜಸ್ವಿ ಸೂರ್ಯ: ಸೂರ್ಯನ ಕೆಳಗೂ ಕತ್ತಲೆ ಎಂದ ಅಖಿಲೇಶ್ ಯಾದವ್

ವೈಟ್‌ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಹೇಳ್ಲಾ ……ಎಂಎಲ್ಎ ….ಎಂಪಿ ಆಗೋವರೆಲ್ಲ ಸಂಸಾರಿಗಳಾಗಿರಬೇಕು…..ಯುವಕರಿಗೆ ಕೊಟ್ಟು ದೇಶ ಉದ್ದಾರ ಆಗುತ್ತೆ ಅನ್ನೋದು ಕೇವಲ ಕಲ್ಪನೆ……. ಅವರು ದೊಡ್ಡ ಭ್ರಮೆಯಲ್ಲಿಟ್ಟುಕೊಂಡು ಭಾಷಣ ಬಿಗಿದ್ದಾರೆ ಅಷ್ಟೇ…..ಸಾಮಾಜಿಕ ಜ್ಞಾನ ಇರುವುದಿಲ್ಲ… ಇನ್ನು ಮುಂದೆ ಚುನಾವಣೆಯಲ್ಲಿ ಮತ ಹಾಕುವರೇ ಯೋಚನೆ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...