Homeಮುಖಪುಟಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

- Advertisement -
- Advertisement -

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ಯಾಚ್‌ ಬಿಟ್ಟ ಕಾರಣಕ್ಕೆ ಭಾರತೀಯ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿದು ಬಲಪಂಥೀಯ ಟ್ರೋಲ್ ಪಡೆ ಹೀಯಾಳಿಸುತ್ತಿದೆ. ಆದರೆ ದ್ವೇಷ ಹಬ್ಬಿಸುತ್ತಿದ್ದವರ ಟ್ವೀಟ್‌ಗಳನ್ನು ಸಂಗ್ರಹಿಸಿ ಪೋಸ್ಟ್ ಮಾಡಿದ್ದಕ್ಕೆ ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ದೂರು ದಾಖಲಿಸಲಾಗಿದೆ.

“ಕ್ರಿಕೆಟಿಗ ಅರ್ಷದೀಪ್‌ ಸಿಂಗ್‌ ಮತ್ತು ಸಿಖ್‌ ಸಮುದಾಯದ ವಿರುದ್ಧ ಟ್ವೀಟ್‌ ಮಾಡಿ ದ್ವೇಷ ಹರಡುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ನಾಯಕ ಮಂಜಿಂದರ್‌ ಸಿಂಗ್‌ ಸಿರ್ಸಾ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಸಿರ್ಸಾ ಅವರು ದಾಖಲಿಸಿರುವ ದೂರಿನಲ್ಲಿ, ಜುಬೇರ್‌ ಮಾಡಿದ್ದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ. ಅರ್ಷದೀಪ್‌ ಸಿಂಗ್‌ ವಿರುದ್ಧ ಇತರರು ಮಾಡಿರುವ ಹಲವು ಟ್ವೀಟ್‌ಗಳನ್ನೂ ಉಲ್ಲೇಖಿಸಿದ್ದಾರೆ.

“ಈ ಟ್ವೀಟ್‌ಗಳಲ್ಲಿ ಹೆಚ್ಚಿನವು ಪಾಕಿಸ್ತಾನಿ ಖಾತೆಗಳಲ್ಲಿ ಪೋಸ್ಟ್‌ ಆಗಿವೆ. ಜುಬೇರ್ ಅವರು ದೇಶ ವಿರೋಧಿಗಳ ಆಣತಿಯಂತೆ ನಡೆಯುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಷಡ್ಯಂತ್ರವನ್ನು ಬಯಲಿಗೆಳೆಯಬೇಕು” ಎಂದು ಸಿರ್ಸಾ ಒತ್ತಾಯಿಸಿದ್ದಾರೆ.

“ಜುಬೇರ್‌ ಅವರು ಗಡಿಯಾಚೆಗಿನ ದೇಶವಿರೋಧಿಗಳೊಂದಿಗೆ ಶಾಮೀಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಖಾಲಿಸ್ತಾನಿʼ ಎಂಬ ಪದವನ್ನು ʼಸರ್ಚ್ʼ ಕೊಟ್ಟು ಅರ್ಷದೀಪ್‌ ಸಿಂಗ್‌ ವಿರುದ್ಧ ಪೋಸ್ಟ್‌ ಆಗಿದ್ದ ಎಲ್ಲ ಟ್ವೀಟ್‌ಗಳನ್ನು ಸ್ಕ್ರೀನ್‌ ಶಾಟ್‌ ತೆಗೆದುಕೊಂಡಿದ್ದಾರೆ. ಸೆಪ್ಟೆಂಬರ್‌ 5ರ ಸಂಜೆ 5ಗಂಟೆಗೆ ಟ್ವೀಟ್‌ ಮಾಡಿದ್ದಾರೆ. ಈ ಸ್ಕ್ರೀನ್‌ ಶಾಟ್‌ಗಳ ಮೂಲಕ ಭಾರತೀಯ ಟ್ವಿಟರ್‌ ಖಾತೆಗಳಿಂದ ಇಂಥ ನಿಂದನೀಯ, ದುರುದ್ದೇಶಪೂರಿತ ಟ್ವೀಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ಬಿಂಬಿಸಲು ಜುಬೇರ್‌ ಯತ್ನಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಈ ಟ್ವೀಟ್‌ ಮಾಡಿರುವ ಖಾತೆಗಳಲ್ಲಿ ಹೆಚ್ಚಿನವು ಪಾಕಿಸ್ತಾನದ ಖಾತೆಗಳಾಗಿವೆ” ಎಂದು ಸಿರ್ಸಾ ಆರೋಪಿಸಿದ್ದಾರೆ.

“ಅರ್ಷದೀಪ್‌ ವಿರುದ್ಧ ಟ್ವೀಟ್‌ ಮಾಡುವುದಕ್ಕಾಗಿಯೇ ಕೆಲ ಟ್ವಿಟರ್ ಖಾತೆಗಳನ್ನು ಸೃಷ್ಟಿಸಲಾಗಿದೆ. ದೇಶಕ್ಕಾಗಿ ಕ್ರಿಕೆಟ್‌ ಆಡುವ ಅರ್ಷದೀಪ್‌ ವಿರುದ್ಧ ದ್ವೇಷ ಹರಡುವುದು ಈ ಟ್ವೀಟ್‌ಗಳ ಹಿಂದಿನ ಏಕೈಕ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಅರ್ಷದೀಪ್‌ ಸಿಂಗ್‌ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ ಆಗಿದ್ದರು.

ಜುಬೇರ್‌ ಮತ್ತೆ ಟ್ವೀಟ್ ಮಾಡಿದ್ದು, ಟ್ವಿಟರ್‌ನಲ್ಲಿ ಪ್ರಭಾವಶಾಲಿಯಾಗಿರುವ ಎರಡು ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜೊತೆಗೆ ಈ ಖಾತೆಗಳಲ್ಲಿ ಡಿಲೀಟ್ ಮಾಡಲಾದ ಟ್ವಿಟ್‌ಗಳ ಅರ್ಕೈವ್‌ ಲಿಂಕ್‌ ಕೂಡ ಪೋಸ್ಟ್‌ ಮಾಡಿದ್ದಾರೆ.

“ಇವರು ಯಾವ ದೇಶಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಇವರ ಹಳೆಯ ಟ್ವೀಟ್‌ಗಳನ್ನು ಪರಿಶೀಲಿಸಿ. ಹುಡುಕಾಟ ನಡೆಸಿದರೆ ನಿಮಗೆ ಹೆಚ್ಚಿನ ಫಲಿತಾಂಶ ದೊರಕುತ್ತದೆ. ಹಲವರು ತಮ್ಮ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಆರ್ಕೈವ್ ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಲಪಂಥೀಯರ ಟ್ವೀಟ್‌ಗಳನ್ನು ಹಂಚಿಕೊಂಡ ಕಾರಣಕ್ಕೇ ಜುಬೇರ್‌ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆಯೇ ಎಂಬ ಗುಮಾನಿ ಹುಟ್ಟಿಕೊಂಡಿದೆ. ದೂರು ದಾಖಲಾದ ಬಳಿಕ ಕೆಲವು ಬಲಪಂಥೀಯರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

2018ರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 2022ರ ಜೂನ್‌ 27ರಂದು ಜುಬೇರ್‌ ಅವರನ್ನು ಬಂಧಿಸಲಾಗಿತ್ತು. 24 ದಿನಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...