Homeಮುಖಪುಟಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

- Advertisement -
- Advertisement -

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ಯಾಚ್‌ ಬಿಟ್ಟ ಕಾರಣಕ್ಕೆ ಭಾರತೀಯ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿದು ಬಲಪಂಥೀಯ ಟ್ರೋಲ್ ಪಡೆ ಹೀಯಾಳಿಸುತ್ತಿದೆ. ಆದರೆ ದ್ವೇಷ ಹಬ್ಬಿಸುತ್ತಿದ್ದವರ ಟ್ವೀಟ್‌ಗಳನ್ನು ಸಂಗ್ರಹಿಸಿ ಪೋಸ್ಟ್ ಮಾಡಿದ್ದಕ್ಕೆ ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ದೂರು ದಾಖಲಿಸಲಾಗಿದೆ.

“ಕ್ರಿಕೆಟಿಗ ಅರ್ಷದೀಪ್‌ ಸಿಂಗ್‌ ಮತ್ತು ಸಿಖ್‌ ಸಮುದಾಯದ ವಿರುದ್ಧ ಟ್ವೀಟ್‌ ಮಾಡಿ ದ್ವೇಷ ಹರಡುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ನಾಯಕ ಮಂಜಿಂದರ್‌ ಸಿಂಗ್‌ ಸಿರ್ಸಾ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಸಿರ್ಸಾ ಅವರು ದಾಖಲಿಸಿರುವ ದೂರಿನಲ್ಲಿ, ಜುಬೇರ್‌ ಮಾಡಿದ್ದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ. ಅರ್ಷದೀಪ್‌ ಸಿಂಗ್‌ ವಿರುದ್ಧ ಇತರರು ಮಾಡಿರುವ ಹಲವು ಟ್ವೀಟ್‌ಗಳನ್ನೂ ಉಲ್ಲೇಖಿಸಿದ್ದಾರೆ.

“ಈ ಟ್ವೀಟ್‌ಗಳಲ್ಲಿ ಹೆಚ್ಚಿನವು ಪಾಕಿಸ್ತಾನಿ ಖಾತೆಗಳಲ್ಲಿ ಪೋಸ್ಟ್‌ ಆಗಿವೆ. ಜುಬೇರ್ ಅವರು ದೇಶ ವಿರೋಧಿಗಳ ಆಣತಿಯಂತೆ ನಡೆಯುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಷಡ್ಯಂತ್ರವನ್ನು ಬಯಲಿಗೆಳೆಯಬೇಕು” ಎಂದು ಸಿರ್ಸಾ ಒತ್ತಾಯಿಸಿದ್ದಾರೆ.

“ಜುಬೇರ್‌ ಅವರು ಗಡಿಯಾಚೆಗಿನ ದೇಶವಿರೋಧಿಗಳೊಂದಿಗೆ ಶಾಮೀಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಖಾಲಿಸ್ತಾನಿʼ ಎಂಬ ಪದವನ್ನು ʼಸರ್ಚ್ʼ ಕೊಟ್ಟು ಅರ್ಷದೀಪ್‌ ಸಿಂಗ್‌ ವಿರುದ್ಧ ಪೋಸ್ಟ್‌ ಆಗಿದ್ದ ಎಲ್ಲ ಟ್ವೀಟ್‌ಗಳನ್ನು ಸ್ಕ್ರೀನ್‌ ಶಾಟ್‌ ತೆಗೆದುಕೊಂಡಿದ್ದಾರೆ. ಸೆಪ್ಟೆಂಬರ್‌ 5ರ ಸಂಜೆ 5ಗಂಟೆಗೆ ಟ್ವೀಟ್‌ ಮಾಡಿದ್ದಾರೆ. ಈ ಸ್ಕ್ರೀನ್‌ ಶಾಟ್‌ಗಳ ಮೂಲಕ ಭಾರತೀಯ ಟ್ವಿಟರ್‌ ಖಾತೆಗಳಿಂದ ಇಂಥ ನಿಂದನೀಯ, ದುರುದ್ದೇಶಪೂರಿತ ಟ್ವೀಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ಬಿಂಬಿಸಲು ಜುಬೇರ್‌ ಯತ್ನಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಈ ಟ್ವೀಟ್‌ ಮಾಡಿರುವ ಖಾತೆಗಳಲ್ಲಿ ಹೆಚ್ಚಿನವು ಪಾಕಿಸ್ತಾನದ ಖಾತೆಗಳಾಗಿವೆ” ಎಂದು ಸಿರ್ಸಾ ಆರೋಪಿಸಿದ್ದಾರೆ.

“ಅರ್ಷದೀಪ್‌ ವಿರುದ್ಧ ಟ್ವೀಟ್‌ ಮಾಡುವುದಕ್ಕಾಗಿಯೇ ಕೆಲ ಟ್ವಿಟರ್ ಖಾತೆಗಳನ್ನು ಸೃಷ್ಟಿಸಲಾಗಿದೆ. ದೇಶಕ್ಕಾಗಿ ಕ್ರಿಕೆಟ್‌ ಆಡುವ ಅರ್ಷದೀಪ್‌ ವಿರುದ್ಧ ದ್ವೇಷ ಹರಡುವುದು ಈ ಟ್ವೀಟ್‌ಗಳ ಹಿಂದಿನ ಏಕೈಕ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಅರ್ಷದೀಪ್‌ ಸಿಂಗ್‌ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ ಆಗಿದ್ದರು.

ಜುಬೇರ್‌ ಮತ್ತೆ ಟ್ವೀಟ್ ಮಾಡಿದ್ದು, ಟ್ವಿಟರ್‌ನಲ್ಲಿ ಪ್ರಭಾವಶಾಲಿಯಾಗಿರುವ ಎರಡು ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜೊತೆಗೆ ಈ ಖಾತೆಗಳಲ್ಲಿ ಡಿಲೀಟ್ ಮಾಡಲಾದ ಟ್ವಿಟ್‌ಗಳ ಅರ್ಕೈವ್‌ ಲಿಂಕ್‌ ಕೂಡ ಪೋಸ್ಟ್‌ ಮಾಡಿದ್ದಾರೆ.

“ಇವರು ಯಾವ ದೇಶಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಇವರ ಹಳೆಯ ಟ್ವೀಟ್‌ಗಳನ್ನು ಪರಿಶೀಲಿಸಿ. ಹುಡುಕಾಟ ನಡೆಸಿದರೆ ನಿಮಗೆ ಹೆಚ್ಚಿನ ಫಲಿತಾಂಶ ದೊರಕುತ್ತದೆ. ಹಲವರು ತಮ್ಮ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಆರ್ಕೈವ್ ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಲಪಂಥೀಯರ ಟ್ವೀಟ್‌ಗಳನ್ನು ಹಂಚಿಕೊಂಡ ಕಾರಣಕ್ಕೇ ಜುಬೇರ್‌ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆಯೇ ಎಂಬ ಗುಮಾನಿ ಹುಟ್ಟಿಕೊಂಡಿದೆ. ದೂರು ದಾಖಲಾದ ಬಳಿಕ ಕೆಲವು ಬಲಪಂಥೀಯರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

2018ರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 2022ರ ಜೂನ್‌ 27ರಂದು ಜುಬೇರ್‌ ಅವರನ್ನು ಬಂಧಿಸಲಾಗಿತ್ತು. 24 ದಿನಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...