Homeಮುಖಪುಟಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

ಕ್ರಿಕೆಟಿಗ ಅರ್ಷದೀಪ್‌‌ರನ್ನು ಖಾಲಿಸ್ತಾನಿ ಎಂದವರ ಟ್ವೀಟ್‌ ಪತ್ತೆ ಹಚ್ಚಿದ್ದಕ್ಕೆ ಜುಬೇರ್‌ ವಿರುದ್ಧ ದೂರು ದಾಖಲು!

- Advertisement -
- Advertisement -

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ಯಾಚ್‌ ಬಿಟ್ಟ ಕಾರಣಕ್ಕೆ ಭಾರತೀಯ ಬೌಲರ್‌ ಅರ್ಷದೀಪ್‌ ಸಿಂಗ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿದು ಬಲಪಂಥೀಯ ಟ್ರೋಲ್ ಪಡೆ ಹೀಯಾಳಿಸುತ್ತಿದೆ. ಆದರೆ ದ್ವೇಷ ಹಬ್ಬಿಸುತ್ತಿದ್ದವರ ಟ್ವೀಟ್‌ಗಳನ್ನು ಸಂಗ್ರಹಿಸಿ ಪೋಸ್ಟ್ ಮಾಡಿದ್ದಕ್ಕೆ ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ದೂರು ದಾಖಲಿಸಲಾಗಿದೆ.

“ಕ್ರಿಕೆಟಿಗ ಅರ್ಷದೀಪ್‌ ಸಿಂಗ್‌ ಮತ್ತು ಸಿಖ್‌ ಸಮುದಾಯದ ವಿರುದ್ಧ ಟ್ವೀಟ್‌ ಮಾಡಿ ದ್ವೇಷ ಹರಡುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ನಾಯಕ ಮಂಜಿಂದರ್‌ ಸಿಂಗ್‌ ಸಿರ್ಸಾ ದೂರು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಸಿರ್ಸಾ ಅವರು ದಾಖಲಿಸಿರುವ ದೂರಿನಲ್ಲಿ, ಜುಬೇರ್‌ ಮಾಡಿದ್ದ ಟ್ವೀಟ್‌ಗಳನ್ನು ಉಲ್ಲೇಖಿಸಿದ್ದಾರೆ. ಅರ್ಷದೀಪ್‌ ಸಿಂಗ್‌ ವಿರುದ್ಧ ಇತರರು ಮಾಡಿರುವ ಹಲವು ಟ್ವೀಟ್‌ಗಳನ್ನೂ ಉಲ್ಲೇಖಿಸಿದ್ದಾರೆ.

“ಈ ಟ್ವೀಟ್‌ಗಳಲ್ಲಿ ಹೆಚ್ಚಿನವು ಪಾಕಿಸ್ತಾನಿ ಖಾತೆಗಳಲ್ಲಿ ಪೋಸ್ಟ್‌ ಆಗಿವೆ. ಜುಬೇರ್ ಅವರು ದೇಶ ವಿರೋಧಿಗಳ ಆಣತಿಯಂತೆ ನಡೆಯುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಷಡ್ಯಂತ್ರವನ್ನು ಬಯಲಿಗೆಳೆಯಬೇಕು” ಎಂದು ಸಿರ್ಸಾ ಒತ್ತಾಯಿಸಿದ್ದಾರೆ.

“ಜುಬೇರ್‌ ಅವರು ಗಡಿಯಾಚೆಗಿನ ದೇಶವಿರೋಧಿಗಳೊಂದಿಗೆ ಶಾಮೀಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಖಾಲಿಸ್ತಾನಿʼ ಎಂಬ ಪದವನ್ನು ʼಸರ್ಚ್ʼ ಕೊಟ್ಟು ಅರ್ಷದೀಪ್‌ ಸಿಂಗ್‌ ವಿರುದ್ಧ ಪೋಸ್ಟ್‌ ಆಗಿದ್ದ ಎಲ್ಲ ಟ್ವೀಟ್‌ಗಳನ್ನು ಸ್ಕ್ರೀನ್‌ ಶಾಟ್‌ ತೆಗೆದುಕೊಂಡಿದ್ದಾರೆ. ಸೆಪ್ಟೆಂಬರ್‌ 5ರ ಸಂಜೆ 5ಗಂಟೆಗೆ ಟ್ವೀಟ್‌ ಮಾಡಿದ್ದಾರೆ. ಈ ಸ್ಕ್ರೀನ್‌ ಶಾಟ್‌ಗಳ ಮೂಲಕ ಭಾರತೀಯ ಟ್ವಿಟರ್‌ ಖಾತೆಗಳಿಂದ ಇಂಥ ನಿಂದನೀಯ, ದುರುದ್ದೇಶಪೂರಿತ ಟ್ವೀಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ಬಿಂಬಿಸಲು ಜುಬೇರ್‌ ಯತ್ನಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಈ ಟ್ವೀಟ್‌ ಮಾಡಿರುವ ಖಾತೆಗಳಲ್ಲಿ ಹೆಚ್ಚಿನವು ಪಾಕಿಸ್ತಾನದ ಖಾತೆಗಳಾಗಿವೆ” ಎಂದು ಸಿರ್ಸಾ ಆರೋಪಿಸಿದ್ದಾರೆ.

“ಅರ್ಷದೀಪ್‌ ವಿರುದ್ಧ ಟ್ವೀಟ್‌ ಮಾಡುವುದಕ್ಕಾಗಿಯೇ ಕೆಲ ಟ್ವಿಟರ್ ಖಾತೆಗಳನ್ನು ಸೃಷ್ಟಿಸಲಾಗಿದೆ. ದೇಶಕ್ಕಾಗಿ ಕ್ರಿಕೆಟ್‌ ಆಡುವ ಅರ್ಷದೀಪ್‌ ವಿರುದ್ಧ ದ್ವೇಷ ಹರಡುವುದು ಈ ಟ್ವೀಟ್‌ಗಳ ಹಿಂದಿನ ಏಕೈಕ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತ–ಪಾಕಿಸ್ತಾನ ಪಂದ್ಯದಲ್ಲಿ ಅರ್ಷದೀಪ್‌ ಸಿಂಗ್‌ ಕ್ಯಾಚ್‌ ಕೈ ಚೆಲ್ಲಿದ್ದಕ್ಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ ಆಗಿದ್ದರು.

ಜುಬೇರ್‌ ಮತ್ತೆ ಟ್ವೀಟ್ ಮಾಡಿದ್ದು, ಟ್ವಿಟರ್‌ನಲ್ಲಿ ಪ್ರಭಾವಶಾಲಿಯಾಗಿರುವ ಎರಡು ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜೊತೆಗೆ ಈ ಖಾತೆಗಳಲ್ಲಿ ಡಿಲೀಟ್ ಮಾಡಲಾದ ಟ್ವಿಟ್‌ಗಳ ಅರ್ಕೈವ್‌ ಲಿಂಕ್‌ ಕೂಡ ಪೋಸ್ಟ್‌ ಮಾಡಿದ್ದಾರೆ.

“ಇವರು ಯಾವ ದೇಶಕ್ಕೆ ಸೇರಿದವರು ಎಂಬುದನ್ನು ತಿಳಿಯಲು ಇವರ ಹಳೆಯ ಟ್ವೀಟ್‌ಗಳನ್ನು ಪರಿಶೀಲಿಸಿ. ಹುಡುಕಾಟ ನಡೆಸಿದರೆ ನಿಮಗೆ ಹೆಚ್ಚಿನ ಫಲಿತಾಂಶ ದೊರಕುತ್ತದೆ. ಹಲವರು ತಮ್ಮ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. ಆರ್ಕೈವ್ ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಳ್ಳಾರಿ| ಸಾಮಾಜಿಕ ಮಾಧ್ಯಮದಲ್ಲಿ ಬಂದ ಸುಳ್ಳು ನಂಬಿ ಬಾಲಕನ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಗ್ರಾಮಸ್ಥರು

ಬಲಪಂಥೀಯರ ಟ್ವೀಟ್‌ಗಳನ್ನು ಹಂಚಿಕೊಂಡ ಕಾರಣಕ್ಕೇ ಜುಬೇರ್‌ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆಯೇ ಎಂಬ ಗುಮಾನಿ ಹುಟ್ಟಿಕೊಂಡಿದೆ. ದೂರು ದಾಖಲಾದ ಬಳಿಕ ಕೆಲವು ಬಲಪಂಥೀಯರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

2018ರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 2022ರ ಜೂನ್‌ 27ರಂದು ಜುಬೇರ್‌ ಅವರನ್ನು ಬಂಧಿಸಲಾಗಿತ್ತು. 24 ದಿನಗಳ ಕಾಲ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...