Homeಮುಖಪುಟಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

ಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಬೌಲರ್ ಅರ್ಷದೀಪ್ ಸಿಂಗ್ ಅವರ ಕುರಿತು ಅವಹೇಳನಕಾರಿಯಾಗಿ ವಿಕಿಪೀಡಿಯಾದಲ್ಲಿ ಮಾಹಿತಿ ನೀಡಲಾಗಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ.

ಅರ್ಷದೀಪ್‌ ಸಿಂಗ್‌ ಖಾಲಿಸ್ತಾನ್‌ ಹೋರಾಟವನ್ನು ಬೆಂಬಲಿಸಿದ್ದಾರೆಂದು ಸುಳ್ಳು ಹಬ್ಬಿಸಲಾಗಿದ್ದು ಭಾರತದಲ್ಲಿನ ವಿಕಿಪೀಡಿಯಾ ಕಾರ್ಯನಿರ್ವಾಹಕರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಮನ್ಸ್‌ ಜಾರಿ ಮಾಡಿದೆ.

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ, ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಶ್‌ದೀಪ್ ನಿರ್ಣಾಯಕ ಕ್ಯಾಚ್ ಅನ್ನು ಕೈಬಿಟ್ಟರು. ಭಾರತ ತಂಡವು ತನ್ನ ಸಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದರಿಂದ ಟ್ರೋಲ್‌ಗೆ ಗುರಿಯಾದರು.

ಇದರ ಬೆನ್ನಲ್ಲೇ ಅರ್ಹದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿಯುವ ಪ್ರಯತ್ನ ಮಾಡಲಾಯಿತು. ವಿಕಿಪೀಡಿಯಾದಲ್ಲಿ ತಪ್ಪು ಮಾಹಿತಿ ಸೇರಿಸಿ, ಅರ್ಷದೀಪ್ ಅವರ ಚಾರಿತ್ರ್ಯ ವಧೆ ಮಾಡಲು ಯತ್ನಿಸಲಾಯಿತು. ಆನಂತರದಲ್ಲಿ ಈ ಮಾಹಿತಿಯನ್ನು ಪೇಜ್‌ನಿಂದ ತೆಗೆದುಹಾಕಲಾಗಿದೆ. ಅನೇಕ ಟ್ವಿಟ್ಟರ್ ಬಳಕೆದಾರರು ಅರ್ಷದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ನಿಂದಿಸಿವೆ.

ಎಲೆಕ್ಟ್ರಾನಿಕ್ಸ್ ಸಚಿವಾಲಯ ಮತ್ತು ಐಟಿ ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಶರ್ಮಾ ನೇತೃತ್ವದ ಅಧಿಕಾರಿಗಳ ತಂಡವು ವಿಕಿಪೀಡಿಯ ಕಾರ್ಯನಿರ್ವಾಹಕರಿಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಮಾರ್ಪಾಡು ಮಾಡಲು ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿಕಿಪೀಡಿಯಾಕ್ಕೆ ನೋಟಿಸ್ ಕಳುಹಿಸುವಾಗ, “ಇದು ಅರ್ಷದೀಪ್ ಸಿಂಗ್ ಅವರ ಕುಟುಂಬಕ್ಕೆ ನೀಡಿದ ಬೆದರಿಕೆಯಾಗಬಹುದು. ಇದರಿಂದ ದೇಶದ ವಾತಾವರಣವೂ ಹಾಳಾಗಬಹುದು. ಐಪಿ ವಿಳಾಸವನ್ನು ಪರಿಶೀಲಿಸಿದಾಗ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರೊಬ್ಬರು ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ” ಎಂದಿದೆ.

ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿ, “ಯಾವುದೇ ವ್ಯಕ್ತಿಯ ಮಾನಹಾನಿ ಮಾಡುವ ಇಂತಹ ತಪ್ಪು ಮಾಹಿತಿ ಮತ್ತು ಉದ್ದೇಶಪೂರ್ವಕ ಪ್ರಯತ್ನಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ವೇದಿಕೆಯಲ್ಲಿ ಅನುಮತಿಸಲಾಗುವುದಿಲ್ಲ. ಇದು ಸುರಕ್ಷತೆ ಮತ್ತು ಇಂಟರ್‌ನೆಟ್‌ನ ವಿಶ್ವಾಸಾರ್ಹತೆಯ ಮೇಲೆ ಸರ್ಕಾರ ಇಟ್ಟಿರುವ ನಿರೀಕ್ಷೆಗಳನ್ನು ಉಲ್ಲಂಘಿಸುತ್ತದೆ” ಎಂದಿದ್ದಾರೆ.

ಮಾಜಿ ಕ್ರಿಕೆಟಿಗ ಮತ್ತು ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕ ಅರ್ಷದೀಪ್ ಸಿಂಗ್ ಅವರನ್ನು ಬೆಂಬಲಿಸಿದ್ದಾರೆ. “ಅರ್ಷದೀಪ್ ಅವರನ್ನು ಟೀಕಿಸುವುದನ್ನು ನಿಲ್ಲಿಸಬೇಕು. ಯಾರೂ ಉದ್ದೇಶಪೂರ್ವಕವಾಗಿ ಕ್ಯಾಚ್ ಬಿಡುವುದಿಲ್ಲ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆ ಇದೆ. ಪಾಕಿಸ್ತಾನ ಉತ್ತಮವಾಗಿ ಆಡಿದೆ. ನಮ್ಮ ತಂಡ ಮತ್ತು ಅರ್ಶ್‌‌ದೀಪ್‌ ಬಗ್ಗೆ ನಡೆಯುತ್ತಿರುವ ಕೆಟ್ಟ ಸಂಗತಿಗಳು ನಾಚಿಕೆಗೇಡಿನದ್ದಾಗಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...