Homeಮುಖಪುಟವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

- Advertisement -
- Advertisement -

ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಮೃತ ಮಹಿಳೆಯರನ್ನು ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಎಂದು ಗುರುತಿಸಲಾಗಿದೆ. ರಾಯಲು ದೇವಿ ಮತ್ತು ಧೋಲೋ ದೇವಿ ಅವರ ಶವಗಳನ್ನು ರಣದಿಹ್ ಅರಣ್ಯದಿಂದ ಭಾನುವಾರ ರಾತ್ರಿ ಪೊಲೀಸರು ಪತ್ತೆ ಹಚ್ಚಿದ್ದರು. ಅಲೂಮಣಿ ದೇವಿ ಅವರ ಕೊಳೆತ ಶವ ಅದೇ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾನುವಾರ ಮಧ್ಯಾಹ್ನ ಸ್ಥಳೀಯ ಪತ್ರಕರ್ತರಿಂದ ಮೂವರು ಮಹಿಳೆಯರ ಹತ್ಯೆಯ ಬಗ್ಗೆ ಮಾಹಿತಿ ಪಡೆದೆವು. ಗ್ರಾಮಸ್ಥರ ತೀವ್ರ ಪ್ರತಿರೋಧದ ನಡುವೆ ಸೋನಾಹಟು ಪೊಲೀಸ್ ಠಾಣೆಯಿಂದ 25 ಕಿಮೀ ದೂರದಲ್ಲಿರುವ ಅರಣ್ಯದಲ್ಲಿ ರಾಹೆ ಮತ್ತು ಸೋನಾಹಟು ಪೊಲೀಸ್ ಠಾಣೆಗಳು ಜಂಟಿಯಾಗಿ ಶೋಧ ನಡೆಸಿದ್ದವು. ಭಾನುವಾರದಿಂದ ಬಹುತೇಕ ಎಲ್ಲ ಪುರುಷರು ಗ್ರಾಮದಿಂದ ತಲೆಮರೆಸಿಕೊಂಡಿದ್ದರು” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಹೇಳಿದೆ.

ಇದನ್ನೂ ಓದಿ: ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

“ಸೆಪ್ಟೆಂಬರ್ 1 ರ ರಾತ್ರಿ ತಾಮಾರ್‌ನ ಏಕಲವ್ಯ ವಿದ್ಯಾಲಯದ ವಿದ್ಯಾರ್ಥಿ ರಾಜ್ ಕಿಶೋರ್ ಮುಂಡಾ (18) ಹಾವು ಕಡಿತದಿಂದ ಸಾವನ್ನಪ್ಪಿದ್ದರು. ಅವರು ರಣದಿಹ್ ನಿವಾಸಿ ರಾಮ್ಸಾಕಲ್ ಸಿಂಗ್ ಮುಂಡಾ ಅವರ ಮಗನಾಗಿದ್ದು, ಅವರ ಸಾವು ವಾಮಾಚಾರದಿಂದ ನಡೆದಿದೆ ಎಂದು ಹಾವು ಹಿಡಿಯುವವರು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಸಾವಿನ ನಂತರ, ಗ್ರಾಮಸ್ಥರು ರಣದಿಹ್ ಗ್ರಾಮದ ಮಂತ್ರವಾದಿ ಮತ್ತು ಹಾವು ಹಿಡಿಯುವ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ಈ ವ್ಯಕ್ತಿಯು ಗ್ರಾಮದಲ್ಲಿ ಕೆಲವು ಮಹಿಳೆಯರು ಮಾಡುವ ವಾಮಾಚಾರದಿಂದ ಈ ಸಾವು ಸಂಭವಿಸಿದೆ ಎಂದು ಹೇಳಿದ್ದಾನೆ. ಅಷ್ಟೆ ಅಲ್ಲದೆ ಅವರನ್ನು ತೊಡೆದುಹಾಕದಿದ್ದರೆ ಅವರು ಗ್ರಾಮವನ್ನೆ ನಾಶಪಡಿಸುತ್ತಾರೆ ಎಂದು ಕೂಡಾ ನಂಬಿಸಿದ್ದಾನೆ.

ಅಷ್ಟೆ ಅಲ್ಲದೆ ಮಹಿಳೆಯರು ತಮ್ಮ ಕುಟುಂಬದ ಇನ್ನೊಬ್ಬ ಯುವಕನನ್ನು ಶೀಘ್ರದಲ್ಲೇ ಕೊಲ್ಲುತ್ತಾರೆ ಎಂದು ಕೂಡಾ ಮಂತ್ರವಾದಿ ಗ್ರಾಮಸ್ಥರಿಗೆ ನಂಬಿಸಿದ್ದಾನೆ.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಶುಕ್ರವಾರದಂದು ರಾಯಲು ದೇವಿಯ ಮಗ 19 ವರ್ಷದ ಲಲಿತ್ ಸಿಂಗ್ ಮುಂಡಾಗೆ ಕೂಡ ಹಾವು ಕಚ್ಚಿತ್ತು. ಚಿಕಿತ್ಸೆ ಬಳಿಕ ಆತನನ್ನು ರಕ್ಷಿಸಲಾಗಿತ್ತು. ನಂತರ ರಾಯಲು ದೇವಿಯನ್ನು ಕರೆತಂದು ಗ್ರಾಮಸ್ಥರು ಶನಿವಾರ ಸಭೆ ಕರೆದಿದ್ದರು. ಅಲ್ಲಿ ಅವರಿಗೆ ವಾಮಾಚಾರ ಮಾಡಿದ್ದಿ ಎಂದು ಥಳಿಸಿದ್ದರಿಂದ ಆಕೆ ಭಯದಿಂದ ವಾಮಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಗ್ರಾಮದಲ್ಲಿ ವಾಮಾಚಾರ ಮಾಡಿರುವ ಇತರೆ ಮಹಿಳೆಯರ ಹೆಸರು ಹೇಳುವಂತೆ ಒತ್ತಡ ಹೇರಿದಾಗ ಅವರು ಧೋಲೋ ದೇವಿ ಮತ್ತು ಅಲೂಮಣಿ ದೇವಿಯರ ಹೆಸರನ್ನು ಹೇಳಿಕೊಂಡಿದ್ದಾರೆ. ಇದರ ನಂತರ, ಗ್ರಾಮಸ್ಥರು ಮೂವರು ಮಹಿಳೆಯರನ್ನು ಹಿಡಿದು ರಣದಿಹ್ ಬಳಿಯ ಪರ್ವತಕ್ಕೆ ಕರೆದೊಯ್ದು ಕೊಂದಿದ್ದಾರೆ.

ಗ್ರಾಮದ ಸುರೇಂದರ್ ಮುಂಡಾ ಎಂಬುವರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಿರುವುದನ್ನು ರಾಂಚಿ ಎಸ್‌ಎಸ್‌ಪಿ ಕಿಶೋರ್ ಕೌಶಲ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

“ಘೋರ ಘಟನೆಯ ಕುರಿತು ತನಿಖೆ ನಡೆಸಲು ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಇದುವರೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ 16 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗ್ರಾಮಸ್ಥರಿಗೆ ಪ್ರಚೋದನೆ ನೀಡಿದ ಮಂತ್ರವಾದಿಯನ್ನೂ ನಾವು ಬಂಧಿಸುತ್ತೇವೆ” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...