Homeಕರ್ನಾಟಕಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ಪ್ರತಿಭಟಿಸಿದ ವಿದ್ಯಾರ್ಥಿ ಮತ್ತು ಅಧ್ಯಾಪಕರುಗಳನ್ನು ಕಿಡಿಗೇಡಿ ಎಂದ ಬಿಬಿಎಂಪಿ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನವನ್ನು ನಿಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ಹಾಗೂ ಅದ್ಯಾಪಕರುಗಳನ್ನು ‘ಕಿಡಿಗೇಡಿಗಳು’ ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಪ್ರಾಧ್ಯಾಪಕರುಗಳು ಬುಧವಾರ ಪ್ರತಿಭಟನೆ ನಡೆಸಿದ್ದರು. ಈ ನಡುವೆ, ಪ್ರತಿಭಟನೆ ನಡೆಸಿದ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳನ್ನು ಬಿಬಿಎಂಪಿ ಆಯುಕ್ತರು ‘ಕಿಡಿಗೇಡಿಗಳು’ ಎಂದು ಕರೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ ಅಕ್ರಮ ದೇವಸ್ಥಾನ ನಿರ್ಮಾಣವನ್ನು ನಿಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ಮತ್ತು ಅದ್ಯಾಪಕರುಗಳನ್ನು ಕಿಡಿಗೇಡಿಗಳು ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಅವರು, “ವಿಶ್ವ ವಿದ್ಯಾಲಯ ಕ್ಯಾಂಪಸ್ಸಿನೊಳಗೆ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನದ ವಿರುದ್ಧ ನಡೆಸಿದ ಪ್ರತಿಭಟನೆಯ ಬಗ್ಗೆ ಹೇಳುತ್ತಾ ಪ್ರತಿಭಟನೆ ನಡೆಸಿದವರು ‘ಕಿಡಿಗೇಡಿಗಳು’ ಎಂದು ಬಿಬಿಎಂಪಿ ಆಯುಕ್ತರು ಉಲ್ಲೇಖಿಸಿದ್ದಾರೆ. ಆದರೆ ನಿನ್ನೆ ಪ್ರತಿಭಟನೆ ನಡೆಸಿದ್ದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರುಗಳು”

“ಸರ್ಕಾರಿ ನೌಕರರಾದ ಅಧ್ಯಾಪಕರುಗಳನ್ನು ಬಿಬಿಎಂಪಿ ಆಯುಕ್ತರು ಹೇಗೆ ‘ಕಿಡಿಗೇಡಿಗಳು’ ಎಂದು ಉಲ್ಲೇಖಿಸುತ್ತಾರೆ?. ಈ ರೀತಿಯ ವಾಕ್ಯವನ್ನು ಯಾರು ಬಳಸಿದ್ದಾರೆಯೊ ಅವರನ್ನೆಲ್ಲಾ ಅಮಾನತು ಮಾಡಬೇಕು ಮತ್ತು ಅಕ್ರಮ ದೇವಸ್ಥಾನ ನಿರ್ಮಣವನ್ನು ನಿಲ್ಲಿಸಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ” ಎಂದು ಮನೋಜ್‌ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಘಟನೆ ಏನು? 

ರಸ್ತೆಯೊಂದರ ವಿಸ್ತರಣೆ ನಡೆಯುತ್ತಿರುವುದರಿಂದ ಅಲ್ಲಿದ್ದ ಗಣೇಶ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಅವರಿಗೆ ಬಿಬಿಎಂಪಿ ಕೂಡಾ ಅನುಮತಿ ನೀಡಿತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಅಲ್ಲಿರುವ ದೇವಸ್ಥಾನವನ್ನು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಇರುವ ಬಳಿಯಲ್ಲಿ ಉಪ ಕುಲಪತಿಯ ಅನುಮತಿಯಿಲ್ಲದೆ ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಅದರ ನಿರ್ಮಾಣಕ್ಕೆ ವಿರೋಧ ಮಾಡಿದ್ದರು.

‘‘2000-ಯುಜಿಸಿ ಕಾಯ್ದೆ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಕಟ್ಟಡಗಳಿಗೆ ಅವಕಾಶವಿಲ್ಲ. ಈ ನಿಯಮ ಇದ್ದರು ಕೂಡಾ ಅತಿಕ್ರಮಣ ಮಾಡಿ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ. ಎರಡು ತಿಂಗಳ ಹಿಂದೆಯೆ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ಉಪ ಕುಲಪತಿ ಅದರ ಕಾಮಗಾರಿಯನ್ನು ನಿಲ್ಲಿಸಿದ್ದರು. ಆದರೆ ಇಂದು ಏಕಾಏಕಿ ತೀರ್ಮಾನಗಳನ್ನು ತೆಗೆದುಕೊಂಡು, ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ರಕ್ಷಣೆಯೊಂದಿಗೆ ಕಟ್ಟಡವನ್ನು ಕಟ್ಟುತ್ತಿದ್ದಾರೆ” ಎಂದು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಆಝಾದ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಬಿಬಿಎಂಪಿಯಿಂದ ನಮಗೆ ಆದೇಶ ಬಂದಿದೆ, ಹಾಗಾಗಿ ನಾವು ರಕ್ಷಣೆ ಕೊಡುತ್ತಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಇಲ್ಲಿ ಹೋರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರಿಗೆ ವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ಕಟ್ಟಲು ಅನುಮತಿ ಕೊಟ್ಟವರು ಯಾರು? ಹೇಗೆ ಕೊಟ್ಟಿದ್ದಾರೆ?. ಒಂದು ವೇಳೆ ಇದು ಸರಿಯಾಗಿ ಇತ್ಯರ್ಥವಾಗಿಲ್ಲ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯುತ್ತದೆ” ಎಂದು ಮನೋಜ್ ಎಚ್ಚರಿಸಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ವಿವಿಯ ಹಳೆಯ ಉಪ ಕುಲಪತಿ ವೇಣುಗೋಪಾಲ್ ಅವರು ಈ ಹಿಂದೆಯೆ ದೇವಸ್ಥಾನ ನಿರ್ಮಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಅಧಿಕಾರಿಗಳು ಯಾವುದೆ ದಾಖಲಾತಿಯನ್ನು ತೋರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಚಂದ್ರು ಪೆರಿಯಾರ್‌ ಅವರು, “ಈ ಗಣೇಶ ದೇವಸ್ಥಾನದ ಬಗ್ಗೆ ನಾವು ಹಿಂದೆಯೆ ಆರ್‌ಟಿಐ ಹಾಕಿ ಪ್ರಶ್ನಿಸಿದ್ದೆವು. ಅದರಂತೆ ಈ ದೇವಸ್ಥಾನವನ್ನು ವಿಶ್ವವಿದ್ಯಾಲಯ ಕಟ್ಟಿದ್ದಲ್ಲ. ಅದಕ್ಕೆ ಯಾವ ಅನುದಾನವನ್ನೂ ವಿವಿ ಕೊಡಲ್ಲ. ಅದನ್ನು ಸ್ಥಳೀಯರು ಪ್ರಾರಂಭಿಸಿದ್ದರು. ಕಳೆದ ಹತ್ತಿಪ್ಪತ್ತು ವರ್ಷಗಳಿಂದಲೂ ಅಲ್ಲಿ ಸಂಗ್ರಹವಾಗುವ  ಹಣವನ್ನು ದೇವಸ್ಥಾನದ ಟ್ರಸ್ಟ್‌ನವರೇ ಬಳಕೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ವಿಶ್ವವಿದ್ಯಾಲಯದೊಂದಿಗೆ ಸಾಮರಸ್ಯವನ್ನು ಸಾಧಿಸಿ ಕಟ್ಟಡವನ್ನು ಕಟ್ಟಿ ಎಂದು ಸರ್ಕಾರದ ಆದೇಶದಲ್ಲಿದೆ. ಆದರೆ ವಿಶ್ವವಿದ್ಯಾಲಯದ ಒಳಗಡೆ ಪ್ರವೇಶ ಮಾಡಬೇಕೆಂದರೆ ಈಗಿನ ಉಪ ಕುಲಪತಿಗಳ ಅನುಮತಿ ಪಡೆಯುವುದು ಬೇಡವೆ? ಈ ಹಿಂದಿನ ಉಪ ಕುಲಪತಿ ವೇಣುಗೋಪಾಲ್ ಅವರ ನಂತರ ಬಂದ ಉಪಕುಲಪತಿಗಳು ಈ ಕಾಮಗಾರಿಗೆ ತಡೆ ಒಡ್ಡಿದ್ದರು. ಆದರೂ ಈ ಹಿಂದಿನ ಉಪ ಕುಲಪತಿ ಆದೇಶ ನೀಡಿದ್ದಾರೆ ಎಂದು ಹೇಳಿ ಏಕಾಏಕಿ ಮುನ್ನುಗ್ಗುತ್ತಾರೆ ಎಂದರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಯಾಕೆ? ಉಪ ಕುಲಪತಿ ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಬೆಂಗಳೂರು ವಿಶ್ವವಿದ್ಯಾಲಯದ ಒಳಗೆಯಿದೆ 15 ಕ್ಕೂ ಹೆಚ್ಚು ದೇವಸ್ಥಾನಗಳು

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. “ಇಂದು ಹಿಂದೂಗಳು ಬಂದು ದೇವಸ್ಥಾನ ಕಟ್ಟುತ್ತೇವೆ ಅನ್ನುತ್ತಾರೆ. ನಾಳೆ ದಿನ ಚರ್ಚು ಮತ್ತು ಮಸೀದಿ ಕಟ್ಟುತ್ತೇವೆ ಎಂದು ಎನ್ನುತ್ತಾರೆ. ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....