Homeಮುಖಪುಟನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ. ದೇಶದ ಬಹುದೊಡ್ಡ ಪಾದಾಯಾತ್ರೆಯು ಕಾಂಗ್ರೆಸ್ ಪಕ್ಷಕ್ಕೆ ಸಂಜೀಜಿವಿಯಾಗಿದ್ದು, ನಾವು ಮತ್ತೆ ಪುಟಿದೆದ್ದು ಬರುತ್ತೇವೆ. ಈ ಯಾತ್ರೆಯು ಬಿಜೆಪಿಯನ್ನು ಅಲ್ಲಾಡಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ರವರು ಭಾರತದ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಾದಯಾತ್ರೆ ಆರಂಭಗೊಂಡಿದೆ. 113 ಭಾರತ್ ಯಾತ್ರಿಗಳೊಂದಿಗೆ ಪಾದಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿ ಅನಿತಾರವರ ತಂದೆ ಮತ್ತು ಸಹೋದರನನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.

ಇಂದು ಭಾರತವು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶ ಇಂದು ದುರಂತದತ್ತ ಸಾಗುತ್ತಿದೆ. ಬೆರಳೆಣಿಕೆಯಷ್ಟು ದೊಡ್ಡ ಉದ್ಯಮಿಗಳು ಇಡೀ ದೇಶವನ್ನು ನಿಯಂತ್ರಿಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವನ್ನು ಈಸ್ಟ್ ಇಂಡಿಯಾ ಕಂಪನಿ ನಿಯಂತ್ರಿಸುತ್ತಿತ್ತು. ಇಂದು ಇಡೀ ಭಾರತವನ್ನು 3-4 ದೊಡ್ಡ ಕಂಪನಿಗಳು ನಿಯಂತ್ರಿಸುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಭಾರತದ ತ್ರಿವರ್ಣ ಧ್ವಜ ಪ್ರತಿಯೊಂದು ರಾಜ್ಯ ಮತ್ತು ಭಾಷೆಗೆ ಸೇರಿದೆ. ಆದರೆ ಇಂದು ತ್ರಿವರ್ಣ ಧ್ವಜವು ಧರ್ಮ, ಭಾಷೆಯ ಆಧಾರದ ಮೇಲೆ ಭಾರತವನ್ನು ವಿಭಜಿಸುತ್ತಿರುವ ಬಿಜೆಪಿ ಮತ್ತು ಆ‌ರ್‌ಎಸ್‌ಎಸ್‌ನ ದಾಳಿಗೆ ಒಳಗಾಗುತ್ತಿದೆ. ನಾವು ಆಯ್ಕೆ ಮಾಡಿಕೊಂಡ ಧರ್ಮವನ್ನು ಆಚರಿಸುವಂತೆ ನಮ್ಮತ್ರಿವರ್ಣ ಧ್ವಜ ಹೇಳುತ್ತದೆ. ಆದರೆ ಇಂದು ಹಾಗೆ ಹೇಳುವ ಧ್ವಜ ದಾಳಿಗೆ ಒಳಗಾಗಿದೆ” ಎಂದಿದ್ದಾರೆ.

“ಬಿಜೆಪಿಯವರು ಸಿಬಿಐ, ಇಡಿ ಹಾಗೂ ಐಟಿ ಬಳಸಿ ಪ್ರತಿಪಕ್ಷಗಳನ್ನು ಹೆದರಿಸಬಹುದು ಎಂದು ಭಾವಿಸುತ್ತಾರೆ. ಸಮಸ್ಯೆಯೆಂದರೆ ಅವರು ಭಾರತೀಯರನ್ನು ಅರ್ಥಮಾಡಿಕೊಂಡಿಲ್ಲ. ಒಬ್ಬ ವಿಪಕ್ಷ ನಾಯಕನೂ ಬಿಜೆಪಿಗೆ ಹೆದರುವುದಿಲ್ಲ”ಎಂದು ರಾಹುಲ್ ಗಾಂಧಿ ಹೇಳಿದರು.

ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭವಾಗಿದ್ದು, ಸುಮಾರು 148 ದಿನಗಳ ನಡೆಯಲಿದೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

ಯಾತ್ರೆಯು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಹಿರಿಯ ಚಿಂತಕ, ರಾಜಕೀಯ ತಜ್ಞ, ಸ್ವರಾಜ್ಯ ಇಂಡಿಯಾ ಪಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌, ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌, ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವ, ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...