Homeಮುಖಪುಟನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ. ದೇಶದ ಬಹುದೊಡ್ಡ ಪಾದಾಯಾತ್ರೆಯು ಕಾಂಗ್ರೆಸ್ ಪಕ್ಷಕ್ಕೆ ಸಂಜೀಜಿವಿಯಾಗಿದ್ದು, ನಾವು ಮತ್ತೆ ಪುಟಿದೆದ್ದು ಬರುತ್ತೇವೆ. ಈ ಯಾತ್ರೆಯು ಬಿಜೆಪಿಯನ್ನು ಅಲ್ಲಾಡಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ರವರು ಭಾರತದ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಾದಯಾತ್ರೆ ಆರಂಭಗೊಂಡಿದೆ. 113 ಭಾರತ್ ಯಾತ್ರಿಗಳೊಂದಿಗೆ ಪಾದಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿ ಅನಿತಾರವರ ತಂದೆ ಮತ್ತು ಸಹೋದರನನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.

ಇಂದು ಭಾರತವು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶ ಇಂದು ದುರಂತದತ್ತ ಸಾಗುತ್ತಿದೆ. ಬೆರಳೆಣಿಕೆಯಷ್ಟು ದೊಡ್ಡ ಉದ್ಯಮಿಗಳು ಇಡೀ ದೇಶವನ್ನು ನಿಯಂತ್ರಿಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವನ್ನು ಈಸ್ಟ್ ಇಂಡಿಯಾ ಕಂಪನಿ ನಿಯಂತ್ರಿಸುತ್ತಿತ್ತು. ಇಂದು ಇಡೀ ಭಾರತವನ್ನು 3-4 ದೊಡ್ಡ ಕಂಪನಿಗಳು ನಿಯಂತ್ರಿಸುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಭಾರತದ ತ್ರಿವರ್ಣ ಧ್ವಜ ಪ್ರತಿಯೊಂದು ರಾಜ್ಯ ಮತ್ತು ಭಾಷೆಗೆ ಸೇರಿದೆ. ಆದರೆ ಇಂದು ತ್ರಿವರ್ಣ ಧ್ವಜವು ಧರ್ಮ, ಭಾಷೆಯ ಆಧಾರದ ಮೇಲೆ ಭಾರತವನ್ನು ವಿಭಜಿಸುತ್ತಿರುವ ಬಿಜೆಪಿ ಮತ್ತು ಆ‌ರ್‌ಎಸ್‌ಎಸ್‌ನ ದಾಳಿಗೆ ಒಳಗಾಗುತ್ತಿದೆ. ನಾವು ಆಯ್ಕೆ ಮಾಡಿಕೊಂಡ ಧರ್ಮವನ್ನು ಆಚರಿಸುವಂತೆ ನಮ್ಮತ್ರಿವರ್ಣ ಧ್ವಜ ಹೇಳುತ್ತದೆ. ಆದರೆ ಇಂದು ಹಾಗೆ ಹೇಳುವ ಧ್ವಜ ದಾಳಿಗೆ ಒಳಗಾಗಿದೆ” ಎಂದಿದ್ದಾರೆ.

“ಬಿಜೆಪಿಯವರು ಸಿಬಿಐ, ಇಡಿ ಹಾಗೂ ಐಟಿ ಬಳಸಿ ಪ್ರತಿಪಕ್ಷಗಳನ್ನು ಹೆದರಿಸಬಹುದು ಎಂದು ಭಾವಿಸುತ್ತಾರೆ. ಸಮಸ್ಯೆಯೆಂದರೆ ಅವರು ಭಾರತೀಯರನ್ನು ಅರ್ಥಮಾಡಿಕೊಂಡಿಲ್ಲ. ಒಬ್ಬ ವಿಪಕ್ಷ ನಾಯಕನೂ ಬಿಜೆಪಿಗೆ ಹೆದರುವುದಿಲ್ಲ”ಎಂದು ರಾಹುಲ್ ಗಾಂಧಿ ಹೇಳಿದರು.

ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭವಾಗಿದ್ದು, ಸುಮಾರು 148 ದಿನಗಳ ನಡೆಯಲಿದೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

ಯಾತ್ರೆಯು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಹಿರಿಯ ಚಿಂತಕ, ರಾಜಕೀಯ ತಜ್ಞ, ಸ್ವರಾಜ್ಯ ಇಂಡಿಯಾ ಪಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌, ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌, ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವ, ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...