Homeಮುಖಪುಟಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

ಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

- Advertisement -
- Advertisement -

8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಬುಲ್ ಬುಲ್ ಹಕ್ಕಿಯ ಉತ್ಪ್ರೇಕ್ಷಿತ ಪಠ್ಯ ಸೇರಿಸಿದ್ದಕ್ಕೆ ಬಂದ ವ್ಯಾಪಕ ಟೀಕೆಯ ಕುರಿತು ಲೇಖಕ ಕೆ.ಟಿ ಗಟ್ಟಿಯವರು ಪತ್ನಿ ಯಶೋದಾ ಅಮ್ಮೆಂಬಳರವರು ಪ್ರತಿಕ್ರಿಯಿಸಿದ್ದು, ತಮ್ಮ ಪತಿ ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ವಿವಾದವೇಳುವವರೆಗೆ ನಮಗೆ ಕಾಲವನ್ನು ಗೆದ್ದವರು ಲೇಖನವನ್ನು ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ ಮಾಹಿತಿ ಇರಲಿಲ್ಲ. ಬುಲ್ ಬುಲ್ ಕಲ್ಪನಾ ಚಿತ್ರದ ವಿವಾದದ ಬಗ್ಗೆ ಹೇಳುವುದಾದರೆ, ಅದು ಒಂದು ರೂಪಕವಲ್ಲದೆ ಬೇರೇನೂ ಅಲ್ಲ ಎಂಬುದು ಸ್ಪಷ್ಟ” ಎಂದು ತಿಳಿಸಿದ್ದಾರೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಎಂದು ಬರೆಯಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದರು. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ಹರಿದಾಡುತ್ತಿವೆ.

ಕೆ.ಟಿ.ಗಟ್ಟಿಯವರು, ಅನಾರೋಗ್ಯದ ಕಾರಣ, ಯಾವುದೇ ಸ್ಪಷ್ಟನೆ ನೀಡುವ ಸ್ಥಿತಿಯಲ್ಲಿಲ್ಲ. ಅವರ ಪರವಾಗಿ ನಾನು ಉತ್ತರಿಸುವಂತಿಲ್ಲ; ಸಂಬಂಧಪಟ್ಟ ಕೆಲವು ವಿವರಗಳನ್ನು ಇಲ್ಲಿ ಹಂಚಿಕೊಳ್ಳಬಲ್ಲೆ ಎಂದಿರುವ ಅವರ ಪತ್ನಿ, “ಸಾವರ್ಕರ್ ಬಗೆಗಿನ ಗಟ್ಟಿಯವರ ಈ ಲೇಖನವನ್ನು ಸಾಂದರ್ಭಿಕವಾಗಿ ಪರಿಗಣಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಪ್ರಾಯೋಜಿಸಿದ ಈ ಪ್ರವಾಸದ ಉದ್ದೇಶವು, ಅಂಡಮಾನ್‌ನ ಸಾಮಾಜಿಕ ಜನಜೀವನ ಹಾಗೂ ರಾಜಕೀಯ ಚರಿತ್ರೆಯ ವಿಸ್ತೃತ ನೋಟವನ್ನು ಕಲೆ ಹಾಕುವುದೇ ಆಗಿತ್ತು. ಇದಕ್ಕಾಗಿ ಅವರು ಸ್ಥಳೀಯರನ್ನು ಸಂದರ್ಶಿಸುತ್ತಾ, ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ ಸಮಾರಂಭಗಳಲ್ಲಿ ಹಾಜರಿರುತ್ತಾ, ಪುಸ್ತಕಗಳನ್ನೋದುತ್ತಾ ಸಾಕಷ್ಟು ಸಮಯ ಕಳೆದಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಈ ಕೃತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರರ ಪಾತ್ರದ ಬಗೆಗಾಗಲೀ, ಅವರ ವಿಚಾರಧಾರೆಯ ಬಗೆಗಾಗಲೀ ಯಾವುದೇ ಮಾತು ಇಲ್ಲಿ ಬಂದಿಲ್ಲ. ಗಟ್ಟಿಯವರ ಇನ್ನಾವುದೇ ಬರಹಗಳಲ್ಲಿ ಸಾವರ್ಕರರ ಬಗೆಗೆ ಉಲ್ಲೇಖ ಇಲ್ಲ. ಈ ಲೇಖನದ ಮೂವತ್ತು ಶೇಕಡಾ ಭಾಗ, ಮತ್ತೂರು ಕೃಷ್ಣಮೂರ್ತಿಯವರ “ಸ್ವಾತಂತ್ರ್ಯವೀರ ಸಾವರ್ಕರ್” (1966) ಕೃತಿಯಿಂದ ಉಧ್ಧೃತವಾಗಿದೆ. ಸಾವರ್ಕರರ ಆತ್ಮಚರಿತ್ರೆಯೂ ಆಕರಗ್ರಂಥಗಳ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬುಲ್ ಬುಲ್ ಸವಾರಿಯು ಬಗ್ಗೆ ಬರೆದಿರುವ ವಾಕ್ಯಗಳಲ್ಲಿ, ಮುದ್ರಣ ದೋಷ ಅಥವಾ ಲೇಖಕರ ನಿರ್ಲಕ್ಷ್ಯದಿಂದ, ಸಂದರ್ಭ/ಉಲ್ಲೇಖವು ಬಿಟ್ಟುಹೋಗಿರುವುದು ಎಲ್ಲಾ ರೀತಿಯ ಗೊಂದಲಗಳಿಗೆ ಎಡೆಮಾಡಿದೆ. ಸಾವರ್ಕರರ ಬುಲ್ ಬುಲ್ ಸವಾರಿಯು, ಅವರು ಇತರ ಮೂಲಗಳಿಂದ ಗ್ರಹಿಸಿದ್ದೇ, ಇಲ್ಲಾ ಅವರ ಕಲ್ಪನೆಯೇ ಎಂಬ ಬಗ್ಗೆ ಖಂಡಿತವಾಗಿ ಹೇಳಲಾಗದಿದ್ದರೂ, ಬುಲ್ ಬುಲ್ ಐತಿಹ್ಯವು ಲೇಖಕನ ಸೃಷ್ಟಿಯಲ್ಲ ಎಂಬುದನ್ನು ನಿಸ್ಸಂದೇಹವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.

ಗಟ್ಟಿಯವರ ಸಾಹಿತ್ಯದ ಪರಿಚಯವಿರುವವರಿಗೆ, ಬುಲ್ ಬುಲ್ ರೂಪಕವು ಸಾವರ್ಕರರನ್ನು ವೈಭವೀಕರಿಸುವ ಉದ್ದೇಶದಿಂದ, ಅವರ ವಿಚಾರಧಾರೆಯ ಬಗ್ಗೆ ಅಭಿಮಾನವುಳ್ಳ ಲೇಖಕ ರಚಿಸಿರಬೇಕು ಎಂಬ ಭಾವನೆ ಬರಲಾರದು. ಅವರ ವಿಚಾರಧಾರೆಯ ಪರಿಚಯ ಇರುವವರಿಗೆ ಈ ಬಗ್ಗೆ ಸ್ಪಷ್ಟೀಕರಣ ನೀಡುವ ಅಗತ್ಯವಿರಲಾರದು. ಅವರ ಸಾಹಿತ್ಯದ ಪರಿಚಯ ಇಲ್ಲದವರು, ಅವರ “ನಮ್ಮೊಳಗಿನ ಆಕಾಶ” ಸಂಕಲನದ, “ಧರ್ಮ ಮತ್ತು ವ್ಯಕ್ತಿ ಸ್ವಾತಂತ್ರ್ಯ” ಅಥವಾ ಅವರ ಇತರ ಸಾಹಿತ್ಯ ಕೃತಿಗಳನ್ನು ಓದಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...