Homeಮುಖಪುಟಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

ಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

- Advertisement -
- Advertisement -

8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಬುಲ್ ಬುಲ್ ಹಕ್ಕಿಯ ಉತ್ಪ್ರೇಕ್ಷಿತ ಪಠ್ಯ ಸೇರಿಸಿದ್ದಕ್ಕೆ ಬಂದ ವ್ಯಾಪಕ ಟೀಕೆಯ ಕುರಿತು ಲೇಖಕ ಕೆ.ಟಿ ಗಟ್ಟಿಯವರು ಪತ್ನಿ ಯಶೋದಾ ಅಮ್ಮೆಂಬಳರವರು ಪ್ರತಿಕ್ರಿಯಿಸಿದ್ದು, ತಮ್ಮ ಪತಿ ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ವಿವಾದವೇಳುವವರೆಗೆ ನಮಗೆ ಕಾಲವನ್ನು ಗೆದ್ದವರು ಲೇಖನವನ್ನು ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ ಮಾಹಿತಿ ಇರಲಿಲ್ಲ. ಬುಲ್ ಬುಲ್ ಕಲ್ಪನಾ ಚಿತ್ರದ ವಿವಾದದ ಬಗ್ಗೆ ಹೇಳುವುದಾದರೆ, ಅದು ಒಂದು ರೂಪಕವಲ್ಲದೆ ಬೇರೇನೂ ಅಲ್ಲ ಎಂಬುದು ಸ್ಪಷ್ಟ” ಎಂದು ತಿಳಿಸಿದ್ದಾರೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಎಂದು ಬರೆಯಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದರು. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ಹರಿದಾಡುತ್ತಿವೆ.

ಕೆ.ಟಿ.ಗಟ್ಟಿಯವರು, ಅನಾರೋಗ್ಯದ ಕಾರಣ, ಯಾವುದೇ ಸ್ಪಷ್ಟನೆ ನೀಡುವ ಸ್ಥಿತಿಯಲ್ಲಿಲ್ಲ. ಅವರ ಪರವಾಗಿ ನಾನು ಉತ್ತರಿಸುವಂತಿಲ್ಲ; ಸಂಬಂಧಪಟ್ಟ ಕೆಲವು ವಿವರಗಳನ್ನು ಇಲ್ಲಿ ಹಂಚಿಕೊಳ್ಳಬಲ್ಲೆ ಎಂದಿರುವ ಅವರ ಪತ್ನಿ, “ಸಾವರ್ಕರ್ ಬಗೆಗಿನ ಗಟ್ಟಿಯವರ ಈ ಲೇಖನವನ್ನು ಸಾಂದರ್ಭಿಕವಾಗಿ ಪರಿಗಣಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಪ್ರಾಯೋಜಿಸಿದ ಈ ಪ್ರವಾಸದ ಉದ್ದೇಶವು, ಅಂಡಮಾನ್‌ನ ಸಾಮಾಜಿಕ ಜನಜೀವನ ಹಾಗೂ ರಾಜಕೀಯ ಚರಿತ್ರೆಯ ವಿಸ್ತೃತ ನೋಟವನ್ನು ಕಲೆ ಹಾಕುವುದೇ ಆಗಿತ್ತು. ಇದಕ್ಕಾಗಿ ಅವರು ಸ್ಥಳೀಯರನ್ನು ಸಂದರ್ಶಿಸುತ್ತಾ, ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ ಸಮಾರಂಭಗಳಲ್ಲಿ ಹಾಜರಿರುತ್ತಾ, ಪುಸ್ತಕಗಳನ್ನೋದುತ್ತಾ ಸಾಕಷ್ಟು ಸಮಯ ಕಳೆದಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಈ ಕೃತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರರ ಪಾತ್ರದ ಬಗೆಗಾಗಲೀ, ಅವರ ವಿಚಾರಧಾರೆಯ ಬಗೆಗಾಗಲೀ ಯಾವುದೇ ಮಾತು ಇಲ್ಲಿ ಬಂದಿಲ್ಲ. ಗಟ್ಟಿಯವರ ಇನ್ನಾವುದೇ ಬರಹಗಳಲ್ಲಿ ಸಾವರ್ಕರರ ಬಗೆಗೆ ಉಲ್ಲೇಖ ಇಲ್ಲ. ಈ ಲೇಖನದ ಮೂವತ್ತು ಶೇಕಡಾ ಭಾಗ, ಮತ್ತೂರು ಕೃಷ್ಣಮೂರ್ತಿಯವರ “ಸ್ವಾತಂತ್ರ್ಯವೀರ ಸಾವರ್ಕರ್” (1966) ಕೃತಿಯಿಂದ ಉಧ್ಧೃತವಾಗಿದೆ. ಸಾವರ್ಕರರ ಆತ್ಮಚರಿತ್ರೆಯೂ ಆಕರಗ್ರಂಥಗಳ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬುಲ್ ಬುಲ್ ಸವಾರಿಯು ಬಗ್ಗೆ ಬರೆದಿರುವ ವಾಕ್ಯಗಳಲ್ಲಿ, ಮುದ್ರಣ ದೋಷ ಅಥವಾ ಲೇಖಕರ ನಿರ್ಲಕ್ಷ್ಯದಿಂದ, ಸಂದರ್ಭ/ಉಲ್ಲೇಖವು ಬಿಟ್ಟುಹೋಗಿರುವುದು ಎಲ್ಲಾ ರೀತಿಯ ಗೊಂದಲಗಳಿಗೆ ಎಡೆಮಾಡಿದೆ. ಸಾವರ್ಕರರ ಬುಲ್ ಬುಲ್ ಸವಾರಿಯು, ಅವರು ಇತರ ಮೂಲಗಳಿಂದ ಗ್ರಹಿಸಿದ್ದೇ, ಇಲ್ಲಾ ಅವರ ಕಲ್ಪನೆಯೇ ಎಂಬ ಬಗ್ಗೆ ಖಂಡಿತವಾಗಿ ಹೇಳಲಾಗದಿದ್ದರೂ, ಬುಲ್ ಬುಲ್ ಐತಿಹ್ಯವು ಲೇಖಕನ ಸೃಷ್ಟಿಯಲ್ಲ ಎಂಬುದನ್ನು ನಿಸ್ಸಂದೇಹವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.

ಗಟ್ಟಿಯವರ ಸಾಹಿತ್ಯದ ಪರಿಚಯವಿರುವವರಿಗೆ, ಬುಲ್ ಬುಲ್ ರೂಪಕವು ಸಾವರ್ಕರರನ್ನು ವೈಭವೀಕರಿಸುವ ಉದ್ದೇಶದಿಂದ, ಅವರ ವಿಚಾರಧಾರೆಯ ಬಗ್ಗೆ ಅಭಿಮಾನವುಳ್ಳ ಲೇಖಕ ರಚಿಸಿರಬೇಕು ಎಂಬ ಭಾವನೆ ಬರಲಾರದು. ಅವರ ವಿಚಾರಧಾರೆಯ ಪರಿಚಯ ಇರುವವರಿಗೆ ಈ ಬಗ್ಗೆ ಸ್ಪಷ್ಟೀಕರಣ ನೀಡುವ ಅಗತ್ಯವಿರಲಾರದು. ಅವರ ಸಾಹಿತ್ಯದ ಪರಿಚಯ ಇಲ್ಲದವರು, ಅವರ “ನಮ್ಮೊಳಗಿನ ಆಕಾಶ” ಸಂಕಲನದ, “ಧರ್ಮ ಮತ್ತು ವ್ಯಕ್ತಿ ಸ್ವಾತಂತ್ರ್ಯ” ಅಥವಾ ಅವರ ಇತರ ಸಾಹಿತ್ಯ ಕೃತಿಗಳನ್ನು ಓದಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....