Homeಚಳವಳಿನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

ನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಪದೇ ಪದೇ ಹೇಳಿದರೂ ಅದು ಪಾಲನೆಯಾಗದಿರುವುದು ದುರಂತದ ಸಂಗತಿಯಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಇನ್‌ಫ್ಯಾಂಟ್ರಿ ರಸ್ತೆಯಲ್ಲಿ ಪೌರ ಕಾರ್ಮಿಕರು ಯಾವುದೇ ಸುರಕ್ಷತಾ ವಸ್ತುಗಳನ್ನು ಬಳಸದೆ ಕೈಯಿಂದಲೇ ಶೌಚ ಗುಂಡಿ ಸ್ವಚ್ಛ ಮಾಡಿದ್ದು, ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ವೈಸರ್ ವಿರುದ್ಧ ದೂರು ನೀಡಲಾಗಿದೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ್‌ರವರು ಈ ಘಟನೆಯನ್ನು ಗಮನಿಸಿ ಕಾರ್ಮಿಕರಿಗೆ ಕೆಲಸ ನಿಲ್ಲಿಸಲು ತಿಳಿಸಿದ್ದಾರೆ. ನಿಮ್ಮನ್ನು ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ ವೈಸರ್‌ರವನ್ನು ಕರೆದುಕೊಂಡು ಬನ್ನಿ ಎಂದು ತಿಳಿಸಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಸೂಪರ್‌ ವೈಸರ್ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮುಂದೆ ಜರುಗದಂತೆ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನಿಲ್ಲದ ಕ್ರೂರ ಪದ್ದತಿ

ವಿಜ್ಞಾನ, ನಾಗರಿಕತೆ ಎಷ್ಟೆಲ್ಲಾ ಅಭಿವೃದ್ದಿ ಹೊಂದಿದ್ದರೂ ಕೆಲ ಸಾಮಾಜಿಕ ಅನಿಷ್ಟ ಪದ್ಧತಿಗಳು ಇಂದಿಗೂ ಜಾರಿಯಲ್ಲಿರುವುದು ಇಡೀ ಭಾರತೀಯರು ತಲೆತಗ್ಗಿಸಬೇಕಾದ ವಿಚಾರ. ತಳಸಮುದಾಯದ ಜನರ ಮೇಲೆ ಮೇಲ್ಜಾತಿ, ಮೇಲ್ವರ್ಗದ ಜನರು ಹೇರಿದ ಮಲ ಹೊರುವ, ಮಲ ಬಾಚುವ (ಮ್ಯಾನುವಲ್ ಸ್ಕ್ಯಾವೆಜಿಂಗ್) ಕೆಲಸಗಳು 21ನೇ ಶತಮಾನದಲ್ಲಿಯೂ ಮುಂದುವರೆಯುತ್ತಿದ್ದರೂ ಜಡಗಟ್ಟಿದ ಸಮಾಜಕ್ಕೆ ಏನೇನು ಅನ್ನಿಸುತ್ತಿಲ್ಲ. ಈ ಕುರಿತು ಸಾವಿರಾರು ಚರ್ಚೆಗಳು ನಡೆದರೂ ಫಲಿತಾಂಶ ಮಾತ್ರ ತೀರಾ ಕಡಿಮೆ. ಇದಕ್ಕೆ ಕಾರಣ ಈ ಅನಿಷ್ಠ ಕೆಲಸವನ್ನು ಮಾಡುತ್ತಿರುವವರು ತಳಸಮುದಾಯದವರು. ಅವರ ಬಗ್ಗೆ ಯಾವ ಸರ್ಕಾರಗಳಿಗೂ, ಯಾವ ಪಕ್ಷಗಳಿಗೂ ಕಾಳಜಿಯಿಲ್ಲ ಮಾತ್ರವಲ್ಲ ಅವರಿರುವುದೇ ತಮ್ಮ ಸೇವೆ ಮಾಡುವುದಕ್ಕಾಗಿ ಎಂಬ ಫ್ಯೂಡಲ್ ಮನಸ್ಥಿತಿ. ಅಸಮಾನತೆ, ಅನ್ಯಾಯದ ತಳಹದಿಯ ಮೇಲಿರುವ ಈ ಸಮಾಜ ವ್ಯವಸ್ಥೆ ಇಂತಹ ಅನಿಷ್ಠ ಪದ್ಧತಿಗಳನ್ನು ಪೋಷಿಸುತ್ತಾ ಬರುತ್ತಿವೆ ಎನ್ನುವುದು ಚಾರಿತ್ರಿಕ ಸತ್ಯ.

ಕಳೆದ ಹಲವಾರು ದಶಕಗಳಿಂದ ಮಲಬಾಚುವ ಪದ್ದತಿಯನ್ನು ನಿರ್ಮೂಲನೆ ಮಾಡಬೇಕು, ಸಂಪೂರ್ಣ ಆಧುನಿಕ ಯಾಂತ್ರಿಕೃತ ವ್ಯವಸ್ಥೆ ಜಾರಿಗೊಳಿಸಬೇಕೆಂದು ಸಾವಿರಾರು ಹೋರಾಟಗಳು ನಡೆದಿವೆ. ಆದರೆ ಈ ಪದ್ದತಿ ಮಾತ್ರ ಕೊನೆಗೊಂಡಿಲ್ಲ.

ಕಾನೂನು ಏನು ಹೇಳುತ್ತದೆ?

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಅನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ. ಅದನ್ನು ತಡೆಯುವುದಕ್ಕಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಮೇಸ್ತ್ರಿಗಳು ಪೌರಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಹೇರಲಾಗಿದೆ. ಹಾಗಿದ್ದರೂ ಬಡವರ ಜೀವವನ್ನು ಲೆಕ್ಕಿಸದೆ ದುಷ್ಟ ಅಧಿಕಾರಿಗಳು ಪೌರ ಕಾರ್ಮಿಕರಿಂದ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಮಾಡಿಸಿತ್ತಿರುವುದು ಅಲ್ಲಲ್ಲಿ ವರದಿಯಾಗುತ್ತಲೇ ಇದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ ಅಪಾಯಕಾರಿ ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013 ರ ಕಾನೂನು ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

ಇದುವರೆಗೂ ಸಫಾಯಿ ಕರ್ಮಚಾರಿಗಳಾಗಿದ್ದವರಿಗೆ ಪರ್ಯಾಯ ಪುನರ್‌ವಸತಿ ಕಲ್ಪಿಸುವುದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

2013 ರ ಕಾಯಿದೆ ಮತ್ತು 2013 ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

ಒಂದು ವೇಳೆ ಶಾಸನಬದ್ಧ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಮತ್ತು ಈ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ, ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಮ್ಯಾಜಿಸ್ಟ್ರೇಟರು ಕಾಯಿದೆಯ ಅಡಿಯಲ್ಲಿ ವಿಚಾರಣೆ ನಡೆಸುವ, ಶಿಕ್ಷಿಸುವ ಅಧಿಕಾರವಿದೆ.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40 ಕ್ಕೂ ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಈ ಕೆಲಸಕ್ಕಾಗಿ ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. 2021ರ ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಮುಂದಿನ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿತ್ತು.

ಜಾತಿ ವಿನಾಶವೇ ಪರಿಹಾರ – ಎಸ್ ಬಾಲನ್

ಬೆಂಗಳೂರಿನಲ್ಲಿ ಹತ್ತಾರು ವರ್ಷಗಳಿಂದ ಪೌರಕಾರ್ಮಿಕರನ್ನು ಸಂಘಟಿಸಿ ಹೋರಾಟ ನಡೆಸುತ್ತಿರುವ ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಬಾಲನ್‌ ರವರು ಈ ಕುರಿತು ಹೇಳುವುದು ಹೀಗೆ.. “ಮಲ ಬಾಚುವ ಪದ್ದತಿಯು ಆದಿ ಆಂಧ್ರ, ಅರುಂಧತಿಯಾರ್, ಚಕ್ಲಿಯರ್, ಮಾದಿಗರು ಜಾತಿಗೆ ಸಂಬಂಧಿಸಿದೆ. ಈ ಜಾತಿಗಳು ಮಾತ್ರ ಈ ಕೆಲಸ ಮಾಡುತ್ತಿವೆ. ಬ್ರಿಟೀಷರ ಕಾಲದ ಹಾಗೂ ಈಗಲೂ ಸಹ ಇವರು ಮೋರಿಗಳು ಎಲ್ಲಿವೆಯೋ ಅಲ್ಲಿಯೇ  ವಾಸಿಸುತ್ತಿದ್ದಾರೆ. ಸಂವಿಧಾನದ 17ನೇ ಆರ್ಟಿಕಲ್ ಇದೆ, 1993ರಲ್ಲಿ ಮಲಹೊರುವ ಪದ್ದತಿ ನಿಷೇಧ ಕಾಯ್ದೆ ಬಂತು. ಎಷ್ಟೇ ಕಾನೂನುಗಳು ಬಂದರೂ ಈ ಅನಿಷ್ಠ ಪದ್ದತಿಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ನಿಜವಾಗಿಯೂ ಇದು ಪರಿಹಾರವಾಗಬೇಕಾದರೆ ಜಾತಿ ವ್ಯವಸ್ಥೆ ನಾಶವಾಗಬೇಕು. ಆದರೆ ಇಂದು ಜಾತಿಗಳು ಮತ್ತಷ್ಟು ಸಂಘಟಿತವಾಗುತ್ತಿವೆ. ಹಿಂದೂ ಧರ್ಮ ಜಾತಿಪದ್ದತಿಯನ್ನು ಪೋಷಿಸುತ್ತಿದೆ. ಕಾರ್ಪೋರೇಟ್ ಕಂಪನಿಗಳು, ದೊಡ್ಡ ದೊಡ್ಡ ಮಾಲ್‌ಗಳಲ್ಲಿ ಈ ಜನರನ್ನು ಶೌಚಾಲಯಗಳ ಒಳಗಡೆಯೆ ಬಂಧಿಸಲಾಗಿದೆ. ಹಾಗಾಗಿ ಈ ಕಾನೂನುಗಳನ್ನು ನಾನು ನಂಬುವುದಿಲ್ಲ. ಜಾತಿ ನಾಶವಾಗದೆ ಇದು ನಿರ್ಮೂಲನೆಯಾಗುವುದಿಲ್ಲ. ಮೋದಿಯವರು ಪೌರ ಕಾರ್ಮಿಕರ ಕಾಲು ತೊಳೆದು ನಾಟಕ ಮಾಡುತ್ತಾರೆ ಆದರೆ ಪೌರ ಕಾರ್ಮಿಕರ ನೌಕರಿಯನ್ನು ಕಾಯಂ ಮಾಡುವುದಿಲ್ಲ ಏಕೆ” ಎಂದು ಬಾಲನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಮಲ ಬಳಿಸುವ ಕ್ರೌರ್ಯಕ್ಕೆ ಕೊನೆಯೆಂದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...