Homeಕರ್ನಾಟಕಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

ಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

- Advertisement -
- Advertisement -

ವಿಧಾನಸೌಧದಲ್ಲಿ ರಂಪಾಟ, ಕೊಳಕು ರಾಜಕಾರಣದ ಮೇಲಾಟ
ರಾಜಕಾರಣಿಗಳ ನಡೆನುಡಿಗಳು ಪ್ರಜಾಪ್ರಭುತ್ವದ ಒಳಚರಂಡಿಗಳಿದ್ದಂತೆ ಎಂದು ಖ್ಯಾತ ಪತ್ರಕರ್ತ ಪಿ. ಲಂಕೇಶ್ ರವರು ಹೇಳಿದ್ದರು. ಇವತ್ತು ಈ ಚರಂಡಿ ನೀರು ವಿಧಾನಸೌಧದ ಕಾರಿಡಾರಿನಲ್ಲೇ ಹರಿದಿದೆ. ಅದು ಇಷ್ಟು ದಿನ ಇರಲಿಲ್ಲ ಎಂದಲ್ಲ, ಕಳೆದ ಒಂದು ವರ್ಷದಿಂದ ಕೊಳಚೆ ಪ್ರಜಾಪ್ರಭುತ್ವವನ್ನು ಮಲೀನಗೊಳಿಸುತ್ತಲೇ ಇದೆ.

ಈಗ ಮತ್ತಿಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರ ಶಾಸಕ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ ಸುಧಾಕರ್ ಸ್ಪೀಕರ್ ರಮೇಶಕುಮಾರ್ ಅವರ ಕೈಗೇ ರಾಜೀನಾಮೆ ಸಲ್ಲಿಸಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳಕರ್ ಮತ್ತು ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ಸಲ್ಲಿಸುವ ಸಾಧ್ಯೆ ಇದೆ. ಮೈತ್ರಿಬಣದ ಸಂಖ್ಯೆ ಈಗ 100ರ ಕೆಳಕ್ಕೆ ಇಳಿದು ಎರಡಂಕಿ ತಲುಪುತ್ತಿದೆ.

ಅಧಿಕಾರದ ಹಪಾಹಪಿ ಈಗ ಅಧಃಪತನದ ರಾಜಕಾರಣದ ಆಯಾಮ ಪಡೆದುಕೊಂಡಿದೆ. ಅಲ್ಲಿ ಮುಂಬೈಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಸಚಿವರೊಬ್ಬರನ್ನು ಹೀನಾಯವಾಗಿ ನಡೆಸಿಕೊಂಡರೆ, ಇಲ್ಲಿ ವಿಧಾನೌಧದ ಕಾರಿಡಾರಿನಲ್ಲಿ ರಾಜೀನಾಮೆ ಕೊಟ್ಟು ಹೊರಬಂದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತು ಸಚಿವ ಪ್ರಿಯಾಂಕ ಗಾಂಧಿ ಅವರು ವಿಧಾನಸೌಧದ ಕಾರಿಡಾರಿನಲ್ಲೇ ಬಲವಂತದಿಂದ ಕರೆದುಕೊಂಡು ಹೋಗುತ್ತಿರುವ ದೃಶ್ಯವನ್ನು ರಾಜ್ಯದ ಜನತೆ ನೋಡಬೇಕಾಗಿತು. ಅಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಹಾಲಿ ಸಚಿವ ಹಾಲಿ ಸಚಿವ ಯು. ಟಿ. ಖಾದರ್ ಮುಖಾಮುಖಿಯಾದಾಗಲಂತೂ ಬೀದಿರಂಪವೇ ನಡೆಯಿತು.

ಇದು ರಾಜ್ಯ ರಾಜಕೀಯ ಮುಟ್ಟಿರುವ ಅಧಃಪತನ, ಅಸಹ್ಯದ ಸಂಕೇತ ಮಾತ್ರ. ಎಲ್ಲಾ ಮೂರೂ ಪಕ್ಷಗಳು ಅಧಿಕಾರದ ಹಪಾಹಪಿಗೆ ಬಿದ್ದಿದ್ದರ ಪರಿಣಾಮವಿದು. ಸುಧಾಕರ್ ಅವರನ್ನು ಬಲವಂತದಿಂದ ಕರೆದುಕೊಂಡು ಹೋಗುವ ಅತಿರೇಕದ ಘಟನೆ ಇಟ್ಟುಕೊಂಡು ಮಾಧ್ಯಮಗಳು ‘ಛೇ, ಛೇ, ಇದೆಂತಹ ನಾಚಿಕೆಗೇಡು ಎಂದೆಲ್ಲ ಅರಚುತ್ತಿವೆ. ಹೌದು ಇದು ನಾಚಿಕೆಗೇಡೇ.

ಆದರೆ 2018ರಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ಕೂಡಲೇ ಈ ಮಾನಗೇಡಿ ರಾಜಕಾರಣದ ಉದ್ಘಾಟನೆಯಾಗಿತ್ತು. ಆಗ ಬಿಜೆಪಿ ಕೇಂದ್ರ ಸರ್ಕಾರದ ಪರೋಕ್ಷ ನೆರವಿನಿಂದ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಲು ನಡೆಸಿದ ಅಪ್ರಜಾತಾಂತ್ರಿಕ ನಡೆ ಈ ಮಾಧ್ಯಮಗಳಿಗೆ ಅಸಹ್ಯವಾಗಿ ಕಂಡಿರಲೇ ಇಲ್ಲ. ಅದರ ಬದಲು ಅವು ಜನಾದೇಶದ ಪ್ರಕಾರ ಬಿಜೆಪಿಯೇ ಸರ್ಕಾರ ಮಾಡಬೇಕೆ ಎಂಬ ವಾದವನ್ನು ಸಮರ್ಥಿಸಿಕೊಳ್ಳುವ, ಕೇವಲ 104 ಸದಸ್ಯರ ಬಲವಿದ್ದ ಬಿಜೆಪಿ ಕುದುರೆ ವ್ಯಾಪಾರ ಮಾಡಿ ಬಹುಮತ ಸಾಬೀತು ಮಾಡುವುದೇ ನ್ಯಾಯಯುತ ಎಂಬಂತೆ ವರ್ತಿಸಿದ್ದವು.

ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಖುದ್ದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಬಹಿರಂಗವಾಗಿ, ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ನಡೆಯಲು ನಾವು ಬಿಡುವುದಿಲ್ಲ’ ಎಂದು ಯಾವುದೇ ಲಜ್ಜೆ ಇಲ್ಲದೇ ಪ್ರಜಾಪ್ರಭುತ್ವವನ್ನು ಅವಮಾನಿಸಿದಾಗ ಇದೇ ಮಾಧ್ಯಮಗಳು ಅದರ ಬಗ್ಗೆ ಚಕಾರ ಎತ್ತಿರಲಿಲ್ಲ. ರೆಸಾರ್ಟ್ ರಾಜಕಾರಣವನ್ನು ಈ ಮಾಧ್ಯಮಗಳು ವೈಭವೀಕರಿಸಿದವೇ ಹೊರತು ಅವು ಜನತೆಗೆ ಬಗೆದ ದ್ರೋಹ ಎಂದು ಜನರ ಮುಂದೆ ಇಡಲೇ ಇಲ್ಲ.

ಹೀಗಾಗಿ ಇವತ್ತು ಕರ್ನಾಟಕ ರಾಜ್ಯ ರಾಜಕಾರಣ ಗಟಾರ ತಲುಪಿರುವುದಕ್ಕೆ ಮೂರೂ ಪಕ್ಷಗಳಷ್ಟೇ ಕಾರಣವಲ್ಲ, ಈ ಮಾಧ್ಯಮಗಳಿಗೂ ಅದರಲ್ಲಿ ಸಮಪಾಲು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...