Homeಮುಖಪುಟಕಡೆಗೂ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಕಡೆಗೂ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ನೀಡುವುದಾಗಿ ತಿಳಿಸಿದೆ.

ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದಿರುವ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರು ಸುಪ್ರೀಂ ಕೋರ್ಟ್ ಸಿದ್ದಿಕ್ ಕಪ್ಪನ್‌ರವರಿಗೆ ಜಾಮೀನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ವಾದಿಸಿದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬು ಷರತ್ತು ವಿಧಿಸಲಾಗಿದೆ.

2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020 ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಅಸಾಮರಸ್ಯ ಹರಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್  ಜಾಮೀನು ನೀಡಿತ್ತು.

ಇದನ್ನೂ ಓದಿ: 2015ರ ಸಮಯಕ್ಕೆ ಆತ್ಮೀಯರಾಗಿದ್ದವರ ದನಿ ಬದಲಾಗಿದ್ದನ್ನು ಗಮನಿಸಿದೆ; ಮೊಹಮ್ಮದ್ ಝುಬೇರ್ ಸಂದರ್ಶನ ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ತಪ್ಪನ್ನೂ ಮಾಡದ ಸಿದ್ದಿಕ್ ಕಪ್ಪನ್ ಎರಡು ವರ್ಷ ಜೈಲು ಶಿಕ್ಷೆ ಅನುಬವಿಸಿದರು. ಇವರಿಗೆ ಜಾಮೀನು ದೊರಕಿದ್ದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...