Homeಕರ್ನಾಟಕಶಿವಮೊಗ್ಗ: ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ ಹಾರಿಸಿದ ದುಷ್ಕರ್ಮಿಗಳು

ಶಿವಮೊಗ್ಗ: ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ ಹಾರಿಸಿದ ದುಷ್ಕರ್ಮಿಗಳು

ಇನ್ನೂ ಪ್ರಕರಣದ ದಾಖಲಿಸದ ಪೊಲೀಸರು, ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ

- Advertisement -
- Advertisement -

ರಾಷ್ಟ್ರ ಲಾಂಛನವಾದ ಅಶೋಕ ಸ್ಥಂಭದ ಮೇಲೆ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಿಸಿರುವ ಘಟನೆ ಶಿವಮೊಗ್ಗದ ಅಶೋಕ ನಗರದಲ್ಲಿ ನಡೆದಿದೆ. ಧ್ವಜವನ್ನು ವಶಪಡಿಸಿಕೊಂಡಿದ್ದಾಗಿ ನಾನುಗೌರಿ.ಕಾಂಗೆ ಪೊಲೀಸರು ಹೇಳಿದ್ದಾರೆ. ಈವರೆಗೆ ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ಹೇಳಿದ್ದು, ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಗಣೇಶ ಚತುರ್ಥಿ ಮೆರವಣಿಗೆಯ ಅಂಗವಾಗಿ ಬಿಜೆಪಿ ಬೆಂಬಲಿತ ಸಂಘಟನೆಗಳು ಶಿವಮೊಗ್ಗದಾದ್ಯಂತ ಕೇಸರಿ ಧ್ವಜಗಳು, ಗಾಂಧಿ ಕೊಲೆ ಆರೋಪಿ ವಿ.ಡಿ. ಸಾವರ್ಕರ್‌ ಮತ್ತು ಈ ಹಿಂದೆ ಹತ್ಯೆಗೀಡಾಗಿದ್ದ ರೌಡಿ ಶೀಟರ್‌ ಹಾಗೂ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದ ಕಾರ್ಯಕರ್ತ ಹರ್ಷ ಅವರ ಫ್ಲೆಕ್ಸ್‌-ಬ್ಯಾನರ್‌ಗಳನ್ನು ಕೂಡಾ ಹಾಕಲಾಗಿತ್ತು. ಇದೇ ವೇಳೆ ದುಷ್ಕರ್ಮಿಗಳು ರಾಷ್ಟ್ರ ಲಾಂಛನದ ಮೇಲೆ ಕೂಡಾ ಕೇಸರಿ ಧ್ವಜವನ್ನು ಕಟ್ಟಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಮೊಗ್ಗದಲ್ಲಿ ಇತ್ತಿಚೆಗಷ್ಟೆ ಬ್ಯಾನರ್‌ ವಿಚಾರವಾಗಿ ಚಾಕು ಇರಿತ ಘಟನೆ ನಡೆದಿತ್ತು. ಸರಣಿ ಕೋಮು ದುರ್ಘಟನೆಗಳಿಂದ ನಗರವೂ ಕೋಮು ಸೂಕ್ಷ್ಮ ಪ್ರದೇಶವಾಗಿ ಮಾರ್ಪಟ್ಟಿದೆ. ಗಣೇಶ ಚತುರ್ಥಿಯನ್ನು ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಸ್ಥಾಪಿಸಿದ್ದ ಪಕ್ಷವಾದ HMS ಪ್ರತಿಷ್ಠಾಪಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದು, ಕಟ್ಟೆಚ್ಚರ ವಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿವಮೊಗ್ಗ ಗ್ರಾಮಾಂತರ: ಅಭಿವೃದ್ಧಿ ಮರೀಚಿಕೆಯಾದ ಮೀಸಲು ಕ್ಷೇತ್ರದಲ್ಲಿ ಮೇಲ್ವರ್ಗದ ಜಾತಿಪ್ರತಿಷ್ಠೆ!

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಿವಮೊಗ್ಗೆ ಡಿಎಸ್‌ಪಿ ಬಾಲರಾಜ್,“ಧ್ವಜವನ್ನು ವಿಡಿಯೊಗ್ರಾಫ್ ಮಾಡಿ ಕಾರ್ಪೋರೇಷನ್ ಕಡೆಯಿಂದ ತೆಗೆಸಿ ಅವನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಯಾರಾದರೂ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸುತ್ತೇವೆ. ಇದೀಗ ಕಾನೂನು ತಜ್ಞರ ಸಹಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು ಸಂಘಟಿಸಿದವರ ವಿರುದ್ಧ ಕ್ರಮಕೈಗೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅದನ್ನು ಯಾರು ಹಾಕಿದ್ದಾರೆ ಎಂದು ಇನ್ನೂ ಗೊತ್ತಿಲ್ಲ. ಅಲ್ಲಿನ ಸಿಸಿ ಕ್ಯಾಮರಾ ಎಲ್ಲವನ್ನೂ ಪರಿಶೀಲಿಸಬೇಕು” ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಈ ಹಿಂದೆ ಶಿವಮೊಗ್ಗದ ಬಿಜೆಪಿ ಶಾಸಕ, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಕೆಂಪು ಕೋಟೆಯಲ್ಲಿ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಡಿ.ಎಸ್‌. ಪಿ. ಬಾಲರಾಜ್ ತಲೆಯಲ್ಲಿ ಮನುವಾದ ತುಂಬಿರುವಂತಿದೆ. ಅವಮಾನ ಆಗಿರುವುದು ರಾಷ್ಟ್ರಲಾಂಚನಕ್ಕೆ. ಯಾರೂ ದೂರು ಕೊಡದಿದ್ದರೂ, ಸ್ವಯಂ ಪ್ರೇರಿತ ದೂರನ್ನು ದಾಕಲಿಸಬೇಕು. ಇಲ್ಲದಿದ್ದರೆ ಈ ಬಾಲರಾಜ್ ವಿರುದ್ಧವೂ ಕರ್ತವ್ಯಲೋಪದ ದೂರನ್ನು ದಾಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...