Homeಮುಖಪುಟಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್‌ ಧರ್ಮ ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದೆ, ಇಸ್ಲಾಂನಂತೆ ಅಲ್ಲ: ಸುಪ್ರಿಂಕೋರ್ಟ್

ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಅದು ಹೇಳಿದೆ

- Advertisement -
- Advertisement -

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠವು ಸಿಖ್ ಧರ್ಮದ ಆಚರಣೆಗಳನ್ನು ಇಸ್ಲಾಂನ ಆಚರಣೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದ್ದು, ಸಿಖ್ ಧರ್ಮದ ಆಚರಣೆಗಳು ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದ್ದು, ಅದು ಇಸ್ಲಾಂ ಧರ್ಮದಂತೆ ಅಲ್ಲ ಎಂದು ಹೇಳಿದೆ.

ಹಿಜಾಬ್ ನಿಷೇಧವನ್ನು ವಿರೋಧಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸಿದ ವಕೀಲ ನಿಜಾಮ್ ಪಾಷಾ, ಸಿಖ್ಖರಿಗೆ ಪೇಟವನ್ನು ಧರಿಸುವುದಕ್ಕೆ ನೀಡಿದ ರಕ್ಷಣೆಯನ್ನು ಹಿಜಾಬ್‌‌ಗೆ ಕೂಡಾ ಅತ್ಯುತ್ತಮ ಸಾಂಸ್ಕೃತಿಕ ಅಚರಣೆಯಾಗಿ ನೀಡಬೇಕು ಎಂದು ವಾದಿಸಿದ್ದಾರೆ. ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಹಿಜಾಬ್‌ಗೆ ಸಿಖ್ ಧರ್ಮದ ಆಚರಣೆಗಳನ್ನು ಹೋಲಿಸುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐದು ‘ಕೆ’ಗಳು ಸಿಖ್‌ ಧರ್ಮದ ಭಾಗವೆಂದು ಈಗಾಗಲೆ ಸ್ಥಾಪಿತವಾಗಿವೆ ಎಂದು ಪೀಠವು ಹೇಳಿದೆ. “ಈ ಆಚರಣೆಗಳನ್ನು ಹಿಜಾಬ್‌ಗೆ ಹೋಲಿಸಬೇಡಿ ಏಕೆಂದರೆ ಅವುಗಳು 100 ವರ್ಷಗಳಿಂದ ಗುರುತಿಸಲ್ಪಟ್ಟಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಕಾರಾ ಮತ್ತು ಪೇಟದ ಬಗ್ಗೆ ವಾದಗಳು ಮುಂದುವರಿದಿರುವುದನ್ನು ಗಮನಿಸಿದ ಪೀಠ, ಸಿಖ್ ಧರ್ಮದಲ್ಲಿನ ಆಚರಣೆಗಳು ದೇಶದ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದೆ. ಕರ್ನಾಟಕ ಹೈಕೋರ್ಟ್ ಪವಿತ್ರ ಕುರಾನ್‌ನ ಕೆಲವು ಶ್ಲೋಕಗಳು ಮತ್ತು ಕೆಲವು ವ್ಯಾಖ್ಯಾನಗಳನ್ನು ಉಲ್ಲೇಖಿಸಿದೆ ಎಂದು ವಾದದ ಸಮಯದಲ್ಲಿ ಪಾಷಾ ಹೇಳಿದ್ದಾರೆ. ಪವಿತ್ರ ಕುರಾನ್ ಎಲ್ಲಾ ಕಾಲಕ್ಕೂ ಪರಿಪೂರ್ಣವಾಗಿದ್ದು, ಅದರ ಶ್ಲೋಕಗಳು ಬಳಕೆಯಲ್ಲಿಲ್ಲ ಎಂದು ಹೇಳುವುದು ‘ದೇವನಿಂದೆ’ಯಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬಂದರೆ ಬೇರೆಯವರಿಗೆ ತೊಂದರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೇಳಿದೆ. ಆದರೆ ಈ ಕಾರಣಕ್ಕೆ ಅದನ್ನು ನಿಷೇಧ ಸಾಧ್ಯವಿಲ್ಲ ಎಂದು ಪೀಠಕ್ಕೆ ತಿಳಿಸಿದರು. “ಆರ್ಟಿಕಲ್ 25 ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಎಂಬ ಮೂರು ನಿರ್ಬಂಧಗಳನ್ನು ಹೊಂದಿದೆ. ತಲೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಒಂದು ಭಾಗವಾಗಿದ್ದು ಅದು ಸಂವಿಧಾನದ ಆರ್ಟಿಕಲ್‌ 19 ಮತ್ತು 21 ರ ಭಾಗವಾಗಿದೆ” ಎಂದು ಕಾಮತ್ ಪ್ರತಿಪಾದಿಸಿದರು.

ಪ್ರತಿಯೊಂದು ಧಾರ್ಮಿಕ ಆಚರಣೆಗಳು ಧರ್ಮಕ್ಕೆ ಅತ್ಯಗತ್ಯವಲ್ಲ, ಆದರೆ ಅದು ಅನಿವಾರ್ಯವಲ್ಲ ಎಂಬ ಕಾರಣ ನೀಡಿ ಸರ್ಕಾರ ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ನಾನು ಎಲ್ಲಿಯವರೆಗೆ ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸುವುದಿಲ್ಲವೋ, ಎಲ್ಲಿಯವರೆಗೆ ನಾನು ನೈತಿಕತೆಯ ಎಲ್ಲೆ ಮೀರುವುದಿಲವೊ ಮತ್ತು ಎಲ್ಲಿವರೆಗೆ ಇತರರ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲವೊ ಅಲ್ಲಿವರೆಗೆ ನಾನು ಧಾರ್ಮಿಕ ಆಚರಣೆ ಮಾಡಲು ಅರ್ಹನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಣೆ ಮುಂದೂಡಲು ಒಪ್ಪದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹಿರಿಯ ವಕೀಲರೊಬ್ಬರು ಧರಿಸುವ ‘ನಾಮ’ವನ್ನು ಉದಾಹರಣೆ ನೀಡಿದ ಕಾಮತ್, “ಇದು ಹಿಂದೂ ನಂಬಿಕೆಯ ಧರ್ಮದ ಅವಿಭಾಜ್ಯ ಅಂಗವಾಗಿಲ್ಲ. ಆದರೆ ಇದು ನ್ಯಾಯಾಲಯದಲ್ಲಿ ಶಿಸ್ತಿಗೆ ಹೇಗೆ ಹಾನಿ ಮಾಡುತ್ತದೆ? ಇದು ಸಾರ್ವಜನಿಕ ಸುವ್ಯವಸ್ಥೆಗೆ ಹೇಗೆ ಧಕ್ಕೆ ತರುತ್ತದೆಯೇ?” ಎಂದು ಕೇಳಿದರು.

ಈ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ವಕೀಲರಿಗೆ ನಿರ್ದಿಷ್ಟ ಸಮವಸ್ತ್ರವಿದೆ ಎಂದು ಪೀಠವು ಹೇಳಿತು. ಹವಾಮಾನ ವೈಪರೀತ್ಯದ ಕಾರಣದಿಂದ ರಾಜಸ್ಥಾನ ಮತ್ತು ಗುಜರಾತಿನ ಜನರು ಪೇಟ(ಪಗ್ಡಿ)ವನ್ನು ವಾಡಿಕೆಯಂತೆ ಧರಿಸುತ್ತಾರೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆ ಕುರಿತ ವಾದಗಳ ಕುರಿತು ಮಾತನಾಡಿದ ಪೀಠವು, “ರಸ್ತೆಯಲ್ಲಿ ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ ನೀವು ಶಾಲೆಯ ಕಟ್ಟಡ, ಶಾಲಾ ಆವರಣದ ಬಗ್ಗೆ ಮಾತನಾಡುತ್ತಿದ್ದರೆ, ಶಾಲೆಯು ಅಲ್ಲಿ ಯಾವ ರೀತಿಯ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂಬುದು ಪ್ರಶ್ನೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಸಾರ್ವಜನಿಕ ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿಯಾಗಿದೆ, ಆದರೆ ಶಾಲೆಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಮತ್ ವಾದಿಸಿದ್ದಾರೆ. “ಕಲಂ 25ರ ಪ್ರಕಾರ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಕರ್ತವ್ಯ. ನಾನು ತಲೆಗೆ ಸ್ಕಾರ್ಫ್ ಧರಿಸುವುದರಿಂದ ಯಾರದ್ದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆಯೆ?” ಅವರು ಹೇಳಿದ್ದಾರೆ.

ಇದು ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಪ್ರಶ್ನೆಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. “ನೀವು ಯಾವ ರೀತಿಯ ಮೂಲಭೂತ ಹಕ್ಕನ್ನು ನೀವು ಚಲಾಯಿಸಲು ಬಯಸುತ್ತೀರಿ ಎಂಬ ಪ್ರಶ್ನೆಯಾಗಿದೆ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಸ್ಸಂಶಯವಾಗಿ ಇದೊಂದು ಪೂರ್ವಾಗ್ರಹ ಪೀಡಿತ ಧೋರಣೆ. ಭಾರತದಲ್ಲಿ ಉದಯಿಸದ ಧರ್ಮಗಳನ್ನು ಭಾರತೀಯರು ಪಾಲಿಸುವ ಹಕ್ಕಿದೆಯೆಂದಾದರೆ ಧಾರ್ಮಿಕ ಆಚರಣೆಗಳೂ ಸರ್ವರ ಧರ್ಮದವರಿಗೂ ಸಮಾನವಾಗಿರಬೇಕು.ಸಿಖ್,ಹಿಂದೂ,ಇಸ್ಲಾಂ ಧರ್ಮದವರಿಗೂ ತಮ್ಮ ಧಾರ್ಮಿಕಾಚರಣೆಯ ಸಮಾನ ಹಕ್ಕುಗಳನ್ನು ಅಮೇರಿಕಾ, ಕೆನಡಾ, ಬ್ರಿಟನ್ ಮೊದಲಾದ ದೇಶಗಳು ಕೊಟ್ಟಿವೆ. ಸಾಂವಿಧಾನಿಕ ಹಕ್ಕುಗಳ ಸರಿಯಾದ ವಿಶ್ಲೇಷಣೆ ಮಾಡಿ ನ್ಯಾಯ ಒದಗಿಸುವುದು ಸುಪ್ರೀಂ ಕೋರ್ಟ್ ಕಟ್ಟಡವಲ್ಲ, ನಮ್ಮ ನಿಮ್ಮಂತಿರುವ ಹುಲು ಮಾನವರು. ಅವರೂ ಪೂರ್ವಾಗ್ರಹತೆಗಳನ್ನು ಹೊಂದಿರುತ್ತಾರೆ,ಭ್ರಷ್ಟರೂ ಆಗಿರುತ್ತಾರೆ ಎಂಬುದನ್ನು ಕಳೆದ ಎರಡು ದಶಕಗಳ ತೀರ್ಪಗಳು ಸಾಬೀತು ಪಡಿಸಿವೆ.

  2. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸಂಸ್ಕೃತಿ ಯನ್ನು ಮಾತ್ರ ಎತ್ತಿ ಹಿಡಿದರೆ ಕೋರ್ಟ್ ಗೇನು ಬೆಲೆ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...