Homeಕರ್ನಾಟಕಶಿವಮೊಗ್ಗ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ, ಸಾವರ್ಕರ್‌ ಫೋಟೋ ಪ್ರತ್ಯಕ್ಷ!

ಶಿವಮೊಗ್ಗ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ, ಸಾವರ್ಕರ್‌ ಫೋಟೋ ಪ್ರತ್ಯಕ್ಷ!

- Advertisement -
- Advertisement -

ಶಿವಮೊಗ್ಗದ ಹಿಂದೂ ಮಹಾಸಭಾದಿಂದ ನಡೆದ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ ಹಾಗೂ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದ ವಿ.ಡಿ.ಸಾವರ್ಕರ್‌ ಫೋಟೋವನ್ನು ಪ್ರದರ್ಶಿಸಲಾಗಿದೆ.

ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೇಳೆ ಶುಕ್ರವಾರ ಈ ಫೋಟೋಗಳನ್ನು ಪ್ರದರ್ಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್‌ಚಂದ್ರ ಬೋಸ್, ಭಗತ್‌ಸಿಂಗ್ ಜೊತೆಗೆ ಶಿವಮೊಗ್ಗದಲ್ಲಿ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ, ವಿ.ಡಿ.ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಗಣಪತಿಯ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಅಮೀರ್‌ಅಹಮದ್ ವೃತ್ತದಲ್ಲಿ ವೀರಸಾವರ್ಕರ್ ಹೆಸರಿನಲ್ಲಿ ಬೃಹತ್ ಮಹಾದ್ವಾರ ನಿರ್ಮಿಸಲಾಗಿತ್ತು. ವಿಶೇಷವೆಂದರೆ ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.

ಮೆರವಣಿಗೆಯಲ್ಲಿ ಸಾಗಿ ಬಂದ ಗಣಪತಿ ಮೂರ್ತಿ ಹಿಂಭಾಗದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಅಮೀರ್ ಅಹಮದ್ ವೃತ್ತ ಹಾಗೂ ಬಸ್ ನಿಲ್ದಾಣದ ಎದುರು ಅಶೋಕ ಲಾಂಛನದ ಮೇಲೆ ಕೇಸರಿ ಧ್ವಜಗಳು ಹಾರಾಡಿದವು.

ಮೆರವಣಿಗೆಯಲ್ಲಿ ಡಿಜೆ ಹಾಕಲು ಜಿಲ್ಲಾಡಳಿತ ಮೊದಲು ಅವಕಾಶ ನಿರಾಕರಿಸಿತ್ತು. ನಂತರ ಸಂಘಟಕರ ಒತ್ತಡಕ್ಕೆ ಮಣಿದು ಗೋಪಿ ವೃತ್ತದಲ್ಲಿ ಡಿಜೆಗೆ ಅವಕಾಶ ಕಲ್ಪಿಸಲಾಗಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ಹುರಿದುಂಬಿಸಿದ್ದಾರೆ.

ರಾಷ್ಟ್ರಲಾಂಛನದ ಮೇಲೆ ಕೇಸರಿಧ್ವಜ

ರಾಷ್ಟ್ರ ಲಾಂಛನವಾದ ಅಶೋಕ ಸ್ಥಂಭದ ಮೇಲೆ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಿಸಿರುವ ಘಟನೆ ಶಿವಮೊಗ್ಗದ ಅಶೋಕ ನಗರದಲ್ಲಿ ನಡೆದಿದೆ. ಧ್ವಜವನ್ನು ವಶಪಡಿಸಿಕೊಂಡಿದ್ದಾಗಿ ನಾನುಗೌರಿ.ಕಾಂಗೆ ಪೊಲೀಸರು ತಿಳಿಸಿದ್ದಾರೆ.

ಈವರೆಗೆ ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ಹೇಳಿದ್ದು, ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಗಣೇಶ ಚತುರ್ಥಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ರಾಷ್ಟ್ರ ಲಾಂಛನದ ಮೇಲೆ ಕೂಡಾ ಕೇಸರಿ ಧ್ವಜವನ್ನು ಕಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಿವಮೊಗ್ಗೆ ಡಿಎಸ್‌ಪಿ ಬಾಲರಾಜ್,“ಧ್ವಜವನ್ನು ವಿಡಿಯೊಗ್ರಾಫ್ ಮಾಡಿ ಕಾರ್ಪೋರೇಷನ್ ಕಡೆಯಿಂದ ತೆಗೆಸಿ ಅವನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಯಾರಾದರೂ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸುತ್ತೇವೆ. ಇದೀಗ ಕಾನೂನು ತಜ್ಞರ ಸಹಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...