Homeಮುಖಪುಟರಾಣಿ ಎಲಿಜಬೆತ್‌ ನಿಧನ: ಭಾನುವಾರ ದೇಶಾದ್ಯಂತ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ರಾಣಿ ಎಲಿಜಬೆತ್‌ ನಿಧನ: ಭಾನುವಾರ ದೇಶಾದ್ಯಂತ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

- Advertisement -
- Advertisement -

ಇಂಗ್ಲೇಂಡ್ ರಾಣಿ 2ನೇ ಎಲಿಜಬೆತ್ ಅವರ ನಿಧನದ ಹಿನ್ನಲೆಯಲ್ಲಿ ಅವರ “ಗೌರವದ ಸಂಕೇತವಾಗಿ” ಸೆಪ್ಟೆಂಬರ್ 11 ರಂದು ದೇಶದಾದ್ಯಂತ ಶೋಕಾಚರಣೆ ಮಾಡುವುದಾಗಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಘೋಷಿಸಿದೆ. ಇಷ್ಟೆ ಅಲ್ಲದೆ, ರಾಷ್ಟ್ರಧ್ವಜವನ್ನು ದೇಶದಾದ್ಯಂತ ಅರ್ಧಕ್ಕೆ ಹಾರಿಸಲಾಗುತ್ತದೆ ಎಂದು ಸರ್ಕಾರ ಹೇಳಿದ್ದು, ಭಾನುವಾರದಂದು ಯಾವುದೇ ಅಧೀಕೃತ ಮನರಂಜನೆ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿಸಿದೆ.

ಸರ್ಕಾರ ಈ ನಿರ್ಧಾರವನ್ನು ಹಲವಾರು ಸಾಮಾಜಿಕ ಕಾರ್ಯಕರ್ತರು ಟೀಕಿಸಿದ್ದಾರೆ. “ಬ್ರಿಟೀಷ್ ಗುಲಾಮಗಿರಿಯ ಸಂಕೇತ ಎಂದು ದೆಹಲಿಯ ರಾಜಪಥದ ಹೆಸರನ್ನು ಬದಲಾಯಿಸಿದ ಬಿಜೆಪಿ ಸರ್ಕಾರ, ಕೆಲವೇ ದಿನದಲ್ಲಿ ಬ್ರಿಟೀಷ್‌ ಗುಲಾಮಗಿರಿಗೆ ಇಳಿದಿದೆ” ಎಂದು ಸಾಮಾಜಿಕ ಹೋರಾಟಗಾರ್ತಿ ಕೌಶಲ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯುನೈಟೆಡ್ ಕಿಂಗ್‌ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ಉತ್ತರ ಐರ್ಲೆಂಡ್‌‌ನ ಹರ್ ಮೆಜೆಸ್ಟಿ ಕ್ವೀನ್‌ 2ನೇ ಎಲಿಜಬೆತ್ ಅವರು ಸೆಪ್ಟೆಂಬರ್ 8, 2022 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ” ಎಂದು ಒಕ್ಕೂಟ ಸರ್ಕಾರದ ಪತ್ರಿಕಾ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ದೀರ್ಘಾವಧಿ ಬ್ರಿಟನ್‌ ಆಳಿದ ರಾಣಿ 2ನೇ ಎಲಿಜಬೆತ್ ನಿಧನ

ರಾಣಿ 2ನೇ ಎಲಿಜಬೆತ್‌ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

“ಅವರು ನಮ್ಮ ಕಾಲದ ಧೀಮಂತ ಮಹಿಳೆಯಾಗಿದ್ದು, ಸಹಾನುಭೂತಿಯ ವ್ಯಕ್ತಿತ್ವ ಹೊಂದಿದ್ದರು. ಅವರ ರಾಷ್ಟ್ರ ಮತ್ತು ಜನರಿಗೆ ಸ್ಪೂರ್ತಿದಾಯಕ ನಾಯಕತ್ವವನ್ನು ಒದಗಿಸಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.

ಎಲಿಜಬೆತ್ ಅವರು ಬ್ರಿಟನ್‌ನ ದೀರ್ಘಾವಧಿಯಾಗಿ ಆಳಿದ ರಾಣಿಯಾಗಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ ರಾಜಮನೆತನದ ಸದಸ್ಯರು ಬಲ್ಮೋರಲ್‌ನಲ್ಲಿರುವ ಕುಟುಂಬದ ಬೇಸಿಗೆ ನಿವಾಸಕ್ಕೆ ಧಾವಿಸಿದ್ದರು. ಬಕಿಂಗ್ಹ್ಯಾಮ್ ಅರಮನೆಯು ಹೊಸ ರಾಜ ಚಾರ್ಲ್ಸ್ ಮತ್ತು ರಾಜಮನೆತನದ ಇತರ ಸದಸ್ಯರು ರಾಣಿಯ ಅಂತ್ಯಕ್ರಿಯೆಯ ನಂತರ ಏಳು ದಿನಗಳವರೆಗೆ ವಿಸ್ತೃತ ಶೋಕಾಚರಣೆಯನ್ನು ಆಚರಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ರಾಜ್ಯ ಮತ್ತು ಸರ್ಕಾರದ ಮುಖ್ಯಸ್ಥರು ಪಾಲ್ಗೊಳ್ಳುವ ಅಂತ್ಯಕ್ರಿಯೆಯ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. ಆದರೆ ಸೆಪ್ಟೆಂಬರ್ 19ರ ಸೋಮವಾರದಂದು ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...